ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಶಾಂತಿಯುತ ಮತದಾನ : ಮಧಾಹ್ನದ ನಂತರ ಮತದಾನದಲ್ಲಿ ಚುರುಕು

                  ಚಿ.ನಾ.ಹಳ್ಳಿ ಕ್ಷೇತ್ರದ ವಿಧಾನಸಭಾ ಚುನಾವಣೆ ಭಾನುವಾರ ನಡೆದಿದ್ದು, ಹೋಬಳಿ ವ್ಯಾಪ್ತಿಯಲ್ಲಿ ಯಾವುದೇ ಘರ್ಷಣೆ,ಗದ್ದಲ ನಡೆಯದೆ ಶಾಂತಿಯುತವಾಗಿ ಮತದಾನ ನಡೆದಿದ್ದು, ಹುಳಿಯಾರು ಹೋಬಳಿಯಾದ್ಯಂತ ಶಾಂತಿಯುತ ಮತದಾನ ನಡೆದಿದೆ.ಮುಂಜಾನೆ 7 ರಿಂದ ಮತದಾನ ಆರಂಭವಾದ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಮಧ್ಯಾಹ್ನದ ಉರಿ ಬಿಸಿಲು ಅರಿತು ಮತದಾರರು ಬೆಳಿಗ್ಗೆ ಮತದಾನ ಕೇಂದ್ರದ ಮುಂದೆ ನೀಂತಿದ್ದು ಕಂಡುಬಂತು ಮಧಾಹ್ನ ಒಂದು ಗಂಟೆ ವೇಳೆಗೆ ಶೇ.50 ರಷ್ಟು ಮತದಾನ ವಾಗಿತ್ತು. ಉಳಿದಂತೆ ನಿರಸ ಮತದಾನ ನಡೆದು ಮತ್ತೆ ಸಂಜೆ ವೇಳೆಗೆ ಮತದಾರರು ಮತಕೇಂದ್ರಕ್ಕೆ ಬರಲಾರಂಭಿಸಿದ್ದು ಪುನ: ಮತದಾನ ಚುರುಕುಗೊಂಡಿತ್ತು. ಮತ ಚಲಾಯಿಸಲು ವಯೋವೃದ್ದರು,ವಿಕಲಚೇತನರು,ಮಹಿಳೆಯರು,ಪುರುಷ ಮತದಾರರು ಬರುತ್ತಿದ್ದರು. ಪಟ್ಟಣದ ಕೆಲ ಮತಗಟ್ಟೆಗಳಲ್ಲಿ ಸರದಿಯಲ್ಲಿ ನಿಂತು ಜನ ಮತಚಲಾಯಿಸಿದೆ, ಇನ್ನುಳಿದ ಮತಗಟ್ಟೆಗಳಲ್ಲಿ ಜನ ವಿರಳವಾಗಿದ್ದು ಕಂಡುಬಂತು.
ಹುಳಿಯಾರಿನ ಮತಕೇಂದ್ರದಲ್ಲಿ ಮತಚಲಾಯಿಸಲು ಸರದಿ ಸಾಲಿನಲ್ಲಿ ನಿಂತ ಮಹಿಳೆಯರು.
                   ಹುಳಿಯಾರು ಹೋಬಳಿಯಲ್ಲಿ 11 ಸಾವಿರ ಮತದಾರರಿದ್ದು 13 ಮತಗಟ್ಟೆಗಳನ್ನು ಎಂಪಿಎಸ್ ಶಾಲೆ ಹಾಗೂ ಉರ್ದು ಶಾಲೆ,ಸೋಮಜ್ಜನ ಪಾಳ್ಯ,ಹುಳಿಯಾರು-ಕೆಂಕೆರೆ ಪ್ರೌಢಶಾಲೆಯಲ್ಲಿ ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಹೋಬಳಿ ವ್ಯಾಪ್ತಿಯ ಕೆಂಕೆರೆ,ತಿರುಮಲಾಪುರ,ಯಳನಡು,ಗಾಣಧಾಳು,ಬರಕನಹಾಲ್,ಕೋರಗೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಗಳಲ್ಲಿಯೂ ಸಹ ಶಾಂತಿಯುತ ಮತದಾನ ನಡೆದಿದ್ದು. ಆಯೋಗವು ಮತದಾರರ ಗುರುತಿನ ಚೀಟಿಗಳನ್ನು ಮತದಾರರ ಮನೆಗಳಿಗೆ ತಲುಪಿಸಿರುವುದರಿಂದ ಮತದಾರರು ತಮ್ಮ ಮತಗಟ್ಟೆ ಕೇಂದ್ರಗಳನ್ನು ಹುಡುಕುವ ಗೊಂದಲವಿಲ್ಲದೆ ಮತಚಲಾಯಿಸಿದರು. ಬೆಳಿಗ್ಗೆ ಸುಡು ಬಿಸಿಲಿನಲ್ಲಿ ಬಂದು ಜನ ಮತಚಲಾಯಿಸಿದರೆ, ಮಧಾಹ್ನ 2 ಗಂಟೆ ಸುಮಾರಿನಲ್ಲಿ ಸುರಿದ ತುಂತುರು ಮಳೆಯಲ್ಲಿ ಕೊಡೆಯಿಡಿದು ಬಂದು ಮತಚಲಾಯಿಸಲು ಮುಂದಾಗಿದ್ದರು. ನಂತರ ಮತದಾನ ಚುರುಕುಗೊಂಡು ಸಂಜೆ ವರೆವಿಗೂ ಜನ ಬಂದು ಮತಚಲಾಯಿಸಿದರು.

ಬಿಜೆಪಿ ಅಭ್ಯರ್ಥಿ ಕೆ.ಎಸ್.ಕಿರಣ್ ಕುಮಾರ್ ಹುಳಿಯಾರಿನ 35ನೇ ಮತಗಟ್ಟೆಯಲ್ಲಿ ಮತಚಲಾಯಿಸಿದರೆ,ರೈತಸಂಘದ ಅಭ್ಯರ್ಥಿ ಕೆಂಕೆರೆ ಸತೀಶ್ ಕೆಂಕೆರೆಯ ಮತಗಟ್ಟೆಯ ಮತ ಕೇಂದ್ರದಲ್ಲಿ ಮತಚಲಾಯಿಸಿದರು.ಕೆಂಕೆರೆ ಮತಗಟ್ಟೆಯಲ್ಲಿ ತಾ.ಪಂ.ಸದಸ್ಯ ನವೀನ್,ಗಂಗಣ್ಣ,ಮಂಜುನಾಥ್ ಮೊದಲು ಮತಚಲಾಯಿಸಿದ್ದಾರೆ.

ಅಂಗವಿಕಲೆಯೊಬ್ಬಳು ತನ್ನ ತಾಯಿಯ ಸಹಾಯದೊಂದಿಗೆ ಮತಚಲಾಯಿಸಿ ತೆರಳುತ್ತಿರುವುದು.
ಮತದಾನ ಕೇಂದ್ರಗಳ ಸಮೀಪ ರಾಜಕೀಯ ಪಕ್ಷದ ಕಾರ್ಯಕರ್ತರು ಮತದಾರರನ್ನು ಓಲೈಸುವ ಕಾರ್ಯಕ್ಕೆ ನಿರ್ಭಂದ ಹೇರಿದ್ದು.ಮತದಾನ ಕೇಂದ್ರದ ಸನಿಹದಲ್ಲಿ ಯಾವುದೇ ಗೊಂದಲ,ಘರ್ಷಣೆಯ ವಾತಾವರಣ ಸೃಷ್ಠಿಯಾಗಲು ಅವಕಾಶಕ್ಕೆ ಎಡೆಯಗಲಿಲ್ಲ. ಚುನಾವಣಾ ಆಯೋಗವು ಪ್ರಸ್ತುತ ಕೈಗೊಂಡಿರುವ ನಿಯಮಗಳು ಹಾಗೂ ಚುನಾವಣಾ ಕ್ರಮಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಮುಂಬರುವ ಚುನಾವಣೆಗಳಲ್ಲಿ ಇದಕ್ಕಿಂತ ಇನ್ನೂ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿ ನೆಲೆಯೂರುವಂತಾಗಬೇಕೆಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.ಮತದಾನ ಶಾಂತಿಯುತವಾಗಿ ನಡೆಯಲು ಬಿಗಿ ಭದ್ರತೆ ನಿಯೋಜಿಸಿಸಲಾಗಿತ್ತು.ಕಣದಲ್ಲಿರುವ 11 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರವಾಗಿದ್ದು,ಮತದಾರರ ಒಲವು ಯಾರಿಗೆ ವ್ಯಕ್ತವಾಗಿದೆ,ಮತಾಧೀಶನ ನಿಲುವೇನೆಂದು ಅರಿಯಲು,ಫಲಿತಾಂಶಕ್ಕಾಗಿ ಕಾಯಬೇಕಿದ್ದು,ಇನ್ನೂ ಮೂರುದಿನದಲ್ಲಿ ಫಲಿತಾಂಶ ಹೊರಬೀಳಲಿದೆ.
ಹುಳಿಯಾರಿನ ಎಂಪಿಎಸ್ ಶಾಲೆಯ ಮತಕೇಂದ್ರವೊಂದರಲ್ಲಿ ತನ್ನ ಮತ ಚಲಾಯಿಸಿ ಹೊರ ಬರುತ್ತಿರುವ ವಯೋವೃದ್ದ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...