ವಿಷಯಕ್ಕೆ ಹೋಗಿ

ವೀರಶೈವ ಸಮುದಾಯದವರು ಸಮಾಜದ ಮುಖ್ಯವಾಹಿನಿಯಲ್ಲಿ ಹೆಚ್ಚು ಬಿಂಬಿತರಾಗಬೇಕು

ಪ್ರಸ್ತುತ ಸಮಾಜದಲ್ಲಿ ಎಲ್ಲಾ ಸಮುದಾಯದವರು ಸಂಘಟಿತರಾಗುವ ಮೂಲಕ ತಮ್ಮ ತಮ್ಮ ಸಮುದಾಯಗಳನ್ನು ಅಭಿವೃದ್ದಿಯತ್ತ ಕೊಂಡುಯ್ಯುತ್ತಿರುವ ಹಿನ್ನಲೆಯಲ್ಲಿ ವೀರಶೈವ ಸಮುದಾಯದ ನಾವುಗಳು ಮನೆಯಲ್ಲಿ ಕೂರದೆ ಸಂಘಟನೆಯಲ್ಲಿ ತೊಡಗಿ, ಸಮಾಜದ ಮುಖ್ಯವಾಹಿನಿಯಲ್ಲಿ ನಮ್ಮದೇ ಆದ ಹೆಚ್ಚಿನ ಛಾಪು ಮೂಡಿಸುವ ಕಾರ್ಯವಾಗಬೇಕಿದೆ ಎಂದು ಕೆಂಕೆರೆ ಬಸವಕೇಂದ್ರದ ಕೆ.ಎಂ.ಗಂಗಾಧರಯ್ಯ ಕರೆ ನೀಡಿದರು.
 
ಹುಳಿಯಾರು ಹೋಬಳಿ ವಿರಶೈವ ಸಮಾಜ ಹಾಗೂ ಬಸವೇಶ್ವರ ಪತ್ತಿನ ಸಹಕಾರ ಸಂಘದವತಿಯಿಂದ ಪಟ್ಟಣದ ವೀರಭದ್ರೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ವಿಶ್ವಗುರು ಶ್ರೀ ಬಸವೇಶ್ವರರ ಜಯಂತ್ಯೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.

ಕೆಂಕೆರೆ ಬಸವಕೇಂದ್ರದ ಕೆ.ಎಂ.ಗಂಗಾಧರಯ್ಯನವರಿಂದ ವಿಶೇಷ ಉಪನ್ಯಾಸ
ವೀರಶೈವ ಸಮುದಾಯದ ಜನ ಇಂದಿನ ಆಧುನಿಕ ಸಮಾಜದಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಹೆಚ್ಚಾಗಿ ಪಾಲ್ಗೊಳ್ಳದೇ ಹಿಂದೇಟಾಕುತ್ತಾ, ಇತರರಿಗೆ ವೀರಶೈವರಲ್ಲಿ ಒಗ್ಗಟ್ಟಿಲ್ಲವೇನೂ ಎನ್ನುವಂತೆ ಮಾಡುತ್ತಿರುವುದು ವಿಷಾದನೀಯ ಸಂಗತಿ ಎಂದರು. ಸಂಘಟಿತ ಮನೋಭಾವದ ಬಸವಣ್ಣನವರು ತಮ್ಮ ವಚನ ಸಾಹಿತ್ಯದ ಮೂಲಕ ಸಾಕಷ್ಟು ಜನರನ್ನು ಸಂಘಟಿಸಿ ಪ್ರಬುದ್ದಮಾನವಾಗಿ ಬೆಳೆದ ಮಹಾನ್ ವ್ಯಕ್ತಿ, ನಮ್ಮೆಲ್ಲರ ನಾಯಕನಾಗಿರುವಾಗಿ ಅವರ ಚಿಂತನೆ,ವಚನಗಳ ಸಾರವನ್ನು ಅರಿತು ಸಂಘಟಿತರಾಗಿ ಬಾಳಬೇಕಿದೆ ಎಂದರು.

ಲಿಂಗಧಾರಣೆ ಸಮಯದಲ್ಲಿ ಲಿಂಗದೀಕ್ಷೆ ಪಡೆದ ನಾವು ಬೆಳೆಯುತ್ತಾ ಇಷ್ಟಲಿಂಗವನ್ನೆ ತ್ಯಜಿಸಿ, ನಮ್ಮ ಸಮುದಾಯಕ್ಕೆ ಆಗೌರವ ಸೂಚಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಬಸವಣ್ಣ ಹಣ,ಐಶ್ವರ್ಯವನ್ನು ಕೇಳಿದವವನಲ್ಲ, ಆತ ಕೇಳುವುದು ಒಂದೇ ಅದು ಕಾಯಕ ಮಾಡುತ್ತಾ ಕೂಡಲಸಂಗಮ ದೇವನನ್ನು ಕಾಣವುದು. ಹನ್ನೆರಡನೇ ಶತಮಾನದಲ್ಲಿ ತಾಂಡವಾಡುತ್ತಿದ್ದ ಅನೇಕ ಸಾಮಾಜಿಕ ಸಮಸ್ಯೆಗಳನ್ನು ಮೂಢನಂಬಿಕೆಗಳನ್ನು ಸಮಾಜದಿಂದ ಕಿತ್ತೊಗೆಯುವ ಕೃಷಿ ಮಾಡುತ್ತಾ, ಎಲ್ಲಾ ಕುಲದವರು ಸಮಾನರು ಸಮಾಜದಲ್ಲಿ ಇರುವುದು ಎರಡೇ ಜಾತಿ ಅದು ಹೆಣ್ಣು-ಗಂಡು ಎಂದು ತಿಳಿಸಿದ ಬಸವಣ್ಣ ಸರ್ವಧರ್ಮ ಸಹಿಷ್ಣುವಾಗಿ,ಶಿವಶರಣರನ್ನೊ ಒಗ್ಗೂಡಿಸಿ ಅನುಭವ ಮಂಟಪದ ಸ್ಥಾಪನೆ ಮಾಡಿ ಜ್ಞಾನ ದಾಸೋಹ ಮಾಡುತ್ತಾ,ಕಾಯಕದ ಮೂಲಕ ಕೈಲಾಸವನ್ನು ಕಾಣುವ ಮಾರ್ಗವನ್ನು ತೋರಿಸಿದ ಕಾಯಕಯೋಗಿಯ ಸಂದೇಶಗಳು ಇಂದಿನ ಸಮಾಜದಲ್ಲಿ ಅಚ್ಚಳಿಯದೇ ಉಳಿದಿರುವುದು ವೀರಶೈವ ಕುಲದ ಹೆಮ್ಮೆಯೇ ಆಗಿದೆ ಎಂದರು.

ಕುಪ್ಪೂರು ಗದ್ದಿಗೆ ಸಂಸ್ಥಾನದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿಜೀಯವರ ಸಾನಿಧ್ಯದಲ್ಲಿ ನಡೆದ ಶ್ರೀ ಬಸವೇಶ್ವರರ ಜಯಂತ್ಯೋತ್ಸವದ ಉದ್ಘಾಟನೆಯನ್ನು ಜಿಲ್ಲಾ ಬಸವ ಸೇನೆಯ ಜಿಲ್ಲಾಧ್ಯಕ್ಷ ಗಂಗರಾಜು ನೆರವೇರಿಸಿದರು.ಜಿಲ್ಲಾ ಎಪಿಎಂಸಿ ಉಪಾಧ್ಯಕ್ಷ ಶಿವಕುಮಾರ್,ಪತ್ರಿಕಾ ಸಂಪಾದಕ ಸತೀಶ್, ವೀರಶೈವ ಸಮಾಜದ ಅಧ್ಯಕ್ಷ ಜಿ.ಎಂ.ನೀಲಕಂಠಯ್ಯ, ಕಾರ್ಯದರ್ಶಿ ಗಂಗಾಧರಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿಯವರಿಗೆ ಸನ್ಮಾನ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...