ಚಿಕ್ಕನಾಯಕನಹಳ್ಳಿ ಉಪಕೃಷಿಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ತಾ.27ರ ಗುರುವಾರದಿಂದ ಹೆಚ್ಚುವರಿ ನಫೆಡ್ ಕೊಬ್ಬರಿ ಖರೀದಿಕೇಂದ್ರ ಪ್ರಾರಂಭಗೊಳ್ಳಲಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ಕೊಬ್ಬರಿಯನ್ನು ಖರೀದಿಸಲು ಸರ್ಕಾರ ಮುಂದಾಗಿದ್ದು,ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಬೆಂಬಲಬೆಲೆ 5500ರೂ ಮತ್ತು ಸಹಾಯಧನ 1000ರೂ ನಂತೆ ಖರೀದಿ ನಡೆಯಲಿದೆ. ಈಗಾಗಲೇ ಸೆಪ್ಟಂಬರ್ ತಿಂಗಳವರೆಗೆ ಕೊಬ್ಬರಿ ಬಿಡಲು ರೈತರಿಗೆ ದಾಸ್ತಾನು ತರುವ ದಿನಾಂಕಕ್ಕೆ ಟೋಕನನ್ನು ನಫೆಡ್ ಅಧಿಕಾರಿಗಳು ನೀಡಿದ್ದು, ತಾಲ್ಲೂಕಿನ ಎಲ್ಲಾ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೊಬ್ಬರಿಯನ್ನು ಖರೀದಿಕೇಂದ್ರದಲ್ಲಿ ಮಾರಾಟ ಮಾಡಿಕೊಳ್ಳುವಂತೆ ಎಪಿಎಂಸಿ ಅಧ್ಯಕ್ಷ ಶಿವರಾಜ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070