ವಿಷಯಕ್ಕೆ ಹೋಗಿ

ಜೂ.14: ವಿಶ್ವ ರಕ್ತದಾನಿಗಳ ದಿನ:ದಶಮಾನೋತ್ಸವ ಸಂಭ್ರಮ

ಪ್ರಾಣಾಪಾಯದ ಸ್ಥಿತಿಯಲ್ಲಿರುವವರನ್ನು ಬದುಕಿಸಲು ನೀವು ವೈದ್ಯರೇ ಆಗಿರಬೇಕಿಲ್ಲ. ನೀವು ಸ್ವಯಂಪ್ರೇರಿತವಾಗಿ ನೀಡುವ ಒಂದು ಯೂನಿಟ್‌ ರಕ್ತವು, ಮೂರು ವ್ಯಕ್ತಿಗಳ ಜೀವವನ್ನು ಉಳಿಸಬಲ್ಲದು. ಆದುದರಿಂದ ಎಲ್ಲಾ ದಾನಗಳಿಗಿಂತ ಮಿಗಿಲಾದ ಹಾಗೂ ಸಾವಿನ ದವಡೆಗಳಲ್ಲಿ ಸಿಲುಕಿರುವವರನ್ನು ಬದುಕಿಸಬಲ್ಲ ಮತ್ತು ಅತ್ಯಂತ ಶ್ರೇಷ್ಠವಾದ ದಾನವಾದ ರಕ್ತದಾನವನ್ನು ಇಂದೇ ಮಾಡಿರಿ.
 
ಕಾರ್ಲ್ ಲ್ಯಾಂಡ್‌ ಸ್ತ್ರೈನೆರ್ ನಾಮಾಂಕಿತ ವೈದ್ಯ ಹಾಗೂ ಬಯಾಲಜಿಸ್ಟ್‌ ಇವರ ಜನ್ಮದಿನವನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಆಧುನಿಕ ರಕ್ತಪೂರಣದ ಅನ್ವೇಷಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿರುವ ಈ ವೈದ್ಯರು, 1901ರಲ್ಲಿ ರಕ್ತದ ಎ ಬಿ ಒ ಗುಂಪುಗಳನ್ನು ಪತ್ತೆಹಚ್ಚಿದ ಹಾಗೂ ಆಧುನಿಕ ಪದ್ಧತಿಯ ಪ್ರಭೇದಗಳನ್ನು ಅಭಿವೃದ್ಧಿಪಡಿಸಿದ ಸಂಶೋಧಕರೂ ಹೌದು. 1937ರಲ್ಲಿ ಅಲೆಕ್ಸಾಂಡರ್‌ ವೈನರ್‌ ಎನ್ನುವ ಸಂಶೋಧಕರೊಂದಿಗೆ "ರೀಸಸ್‌ ಫ್ಯಾಕ್ಟರ್‌' ಎನ್ನುವ ಅಂಶವನ್ನು ಗುರುತಿಸುವ ಮೂಲಕ, ರೋಗಿಯ ಪ್ರಾಣಕ್ಕೆ ಯಾವುದೇ ಅಪಾಯ ಸಂಭವಿಸದಂತೆ ರಕ್ತಪೂರಣವನ್ನು ಮಾಡಲು ಕಾರಣಕರ್ತರೆನಿಸಿದ್ದರು.ಈ ವೈದ್ಯರ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ, ಇವರ ಜನ್ಮದಿನವನ್ನು ರಕ್ತದಾನಿಗಳ ದಿನವನ್ನಾಗಿ ಆಚರಿಸುವ. ಮೂಲಕ ಗೌರವಿಸಲಾಗಿದೆ.

ವಿಶ್ವ ರಕ್ತದಾನಿಗಳ ದಿನವನ್ನು ಜೂನ್‌ 14, 2004ರಂದು ಮೊತ್ತ ಮೊದಲ ಬಾರಿಗೆ ಆಚರಿಸಲಾಗಿತ್ತು. ಇಂದಿಗೆ ಹತ್ತು ವರ್ಷಗಳಾಗಿದ್ದು ವಿಶ್ವ ರಕ್ತದಾನಿಗಳ ದಿನದ ದಶಮಾನೋತ್ಸವವನ್ನು ಇಂದೇ ರಕ್ತದಾನ ಮಾಡುವ ಮೂಲಕ ಆಚರಿಸಿ. "ಜೀವ'ದ ಕೊಡುಗೆಯನ್ನು ನೀಡಿ, ರಕ್ತದಾನ ಮಾಡಿ ಎನ್ನುವ ಘೋಷಣೆ _ಯನ್ನು ಸಾಕಾರಗೊಳಿಸಿ.
ದಾನಿಗಳ-ರಕ್ತದ ಕೊರತೆ: ವಿಶ್ವಾದ್ಯಂತ ರಕ್ತದ ಬೇಡಿಕೆ ಮತ್ತು ಪೂರೈಕೆಯ ನಡುವೆ ಅಗಾಧ ಪ್ರಮಾಣದ ಅಂತರವಿದೆ. ನಮ್ಮ ದೇಶದಲ್ಲಿ ವರ್ಷಂಪ್ರತಿ ಸುಮಾರು ನಾಲ್ಕು ಕೋಟಿ ಯೂನಿಟ್‌ ರಕ್ತದ ಬೇಡಿಕೆಯಿದ್ದರೂ, ಪೂರೈಕೆಯ ಪ್ರಮಾಣವು ಕೇವಲ 40 ಲಕ್ಷ ಯೂನಿಟ್‌ಗಳಾಗಿವೆ. ತತ್ಪರಿಣಾಮವಾಗಿ ತುರ್ತು ಪರಿಸ್ಥಿತಿಯಲ್ಲಿ ಆವಶ್ಯಕ ಪ್ರಮಾಣದ ರಕ್ತ ಪೂರಣವಾಗದೇ, ಲಕ್ಷಾಂತರ ಜನರು ಅಕಾಲಿಕ ಮರಣಕ್ಕೆ ಈಡಾಗುತ್ತಾರೆ. ಈ ಗಂಭೀರ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆಯು ಹಲವಾರು ಅಂತಾರಾಷ್ಟ್ರೀಯ ಸಂಘಟನೆಗಳ ಸಹಕಾರದೊಂದಿಗೆ, ಸ್ವಯಂಪ್ರೇರಿತ ರಕ್ತದಾನವನ್ನು ಪ್ರೋತ್ಸಾಹಿಸುವ ಸಲುವಾಗಿ ವಿಶ್ವ ರಕ್ತ ದಾನಿಗಳ ದಿನವನ್ನು ವರ್ಷಂಪ್ರತಿ ಆಚರಿಸುತ್ತಿದೆ.
ನಿಮಗಿದು ತಿಳಿದಿರಲಿ: ನಿಮಗೆ 18 ವರ್ಷ ವಯಸ್ಸಾದಂದಿನಿಂದ 60ನೇ ವಯಸ್ಸಿನ ತನಕ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ರಕ್ತದಾನ ಮಾಡುತ್ತಿದ್ದಲ್ಲಿ, 500ಕ್ಕೂ ಅಧಿಕ ಜನರ ಪ್ರಾಣಗಳನ್ನು ಉಳಿಸಬಹುದಾಗಿದೆ. ನಿಯಮಿತವಾಗಿ ರಕ್ತವನ್ನು ನೀಡುವ ಮೂಲಕ ನಿಮ್ಮ ಆರೋಗ್ಯದ ಮಟ್ಟವನ್ನು ಉನ್ನತ ಸ್ತರದಲ್ಲಿ ಕಾಪಾಡಿಕೊಳ್ಳಬಹುದಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...