ವಿಷಯಕ್ಕೆ ಹೋಗಿ

ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಶೀಘ್ರವೇ ನೀಡುವಂತೆ ಪೋಷಕರ ಅಹವಾಲು

ಶಾಲಾ ಕಾಲೇಜುಗಳಿಗೆ ನೋಂದಣಿಯಾಗುವ ಸಂಧರ್ಭದಲ್ಲಿ ಶುಲ್ಕ ವಿನಾಯಿತಿ ಹಾಗೂ ಜಾತಿ ದೃಢೀಕರಣಕ್ಕಾಗಿ ಲಗತ್ತಿಸಬೇಕಾದ ಜಾತಿ ಮತ್ತು ಆದಾಯ ದೃಢೀಕರಣ ಪತ್ರವನ್ನು ಕಂದಾಯ ಇಲಾಖೆಯು 21 ದಿನಗಳಿಗೆ ವಿತರಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ವಿದ್ಯಾಭ್ಯಾಸಕ್ಕಾಗಿ ನೀಡುತ್ತಿರುವ ಪ್ರಮಾಣ ಪತ್ರವನ್ನು 21 ದಿನಗಳಿಗೆ ಬದಲಾಗಿ ಒಂದು ವಾರದೊಳಗೆ ವಿತರಿಸುವ ಕ್ರಮವನ್ನು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರಸ್ತುತದಲ್ಲಿ ಶಾಲಾ ಕಾಲೇಜುಗಳ ದಾಖಲಾತಿ ಶುಲ್ಕದಲ್ಲಿ ಹೆಚ್ಚಳವಾಗಿದ್ದು, ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕ ಭರಿಸಲಾಗದೆ ತಮ್ಮ ಆದಾಯ ಪ್ರಮಾಣ ಪತ್ರವನ್ನು ಲಗತ್ತಿಸಿದರೆ ಶುಲ್ಕದಲ್ಲಿ ಸ್ವಲ್ಪ ಕಡಿಮೆಯಾಗುತ್ತದೆ ಎಂದು ತಿಳಿದು ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಪಡೆಯಲು ಮುಂದಾಗುತ್ತಾರೆ.ಆದರೆ ಸರ್ಕಾರ ಸಕಾಲ ಯೋಜನೆಯಡಿ ಸರ್ಕಾರಿ ಸೇವೆಗಳಿಗೆ ಕಾಲಾವಧಿಯನ್ನು ನಿಗದಿಗೊಳಿಸಿದ್ದು, ಅಂತೆಯೇ ವಿದ್ಯಾಭ್ಯಾಸಕ್ಕೆ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ನೀಡುವ ಕಾಲಾವಧಿಯನ್ನು 21 ದಿನಕ್ಕೆ ನಿಗದಿಗೊಳಿಸಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಸೇರಿದಂತೆ ಇತರೆ ತರಗತಿಗಳ ಫಲಿತಾಂಶ ಬಹುಪಾಲು ಮೇ ತಿಂಗಳಲ್ಲಿ ಪ್ರಕಟವಾಗುತ್ತದೆ. ಫಲಿತಾಂಶ ಬಂದ ಒಂದು ತಿಂಗಳುಗಳ ಒಳಗಾಗಿ ಇತರೆ ತರಗತಿಗಳಿಗೆ ದಾಖಲಾತಿ ಪ್ರಾರಂಭವಾಗಿ ಮುಕ್ತಾಯವಾಗುತ್ತದೆ. ಬಹಳಷ್ಟು ವಿದ್ಯಾರ್ಥಿಗಳು ಶಾಲಾಪ್ರಾರಂಭದ ನಂತರವೇ ಆದಾಯ ಪ್ರಮಾಣ ಪತ್ರ ಪಡೆಯಲು ಮುಂದಾಗುತ್ತಿರುವುದರಿಂದ ಸಮಸ್ಯೆ ಎದುರಾಗಿದೆ. ಉತ್ತೀರ್ಣರಾದ ವಿಧ್ಯಾರ್ಥಿಗಳು ನಂತರದ ತರಗತಿ ಗಳಿಗೆ ನೋಂದಣಿಯಾಗುವಲ್ಲಿ ನೀಡುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರಕ್ಕೆ 21 ದಿನ ನಿಗದಿಗೊಳಿಸಿ -ರುವುದರಿಂದ. ಪ್ರಮಾಣಪತ್ರ ಪಡೆಯುವುದರೊಳಗೆ ದಾಖಲಾತಿಯೇ ಮುಗಿಯುತ್ತದೆ.ಅಲ್ಲದೆ ಹೆಚ್ಚಿನ ಶುಲ್ಕ ಭರಿಸಬೇಕಾಗುತ್ತದೆ ಎಂಬ ಆತಂಕ ವಿದ್ಯಾರ್ಥಿಗಳು ಹಾಗೂ ಪೋಷಕರದ್ದಾಗಿದೆ .
ಹುಳಿಯಾರು ನಾಡಕಛೇರಿಯ ನೆಮ್ಮದಿಕೇಂದ್ರದ ಮುಂದೆ ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಪಡೆಯಲು ಸರದಿ ಸಾಲಿನಲ್ಲಿ ನಿಂತಿರುವ ಪೋಷಕರು
 ನೆಮ್ಮದಿ ಕೇಂದ್ರಗಳಲ್ಲಿ ಕಂಪ್ಯೂಟರ್ ಮೂಲಕ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ನೀಡುವುದಕ್ಕಿಂತ ಮುಂಚಿತವಾಗಿ ಅವರಿವರನ್ನು ಎಡೆತಾಕಿ ಎರಡು ಮೂರು ದಿನಗಳಲ್ಲಿ ಆದಾಯ ಪ್ರಮಾಣ ಪತ್ರ ಪಡೆದು ಯಾವುದೆ ತೊಂದರೆಯಿಲ್ಲದೆ ಮಕ್ಕಳನ್ನು ಶಾಲೆಗಳಿಗೆ ಸೇರಿಸಲಾಗುತಿತ್ತು,ಆದರೆ ಈಗ ನೆಮ್ಮದಿಕೇಂದ್ರದಲ್ಲಿ ಸಮಯ ನಿಗದಿಗೊಳಿಸಿರುವುದರಿಂದ ಮಕ್ಕಳನ್ನು ಶಾಲೆಗೆ ಸೆರಿಸುವುದಕ್ಕೆ ತೊಂದರೆಯಾಗುತ್ತಿದೆ.ಸರ್ಕಾರ ಹಿಂದಿನಂತೆ ಮೂರು-ನಾಲ್ಕುದಿನಗಳಲ್ಲಿ ಪ್ರಮಾಣಪತ್ರ ನೀಡುವಂತೆ ಹುಳಿಯಾರಿನ ನಾಡಕಛೇರಿಯ ನೆಮ್ಮದಿ ಕೇಂದ್ರದಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದ ಪೋಷಕರುಗಳು ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...