ವಿಷಯಕ್ಕೆ ಹೋಗಿ

ಹಿಂದೂ-ಮುಸ್ಲಿಂರು ಸಹೋದರರೇ ಹೊರತು ಶತ್ರುಗಳಲ್ಲ

ಭಾರತದಲ್ಲಿನ ಎಲ್ಲಾ ಹಿಂದೂ ಧರ್ಮದವರು ಹಾಗೂ ಅಲ್ಪಸಂಖ್ಯಾತ ಧರ್ಮಗಳಲ್ಲಿ ಒಂದಾದ ಮುಸ್ಲಿಂ ಧರ್ಮದವರು ಸದಾಕಾಲ ಅಣ್ಣತಮ್ಮಂದಿರಂತೆ ಸಹೋದರತ್ವದ ಬಾಂಧ್ಯವ್ಯ ಹೊಂದಿದ್ದಾರೆ ಹೊರತು ಎಂದಿಗೂ ಶತ್ರುಗಳಲ್ಲ,ನಾವೆಲ್ಲಾ ಭಾರತೀಯರೆಂಬ ವಿಶಾಲ ಮನೋಭಾವ ಹೊಂದಿ ಬಾಳುತ್ತಿದ್ದಾರೆಂದು    ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್ ಅಭಿಪ್ರಾಯಪಟ್ಟರು.
        
ಸಿಂಗದಹಳ್ಳಿ ರಾಜ್ ಕುಮಾರ್ ಟಿಪ್ಪು ಭಾವಚಿತ್ರಕ್ಕೆ ಪುಷ್ಪ ಮಾಲಿಕೆ ಹಾಕಿ ಗೌರವಿಸಿದರು.
ಹುಳಿಯಾರಿನ ಟಿಫ್ಫು ಸುಲ್ತಾನ್ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಪುಣ್ಯತಿಥಿ ಸಮಾರಂಭದಲ್ಲಿ ಅವರು ಮಾತನಾಡಿದರು.

ಟಿಪ್ಪು ಅಪ್ರತಿಮ ದೇಶಭಕ್ತನಾಗಿದ್ದು ದೇಶಕ್ಕಾಗಿ ತನ್ನ ಪ್ರಾಣವನ್ನೆ ಅರ್ಪಣೆ ಮಾಡಿದ ಮಹಾನ್ ವ್ಯಕ್ತಿ.ಬ್ರಿಟೀಷರ ಅಧಿಕಾರಶಾಹಿ ಹಟ್ಟಹಾಸದ ವಿರುದ್ದ ಸಿಡಿದೆದ್ದ ಮುಸ್ಲಿಂ ನಾಯಕರಲ್ಲಿ ಪ್ರಮುಖ ಟಿಪ್ಪು. ಸಾಂಸ್ಕೃತಿಕ ನಗರಿ ಮೈಸೂರನ್ನು ಬ್ರಿಟೀಷರ ಅಧೀನಕ್ಕೆ ಕೊಡದೇ ಅವರ ವಿರುದ್ದ ಹಲವು ಯುದ್ದಗಳನ್ನು ಮಾಡಿ,ಆಂಗ್ಲರ ಸಂಚಿಗೆ ಬಲಿಯಾದ ವೀರ. ಮೈಸೂರ್ ಹುಲಿ ಎಂದೇ ದೇಶಾದ್ಯಂತೆ ಪ್ರಚುರವಾಗಿರುವ ಈತ ಕರ್ನಾಟಕದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾನೆ ಎಂದರು.

ದೇಶಕ್ಕಾಗಿ ಹೋರಾಟ ಮಾಡಿ ಅಳಿದ ದೇಶಭಕ್ತನ ಹೆಸರಲ್ಲಿ ಇಂದು ಕೇಂದ್ರ ಸರ್ಕಾರ ಮೈಸೂರಿನಲ್ಲಿ ಟಿಪ್ಪು ಸುಲ್ತಾನ್ ಹೆಸರನಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಮುಂದಾಗಿರುವುದು ದೇಶಭಕ್ತರಿಗೆ ಸಲ್ಲಿಸುವ ಗೌರವವಾಗಿದೆ.ಆದರೆ ಕೆಲ ನಾಯಕರು ಇದಕ್ಕೆ ಅವಕಾಶ ಕೊಡದೆ ಟಿಪ್ಪುವಿನ ಸಾಧನೆಯನ್ನೇ ಮರೆತು ಟಿಪ್ಪು ಒಬ್ಬ ಮುಸ್ಲಿಂ ಎಂಬ ಕಾರಣಕ್ಕೆ ವಿಶ್ವವಿದ್ಯಾಲಯದ ಸ್ಥಾಪನೆಗೆ ತೊಡರುಗಾಲಾಕುತ್ತಿರುವುದು ಸರಿಯಲ್ಲ ಎಂದರು. ಇಂತಹ ನಾಯಕರುಗಳ ವಿರುದ್ದ ಸರ್ಕಾರ ಸೂಕ್ತಕ್ರಮ ಕೈಗೊಳ್ಳಬೇಕಿದೆ. ಟಿಪ್ಪು ಹೆಸರಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಅಲ್ಲಿ ಅಭ್ಯಾಸ ಮಾಡುವವರಲ್ಲಿ ದೇಶಭಕ್ತಿ,ದೇಶಪ್ರೇಮದ ಗುಣಗಳ ಬೇಳವಣಿಗೆ ಹೆಚ್ಚಿನ ಅವಕಾಶವಿದ್ದು ,ಟಿಪ್ಪುವಿನಂತೆ ನಾವು ಆಗಬೇಕು,ದೇಶಕ್ಕಾಗಿ ತಾವು ಹೋರಾಡಬೇಕು ಎಂಬ ಮನೋಭಾವ ಚಿಗುರೊಡೆಯಲು ಸಹಕಾರಿಯಾಗುತ್ತದೆ ಇದನ್ನೆಲ್ಲಾ ಮನಗಂಡ ಸರ್ಕಾರ ಯಾವುದೇ ಅಡೆತಡೆಗಳನ್ನು ಲೆಕ್ಕಿಸದೇ ಟಿಪ್ಪು ಹೆಸರಿನಲ್ಲಿ ವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದರು.

ನಮ್ಮ ದೇಶದ ಎಲ್ಲಾ ಧರ್ಮ,ಜಾತಿಯವರು ಅಭಿವೃದ್ದಿಯ ದೃಷ್ಠಿಯಿಂದ ಸಂಘಗಳು, ಸಹಕಾರ ಬ್ಯಾಂಕ್ ಗಳನ್ನು ಸ್ಥಾಪಿಸಿಕೊಂಡು ಸಾಗುತ್ತಿರುವುದು ಸಂತಸದ ವಿಷಯವಾಗಿದ್ದು, ಅದರಲ್ಲೂ ಅಲ್ಪಸಂಖ್ಯಾತರಾಗಿ ಹಿಂದುಳಿದಿದ್ದ ಮುಸ್ಲಿಂರು ಸಂಘಗಳನ್ನು ಸ್ಥಾಪಿಸಿ ,ಸಾಲ ಸೌಲಭ್ಯ ನೀಡುವ ಮೂಲಕ ಆರ್ಥಿಕವಾಗಿ ಸಬಲರಾಗಲು ಮುಂದಾಗಿರುವುದು ದೇಶದ ಅಭಿವೃದ್ದಿಗೆ ಪೂರಕವಾಗಿದೆ ಎಂದರು. ಅಲ್ಲದೆ ಇಂತಹ ಅನೇಕ ಸಂಘಗಳಿದ್ದು ಅವುಗಳು ಉತ್ತಮವಾಗಿ ಬೆಳೆಯಬೇಕು ಅದಕ್ಕಾಗಿ ತಮ್ಮಿಂದ ಆಗುವಂತಹ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ಡಿ.ದೇವರಾಜು ಅರಸು ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಡಗಿರಾಮಣ್ಣ,ಟಿಫ್ಫು ಸುಲ್ತಾನ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಡಿ.ಫಯಾಜ್,ಉಪಾಧ್ಯಕ್ಷ ಅಪ್ಸರ್,ನಿರ್ದೇಶಕ ಇಮ್ರಾಜ್, ಟಿಪ್ಪು ಯುವಕ ಸಂಘದ ಅಧ್ಯಕ್ಷ ರಫೀಕ್,ಕಾರ್ಯದರ್ಶಿ ಸದ್ದಾಂ, ಶ್ರೀರಾಮಫೈನಾಸ್ಸ್ ನ ಚಂದ್ರಣ್ಣ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...