ವಿಷಯಕ್ಕೆ ಹೋಗಿ

ಸುಖಸಂಸಾರಕ್ಕೆ ಉತ್ತಮ ಸಂಸ್ಕಾರದ ಬೆಳವಣಿಗೆ ಅಗತ್ಯ ; ಸ್ವಾಮೀಜಿ

ಗೋಡೆಕೆರೆ ಶ್ರೀ ಮೃತ್ಯುಂಜಯ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಚನ
ಆಧುನಿಕ ಜಗತ್ತಿನಲ್ಲಿ ಅನೇಕ ಮಕ್ಕಳು ತಂದೆ ತಾಯಿ,ಪೋಷಕರ ಸಂಬಂಧವನ್ನೆ ಧಿಕ್ಕರಿಸಿ ಹೆತ್ತವರನ್ನು ತೊರೆದು ತಮ್ಮಿಷ್ಟದಂತೆ ಮದುವೆಯಾಗಿ ಸಂಸಾರ ನಡೆಸಲು ಮುಂದಾಗುತ್ತಿದ್ದು, ಸಂಸಾರದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಹಿರಿಯರ ಮಾರ್ಗದರ್ಶನದಂತೆ ವಿವಾಹವಾಗಿ ಸಂಸಾರದಲ್ಲಿ ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡರೆ ಜೀವನ ಸುಖಮಯವಾಗಿರುತ್ತದೆಂದು ಗೋಡೆಕೆರೆ ಶ್ರೀ ಮೃತ್ಯುಂಜಯ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದರು.
ಹುಳಿಯಾರಿನ ರೋಟರಿಸಂಸ್ಥೆ ಹಾಗೂ ರೋಟರಿ ಕಮ್ಯೂನಿಟಿ ಕಾರ್ಪ್ಸ್ ಅವರ ಸಹಯೋಗದಲ್ಲಿ ಪಟ್ಟಣದ ಶ್ರೀಪ್ರಸನ್ನ ಗಣಪತಿ ದೇವಾಲಯದಲ್ಲಿ ಭಾನುವಾರ ನಡೆದ 30ನೇಉಚಿತ ಸಾಮೂಹಿಕ ವಿವಾಹಮಹೋತ್ಸವದಲ್ಲಿ ನೂತನ ವಧುವರರನ್ನು ಕುರಿತಂತೆ ಆಶೀರ್ವಚನ ನೀಡಿದರು.

ಜೀವನವೆಂಬ ದೊಡ್ಡ ಸಾಗರದಲ್ಲಿ ಸಂಸಾವೆಂಬ ದೋಣಿಯನ್ನು ಗಂಡ ಹೆಂಡತಿ ಸದಾಕಾಲ ಜೊತೆಯಾಗಿ ಸಾಗಿಸುತ್ತಾ,ಜೀವನದಲ್ಲಿ ಸುಖ ದುಖಗಳಲ್ಲಿ ಪರಸ್ಪರ ಜೊತೆಯಾಗಿ ನಡೆದಾಗ ಸಂಸಾರದಲ್ಲಿ ಶಾಂತಿ,ನೆಮ್ಮದಿ,ಸಹೃದಯತೆ,ಸಂತೋಷ ನೆಲೆಸುತ್ತದೆ ಎಂದರು. ಮದುವೆಯಾದ ನಂತರ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸಿಕೊಟ್ಟು,ಅವರಲ್ಲಿ ನೈತಿಕತೆ ಬೆಳೆಸಿ, ದೇಶದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆಯುವಂತೆ ಮಾಡುವ ಜವಬ್ದಾರಿ ಪ್ರತಿಯೊಬ್ಬ ತಂದೆತಾಯಂದಿರ ಮೇಲಿದ್ದು,ಜೀವನದಲ್ಲಿ ಎಂದಿಗೂ ಶಾಂತಿ,ನೆಮ್ಮದಿ ಹದಗೆಡದಂತೆ ಎಚ್ಚರವಹಿಸಿ ಸಂಸಾರವನ್ನು ನಡೆಸಬೇಕು ಎಂದು ತಿಳಿಸಿದರು. ಗಂಡುಹೆಣ್ಣು ಪರಸ್ಪರ ಒಪ್ಪಿ,ಹಿರಿಯರ ನೇತೃತ್ವದಲ್ಲಿ ವಿವಾಹವಾಗಿ ಸಂಸಾರ ನಡೆಸಬೇಕು,ಸಂಸಾರದಲ್ಲಿ ಬರುವಂತ ಕೆಲ ಕ್ಷುಲಕ ವಿಚಾರಗಳನ್ನು ದೊಡ್ಡದು ಮಾಡಿ ಗಂಡಹೆಂಡತಿ ವಿವಾಹವಿಚ್ಚೇದನಕ್ಕೆ ಮುಂದಾಗುವುದು ನಮ್ಮ ಹಿಂದೂ ಪರಂಪರೆಗೆ ವಿರುದ್ದವಾಗಿ ನಡೆದಂತೆ,ಯಾರೊಬ್ಬರು ಸಹ ಕೋಪದ ಕೈಗೆ ಬುದ್ದಿಯನ್ನು ಕೊಡದೆ ಸಂಸಾರವನ್ನು ನಡೆಸುವಂತೆ ತಿಳಿಸಿದರು.
ಉಚಿತ ಸಾಮೂಹಿಕ ವಿವಾಹದಲ್ಲಿ ಸಂಸಾರ ಬಂಧನಕ್ಕೊಳಗಾದ 16 ಜೋಡಿಗಳು.
ಇಂದಿನ ಬರಗಾಲದ ಪರಿಸ್ಥಿತಿಯಲ್ಲಿ ಒಂದು ಮದುವೆ ಮಾಡಬೇಕಾದರೆ ಲಕ್ಷಾಂತರ ರೂ ವೆಚ್ಚವಾಗುತ್ತದೆ, ಇದನ್ನೆಲ್ಲಾ ಮನಗಂಡ ರೋಟರಿ ಸಂಸ್ಥೆಯವರು ಪ್ರತಿ ವರ್ಷ ಉಚಿತ ಸಾಮೂಹಿಕ ವಿವಾಹ ಮಾಡುತ್ತಾ ಸಾಗುತ್ತಿದ್ದು, ಬಡಜನರ ಪಾಲಿಗೆ ಹಾಗೂ ಸಮಾಜದ ದೃಷ್ಠಿಯಲ್ಲಿ ಅವರ ಸಾಮಾಜಿಕ ಸೇವೆ ಶ್ಲಾಘನೀಯ ಎಂದರು. ಈ ಬಾರಿ ಕೇವಲ 16 ಜೋಡಿ ನವ ಸಂಸಾರ ಬಂಧನಕ್ಕೆ ಒಳಗಾಗಿದ್ದು ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಳವಾಗಲಿ,ಸಂಸ್ಥೆಯ ಬೆಳವಣಿಗೆಗೆ ನಮ್ಮೆಲ್ಲರ ಸಹಕಾರ ಅಗತ್ಯವಾಗಿರಬೇಕೆಂದು ಆಶಿಸಿದರು.
ವಿವಾಹದಲ್ಲಿ ನೂತನವಧುವರರಿಗೆ ರೇಷ್ಮೆಸೀರೆ ವಿತರಿಸಲಾಯಿತು.
ರೋಟರಿ ಕಾರ್ಯದರ್ಶಿ ಗಂಗಣ್ಣ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ, ರೋಟರಿ ಸಂಸ್ಥೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಜನಸೇವೆ ಮುಂದಾಗಿದ್ದು,ರಕ್ತದಾನಶಿಬಿರ,ಹೆಲ್ತ್ ಚಕಫ್,ಹೃದಯ ಶಸ್ತ್ರಚಿಕಿತ್ಸೆಯಂತಹ ಹತ್ತು ಹಲವು ಕಾರ್ಯಗಳನ್ನು ಮಾಡುತ್ತಾ ಸಾಗಿದೆ.12ವರ್ಷ ಒಳಗಿನ ಮಕ್ಕಳಿಗೆ ಹೃದಯಸಂಬಂಧಿ ಕಾಯಿಲೆಗಳಿಗೆ ಸಂಸ್ಥೆವತಿಯಿಂದ ಉಚಿತವಾಗಿ ಚಿಕಿತ್ಸೆ ಕೊಡಿಸುವುದಾಗಿ ತಿಳಿಸಿದ್ದಾರೆ.
ಸಮಾರಂಭದಲ್ಲಿ ವಿವಾಹಮಹೋತ್ಸವದಲ್ಲಿ ಶ್ರೀರಾಮಹಾಲ್ ನ ಟಿ.ಆರ್.ಲಕ್ಷ್ಮಿಕಾಂತ್ ,ರೋಟರಿ ಅಧ್ಯಕ್ಷ ಈ.ರವೀಶ್,ರೋಟರಿ ಕಮ್ಯೂನಿಟಿ ಕಾರ್ಪ್ಸ್ ಅಧ್ಯಕ್ಷ ರಮೇಶ್,ಶಿಬಿರಾಧಿಕಾರಿಗಳಾಗಿ ಮಂಜುನಾಥ ಗುಪ್ತ, ಸ್ಟುಡಿಯೊ ಸುಧೀರ್, ದಾನಿಗಳಾದ ವೆಂಕಟಾಛಲಪತಿ ಶೆಟ್ಟಿ,ಮುಖಂಡರಾದ ನಂದಿಹಳ್ಳಿ ಶಿವಣ್ಣ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.