ವಿಷಯಕ್ಕೆ ಹೋಗಿ

ಸ್ವಪ್ರೇರಣೆಯಿಂದ ಪರಿಸರ ಸಂರಕ್ಷಣೆಗೆ ಮುಂದಾಗಿ : ಕೆ.ಎಸ್.ಕೆ

          ಆಧುನಿಕತೆಯ ಅತಿಯಾದ ಬೆಳವಣಿಗೆಯಿಂದ ಹಸಿರು ಪರಿಸರವನ್ನು ಮಾನವ ತನ್ನ ಸ್ವಹಿತಕ್ಕಾಗಿ ನಾಶಮಾಡುತ್ತಿದ್ದು,ತನ್ನ ವಿನಾಶವನ್ನು ತಾನೇ ಆಹ್ವಾನಿಸುತ್ತಿದ್ದಾನೆ.ಇಂತಹ ಸನ್ನಿವೇಶದಲ್ಲಿ ಇಂದಿನ ಯುವಪೀಳಿಯವರು ಪರಿಸರದ ಬಗೆಗೆ ಹೆಚ್ಚಿನ ಕಾಳಜಿ ಹೊಂದಿ ಸ್ವಪ್ರೇರಣಾ ಮನೋಭಾವದಿಂದ ಪರಿಸರ ಸಂರಕ್ಷಣೆಗೆ ಮುಂದಾಗಬೇಕಿದೆ ಎಂದು ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಅಧ್ಯಕ್ಷ ಕೆ.ಎಸ್.ಕಿರಣ್ ಕುಮಾರ್ ಕಿವಿಮಾತು ಹೇಳಿದರು.

ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಕೆ.ಎಸ್.ಕಿರಣ್ ಕುಮಾರ್ ಮಾತನಾಡಿದರು.
          ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಸುವರ್ಣಮುಖಿ ಕ್ಯಾಂಪಸ್ ನಲ್ಲಿ ಚಿ.ನಾ.ಹಳ್ಳಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ವಕೀಲರ ಸಂಘ ಹಾಗೂ ತಾಲ್ಲೂಕು ಅರಣ್ಯಸಮಿತಿ ಸಹಯೋಗದಲ್ಲಿ ನಡೆದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷೆವಹಿಸಿ ಅವರು ಮಾತನಾಡಿದರು.

         ಪ್ರಕೃತಿಯ ಕೂಸಾಗಿರುವ ಮಾನವ ತನಗೆ ಜೀವನ ಮಾಡಲು ಅವಕಾಶ ಮಾಡಿಕೊಟ್ಟ ಭೂಮಿಯನ್ನೆ ಇಂದು ತನ್ನ ಅತಿಯಾದ ಬಯಕೆಯಿಂದ ಲೂಟಿ ಮಾಡುತ್ತಿದ್ದಾನೆ.ಅತಿಯಾದ ನಗರೀಕರಣದಿಂದ ಕಾಡು ನಾಶವಾಗಿ ಮಳೆ ಮಾಯವಾಗಿ ಬರಡು ಭೂಮಿಯಿಂದ ಬರಗಾಲದ ಛಾಯೆ ತಲೆದೂರಿದ್ದು,ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.ಅದರೂ ಸಹ ಮಾನವ ಎಚ್ಚೆತ್ತುಕೊಳ್ಳದೆ ತನ್ನ ಕೃತ್ಯವನ್ನು ಮುಂದುವರಿಸುತ್ತಿರುವುದು ಸರಿಯಲ್ಲ ಎಂದರು.ನಮ್ಮ ಪೂರ್ವಜರು ಪ್ರಕೃತಿಯನ್ನು ಸಂಪೂರ್ಣ ನಾಶ ಮಾಡಿದಿದ್ದರೆ ನಾವು ಇಂದು ಬದುಕಲು ಸಾಧ್ಯವಿರುತ್ತಿರಲಿಲ್ಲ,ಅಂತೆಯೇ ನಾವು ಕೂಡ ನಮ್ಮ ಮುಂದಿನ ಜೀವ ಸಂಕುಲಕ್ಕೆ ಪ್ರಕೃತಿಯನ್ನು ಸಂರಕ್ಷಿಸಿ,ಬೆಳೆಸಿ,ಉಳಿಸುವ ಕಾರ್ಯ ಮಾಡಬೇಕಿದೆ ಎಂದರು. ನಮ್ಮ ಸುತ್ತಮುತ್ತಲ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ.ಇಂದಿನ ಅನೇಕ ಸಂಘ ಸಂಸ್ಥೆಯವರು ಪರಿಸರ ಸಂರಕ್ಷಣೆಯ ಕಾರ್ಯದ ಬದಲು ಯಾವುದರಿಂದ ಲಾಭ ಬರುತ್ತದೆ ಅಂತಹ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುತ್ತಿರುವುದು ವಿಷಾದನೀಯ ಸಂಗತಿ ಎಂದರು.

             ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ನಿರ್ಮಲ ಮಾತನಾಡಿ, ಮಾನವ ಆರೋಗ್ಯ ಉತ್ತಮವಾಗಿರಬೇಕಾದರೆ ನಮ್ಮ ಸುತ್ತಮುತ್ತಲ ಪರಿಸರ ಆರೋಗ್ಯಯುತವಾಗಿರಬೇಕು ಆದರೆ ಇಂದು ಪರಿಸರದ ಸರಿಯಾದ ಸಂರಕ್ಷಣೆಯಿಲ್ಲದೆ ಶುದ್ದ ಗಾಳಿ,ನೀರು,ಭೂ ಭಾಗವನ್ನು ಹುಡುಕುವ ಪರಿಸ್ಥಿತಿ ಎದುರಾಗಿದ್ದು,ಮಾನವ ವಿನಾಶದ ಅಂಚಿಗೆ ತಲುಪುತ್ತಿದ್ದಾನೆ ಎಂದರು. ಹಸಿರು ಕಾಡಿನ ಬದಲಾಗಿ ಕಾಂಕ್ರಿಟ್ ಜಂಗಲ್ ತಲೆಯೆತ್ತುತ್ತಿದ್ದು,ಪ್ರಕೃತಿಯಲ್ಲಿ ಅಸಮತೋಲನ ಉಂಟಾಗಿದೆ ಎಂದರು.ಇತರ ಪಾಶ್ಚಾತ್ಯ ರಾಷ್ಟಗಳಿಗೆ ಹೋಲಿಸಿದರೆ ಭಾರತದಲ್ಲಿ ಮಾತ್ರ ಪ್ರಕೃತಿಯನ್ನು ಆರಾಧಿಸುತ್ತೇವೆ,ಆದರೆ ಅಂತಹ ಪ್ರಕೃತಿಯನ್ನು ನಾಶ ಮಾಡುವುದು ತಮ್ಮ ಸಂಸ್ಕೃತಿಗೆ ವಿರುದ್ದ ಎಂದರು.ಪರಿಸರ ನಾಶ ಮಾಡುವವರಿಗೆ ಕಾನೂನು ಚೌಕಟ್ಟಿನಲ್ಲಿ ಶಿಕ್ಷೆಗಳಿವೆ,ಹಾಗಿದ್ದು ಕೂಡ ಇದರ ಅರಿವಿಲ್ಲದೆ ವರ್ತಿಸುತ್ತಿರುವುದು ವಿಷಾದನೀಯ ಎಂದರು.
ಪರಿಸರ ದಿನದ ಅಂಗವಾಗಿ ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸಿವಿಲ್ ನ್ಯಾಯಾಧೀಶರುಗಳಾದ ಎಸ್.ವೀಣಾ ,ಕೆ.ನಿರ್ಮಲ ಸಸಿ ನೆಟ್ಟರು.
            ಹಿರಿಯ ವಕೀಲ ಕೆ.ಎಸ್.ಚಂದ್ರಶೇಖರ್ ಪರಿಸರ ಮತ್ತು ಕಾನೂನು ವಿಷಯದ ಕುರಿತಂತೆ ಹಾಗೂ ಹನುಮಂತಯ್ಯ ಪರಿಸರ ಮಾಲಿನ್ಯ ತಡೆಗಟ್ಟುವಿಕೆ ಬಗ್ಗೆ ಉಪನ್ಯಾಸ ನೀಡಿದರು.ಶಾಲಾ ಮಕ್ಕಳಿಂದ ಪರಿಸರ ಗೀತೆ ಮತ್ತು ತುಣುಕು ನಾಟಕ ಪ್ರದರ್ಶನ ನಡೆದವು.
          ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎನ್.ವೀಣಾ,ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್,ಪ್ರಾಂಶುಪಾಲ ರವಿ,ತಾಲ್ಲೂಕು ವಕೀಲ ಸಂಘದ ಅಧ್ಯಕ್ಷ ಕೆ.ಸಿ.ವಿಶ್ವನಾಥ್,ಉಪಾಧ್ಯಕ್ಷ ಜಿ.ಪರಮೇಶ್ವರ್, ಕಾರ್ಯದರ್ಶಿ ಲೋಕೇಶ್ವರ, ಉಪವಿಭಾಗಾಧಿಕಾರಿ ಎಸ್.ನಾಗೇಂದ್ರ,ಬುಕ್ಕಾಪಟ್ಟಣ ವಲಯದ ಅರಣ್ಯಾಧಿಕಾರಿ ಶಾಂತರಾಜಯ್ಯ ಉಪಸ್ಥಿತರಿದ್ದ ಸಮಾರಂಭವನ್ನು ವಿದ್ಯಾರ್ಥಿಗಳಾದ ಗಣೇಶ್ ಹಾಗೂ ಪ್ರಸನ್ನ ನಿರೂಪಿಸಿ,ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.