ವಿಷಯಕ್ಕೆ ಹೋಗಿ

ಜೂ.14: ವಿಶ್ವ ರಕ್ತದಾನಿಗಳ ದಿನ:ದಶಮಾನೋತ್ಸವ ಸಂಭ್ರಮ

ಪ್ರಾಣಾಪಾಯದ ಸ್ಥಿತಿಯಲ್ಲಿರುವವರನ್ನು ಬದುಕಿಸಲು ನೀವು ವೈದ್ಯರೇ ಆಗಿರಬೇಕಿಲ್ಲ. ನೀವು ಸ್ವಯಂಪ್ರೇರಿತವಾಗಿ ನೀಡುವ ಒಂದು ಯೂನಿಟ್‌ ರಕ್ತವು, ಮೂರು ವ್ಯಕ್ತಿಗಳ ಜೀವವನ್ನು ಉಳಿಸಬಲ್ಲದು. ಆದುದರಿಂದ ಎಲ್ಲಾ ದಾನಗಳಿಗಿಂತ ಮಿಗಿಲಾದ ಹಾಗೂ ಸಾವಿನ ದವಡೆಗಳಲ್ಲಿ ಸಿಲುಕಿರುವವರನ್ನು ಬದುಕಿಸಬಲ್ಲ ಮತ್ತು ಅತ್ಯಂತ ಶ್ರೇಷ್ಠವಾದ ದಾನವಾದ ರಕ್ತದಾನವನ್ನು ಇಂದೇ ಮಾಡಿರಿ.
 
ಕಾರ್ಲ್ ಲ್ಯಾಂಡ್‌ ಸ್ತ್ರೈನೆರ್ ನಾಮಾಂಕಿತ ವೈದ್ಯ ಹಾಗೂ ಬಯಾಲಜಿಸ್ಟ್‌ ಇವರ ಜನ್ಮದಿನವನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಆಧುನಿಕ ರಕ್ತಪೂರಣದ ಅನ್ವೇಷಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿರುವ ಈ ವೈದ್ಯರು, 1901ರಲ್ಲಿ ರಕ್ತದ ಎ ಬಿ ಒ ಗುಂಪುಗಳನ್ನು ಪತ್ತೆಹಚ್ಚಿದ ಹಾಗೂ ಆಧುನಿಕ ಪದ್ಧತಿಯ ಪ್ರಭೇದಗಳನ್ನು ಅಭಿವೃದ್ಧಿಪಡಿಸಿದ ಸಂಶೋಧಕರೂ ಹೌದು. 1937ರಲ್ಲಿ ಅಲೆಕ್ಸಾಂಡರ್‌ ವೈನರ್‌ ಎನ್ನುವ ಸಂಶೋಧಕರೊಂದಿಗೆ "ರೀಸಸ್‌ ಫ್ಯಾಕ್ಟರ್‌' ಎನ್ನುವ ಅಂಶವನ್ನು ಗುರುತಿಸುವ ಮೂಲಕ, ರೋಗಿಯ ಪ್ರಾಣಕ್ಕೆ ಯಾವುದೇ ಅಪಾಯ ಸಂಭವಿಸದಂತೆ ರಕ್ತಪೂರಣವನ್ನು ಮಾಡಲು ಕಾರಣಕರ್ತರೆನಿಸಿದ್ದರು.ಈ ವೈದ್ಯರ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ, ಇವರ ಜನ್ಮದಿನವನ್ನು ರಕ್ತದಾನಿಗಳ ದಿನವನ್ನಾಗಿ ಆಚರಿಸುವ. ಮೂಲಕ ಗೌರವಿಸಲಾಗಿದೆ.

ವಿಶ್ವ ರಕ್ತದಾನಿಗಳ ದಿನವನ್ನು ಜೂನ್‌ 14, 2004ರಂದು ಮೊತ್ತ ಮೊದಲ ಬಾರಿಗೆ ಆಚರಿಸಲಾಗಿತ್ತು. ಇಂದಿಗೆ ಹತ್ತು ವರ್ಷಗಳಾಗಿದ್ದು ವಿಶ್ವ ರಕ್ತದಾನಿಗಳ ದಿನದ ದಶಮಾನೋತ್ಸವವನ್ನು ಇಂದೇ ರಕ್ತದಾನ ಮಾಡುವ ಮೂಲಕ ಆಚರಿಸಿ. "ಜೀವ'ದ ಕೊಡುಗೆಯನ್ನು ನೀಡಿ, ರಕ್ತದಾನ ಮಾಡಿ ಎನ್ನುವ ಘೋಷಣೆ _ಯನ್ನು ಸಾಕಾರಗೊಳಿಸಿ.
ದಾನಿಗಳ-ರಕ್ತದ ಕೊರತೆ: ವಿಶ್ವಾದ್ಯಂತ ರಕ್ತದ ಬೇಡಿಕೆ ಮತ್ತು ಪೂರೈಕೆಯ ನಡುವೆ ಅಗಾಧ ಪ್ರಮಾಣದ ಅಂತರವಿದೆ. ನಮ್ಮ ದೇಶದಲ್ಲಿ ವರ್ಷಂಪ್ರತಿ ಸುಮಾರು ನಾಲ್ಕು ಕೋಟಿ ಯೂನಿಟ್‌ ರಕ್ತದ ಬೇಡಿಕೆಯಿದ್ದರೂ, ಪೂರೈಕೆಯ ಪ್ರಮಾಣವು ಕೇವಲ 40 ಲಕ್ಷ ಯೂನಿಟ್‌ಗಳಾಗಿವೆ. ತತ್ಪರಿಣಾಮವಾಗಿ ತುರ್ತು ಪರಿಸ್ಥಿತಿಯಲ್ಲಿ ಆವಶ್ಯಕ ಪ್ರಮಾಣದ ರಕ್ತ ಪೂರಣವಾಗದೇ, ಲಕ್ಷಾಂತರ ಜನರು ಅಕಾಲಿಕ ಮರಣಕ್ಕೆ ಈಡಾಗುತ್ತಾರೆ. ಈ ಗಂಭೀರ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆಯು ಹಲವಾರು ಅಂತಾರಾಷ್ಟ್ರೀಯ ಸಂಘಟನೆಗಳ ಸಹಕಾರದೊಂದಿಗೆ, ಸ್ವಯಂಪ್ರೇರಿತ ರಕ್ತದಾನವನ್ನು ಪ್ರೋತ್ಸಾಹಿಸುವ ಸಲುವಾಗಿ ವಿಶ್ವ ರಕ್ತ ದಾನಿಗಳ ದಿನವನ್ನು ವರ್ಷಂಪ್ರತಿ ಆಚರಿಸುತ್ತಿದೆ.
ನಿಮಗಿದು ತಿಳಿದಿರಲಿ: ನಿಮಗೆ 18 ವರ್ಷ ವಯಸ್ಸಾದಂದಿನಿಂದ 60ನೇ ವಯಸ್ಸಿನ ತನಕ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ರಕ್ತದಾನ ಮಾಡುತ್ತಿದ್ದಲ್ಲಿ, 500ಕ್ಕೂ ಅಧಿಕ ಜನರ ಪ್ರಾಣಗಳನ್ನು ಉಳಿಸಬಹುದಾಗಿದೆ. ನಿಯಮಿತವಾಗಿ ರಕ್ತವನ್ನು ನೀಡುವ ಮೂಲಕ ನಿಮ್ಮ ಆರೋಗ್ಯದ ಮಟ್ಟವನ್ನು ಉನ್ನತ ಸ್ತರದಲ್ಲಿ ಕಾಪಾಡಿಕೊಳ್ಳಬಹುದಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...