ವಿಷಯಕ್ಕೆ ಹೋಗಿ

ವೀರಶೈವ ಸಮುದಾಯದವರು ಸಮಾಜದ ಮುಖ್ಯವಾಹಿನಿಯಲ್ಲಿ ಹೆಚ್ಚು ಬಿಂಬಿತರಾಗಬೇಕು

ಪ್ರಸ್ತುತ ಸಮಾಜದಲ್ಲಿ ಎಲ್ಲಾ ಸಮುದಾಯದವರು ಸಂಘಟಿತರಾಗುವ ಮೂಲಕ ತಮ್ಮ ತಮ್ಮ ಸಮುದಾಯಗಳನ್ನು ಅಭಿವೃದ್ದಿಯತ್ತ ಕೊಂಡುಯ್ಯುತ್ತಿರುವ ಹಿನ್ನಲೆಯಲ್ಲಿ ವೀರಶೈವ ಸಮುದಾಯದ ನಾವುಗಳು ಮನೆಯಲ್ಲಿ ಕೂರದೆ ಸಂಘಟನೆಯಲ್ಲಿ ತೊಡಗಿ, ಸಮಾಜದ ಮುಖ್ಯವಾಹಿನಿಯಲ್ಲಿ ನಮ್ಮದೇ ಆದ ಹೆಚ್ಚಿನ ಛಾಪು ಮೂಡಿಸುವ ಕಾರ್ಯವಾಗಬೇಕಿದೆ ಎಂದು ಕೆಂಕೆರೆ ಬಸವಕೇಂದ್ರದ ಕೆ.ಎಂ.ಗಂಗಾಧರಯ್ಯ ಕರೆ ನೀಡಿದರು.
 
ಹುಳಿಯಾರು ಹೋಬಳಿ ವಿರಶೈವ ಸಮಾಜ ಹಾಗೂ ಬಸವೇಶ್ವರ ಪತ್ತಿನ ಸಹಕಾರ ಸಂಘದವತಿಯಿಂದ ಪಟ್ಟಣದ ವೀರಭದ್ರೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ವಿಶ್ವಗುರು ಶ್ರೀ ಬಸವೇಶ್ವರರ ಜಯಂತ್ಯೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.

ಕೆಂಕೆರೆ ಬಸವಕೇಂದ್ರದ ಕೆ.ಎಂ.ಗಂಗಾಧರಯ್ಯನವರಿಂದ ವಿಶೇಷ ಉಪನ್ಯಾಸ
ವೀರಶೈವ ಸಮುದಾಯದ ಜನ ಇಂದಿನ ಆಧುನಿಕ ಸಮಾಜದಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಹೆಚ್ಚಾಗಿ ಪಾಲ್ಗೊಳ್ಳದೇ ಹಿಂದೇಟಾಕುತ್ತಾ, ಇತರರಿಗೆ ವೀರಶೈವರಲ್ಲಿ ಒಗ್ಗಟ್ಟಿಲ್ಲವೇನೂ ಎನ್ನುವಂತೆ ಮಾಡುತ್ತಿರುವುದು ವಿಷಾದನೀಯ ಸಂಗತಿ ಎಂದರು. ಸಂಘಟಿತ ಮನೋಭಾವದ ಬಸವಣ್ಣನವರು ತಮ್ಮ ವಚನ ಸಾಹಿತ್ಯದ ಮೂಲಕ ಸಾಕಷ್ಟು ಜನರನ್ನು ಸಂಘಟಿಸಿ ಪ್ರಬುದ್ದಮಾನವಾಗಿ ಬೆಳೆದ ಮಹಾನ್ ವ್ಯಕ್ತಿ, ನಮ್ಮೆಲ್ಲರ ನಾಯಕನಾಗಿರುವಾಗಿ ಅವರ ಚಿಂತನೆ,ವಚನಗಳ ಸಾರವನ್ನು ಅರಿತು ಸಂಘಟಿತರಾಗಿ ಬಾಳಬೇಕಿದೆ ಎಂದರು.

ಲಿಂಗಧಾರಣೆ ಸಮಯದಲ್ಲಿ ಲಿಂಗದೀಕ್ಷೆ ಪಡೆದ ನಾವು ಬೆಳೆಯುತ್ತಾ ಇಷ್ಟಲಿಂಗವನ್ನೆ ತ್ಯಜಿಸಿ, ನಮ್ಮ ಸಮುದಾಯಕ್ಕೆ ಆಗೌರವ ಸೂಚಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಬಸವಣ್ಣ ಹಣ,ಐಶ್ವರ್ಯವನ್ನು ಕೇಳಿದವವನಲ್ಲ, ಆತ ಕೇಳುವುದು ಒಂದೇ ಅದು ಕಾಯಕ ಮಾಡುತ್ತಾ ಕೂಡಲಸಂಗಮ ದೇವನನ್ನು ಕಾಣವುದು. ಹನ್ನೆರಡನೇ ಶತಮಾನದಲ್ಲಿ ತಾಂಡವಾಡುತ್ತಿದ್ದ ಅನೇಕ ಸಾಮಾಜಿಕ ಸಮಸ್ಯೆಗಳನ್ನು ಮೂಢನಂಬಿಕೆಗಳನ್ನು ಸಮಾಜದಿಂದ ಕಿತ್ತೊಗೆಯುವ ಕೃಷಿ ಮಾಡುತ್ತಾ, ಎಲ್ಲಾ ಕುಲದವರು ಸಮಾನರು ಸಮಾಜದಲ್ಲಿ ಇರುವುದು ಎರಡೇ ಜಾತಿ ಅದು ಹೆಣ್ಣು-ಗಂಡು ಎಂದು ತಿಳಿಸಿದ ಬಸವಣ್ಣ ಸರ್ವಧರ್ಮ ಸಹಿಷ್ಣುವಾಗಿ,ಶಿವಶರಣರನ್ನೊ ಒಗ್ಗೂಡಿಸಿ ಅನುಭವ ಮಂಟಪದ ಸ್ಥಾಪನೆ ಮಾಡಿ ಜ್ಞಾನ ದಾಸೋಹ ಮಾಡುತ್ತಾ,ಕಾಯಕದ ಮೂಲಕ ಕೈಲಾಸವನ್ನು ಕಾಣುವ ಮಾರ್ಗವನ್ನು ತೋರಿಸಿದ ಕಾಯಕಯೋಗಿಯ ಸಂದೇಶಗಳು ಇಂದಿನ ಸಮಾಜದಲ್ಲಿ ಅಚ್ಚಳಿಯದೇ ಉಳಿದಿರುವುದು ವೀರಶೈವ ಕುಲದ ಹೆಮ್ಮೆಯೇ ಆಗಿದೆ ಎಂದರು.

ಕುಪ್ಪೂರು ಗದ್ದಿಗೆ ಸಂಸ್ಥಾನದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿಜೀಯವರ ಸಾನಿಧ್ಯದಲ್ಲಿ ನಡೆದ ಶ್ರೀ ಬಸವೇಶ್ವರರ ಜಯಂತ್ಯೋತ್ಸವದ ಉದ್ಘಾಟನೆಯನ್ನು ಜಿಲ್ಲಾ ಬಸವ ಸೇನೆಯ ಜಿಲ್ಲಾಧ್ಯಕ್ಷ ಗಂಗರಾಜು ನೆರವೇರಿಸಿದರು.ಜಿಲ್ಲಾ ಎಪಿಎಂಸಿ ಉಪಾಧ್ಯಕ್ಷ ಶಿವಕುಮಾರ್,ಪತ್ರಿಕಾ ಸಂಪಾದಕ ಸತೀಶ್, ವೀರಶೈವ ಸಮಾಜದ ಅಧ್ಯಕ್ಷ ಜಿ.ಎಂ.ನೀಲಕಂಠಯ್ಯ, ಕಾರ್ಯದರ್ಶಿ ಗಂಗಾಧರಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿಯವರಿಗೆ ಸನ್ಮಾನ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...