ವಿಷಯಕ್ಕೆ ಹೋಗಿ

ಹೂ ಬಿಡುವ ಹಂತದ ಹೆಸರು ಬೆಳೆಗೆ ಕೆಂಪು ತಲೆ ಕಂಬಳಿಹುಳು ಕಾಟ

         ಇತ್ತೀಚೆಗೆ ಸುರಿದ ಮುಂಗಾರು ಮಳೆಯಿಂದ ರೈತರ ಬಾಳಲ್ಲಿ ನೆಮ್ಮದಿ ಮನೆ ಮಾಡಿದ್ದು, ಕೃಷಿ ಚಟುವಟಿಕೆಯಲ್ಲಿ ಚುರುಕುಗೊಂಡ ರೈತ ಮುಂಗಾರು ಬೆಳೆಗಳಾದ ಹೆಸರು.ಉದ್ದು ಸೇರಿದಂತೆ ಇತರೆ ಬೆಳೆಗಳನ್ನು ಬಿತ್ತಿದ್ದರು ಆದರೆ ಸೊಗಸಾಗಿ ಚಿಗುರೊಡೆದು,ಹೂ ಬಿಡುವ ಹಂತದದಲ್ಲಿರುವ ಹೆಸರು ಗಿಡಕ್ಕೆ ಕೆಂಪುತಲೆ ಕಂಬಳಿಹುಳುವಿನ ಕಾಟ ತಗುಲಿ ಹೆಸರು ಗಿಡವೆಲ್ಲ ನಾಶವಾಗುತ್ತಿರುವುದು ಚಿ.ನಾ.ಹಳ್ಳಿ ತಾಲ್ಲುಕಿನಾದ್ಯಂತ ಕಂಡುಬಂದಿದ್ದು ಈ ಭಾಗದ ರೈತರು ಕಂಗಾಲಾಗಿದ್ದಾರೆ.
 
ಕೆಂಪು ತಲೆ ಕಂಬಳಿಹುಳು ಬಿದ್ದಿರುವ ಹೆಸರು ಗಿಡ.
         ಮುಂಗಾರು ಮಳೆ ತನ್ನ ಪ್ರಾರಂಭದಲ್ಲಿ ಉತ್ತಮವಾಗಿ ಬಿದ್ದುದರಿಂದ ಸಂತಸಗೊಂಡ ರೈತರು ಈಗಾಗಲೆ ಮುಂಗಾರು ಬೆಳೆಗಳನ್ನು ಬಿತ್ತಿದ್ದು ಹೆಸರು.ಉದ್ದು ಸೇರಿದಂತೆ ಇತರೆ ಬೆಳೆಗಳು ಇದೀಗ ಚೆನ್ನಾಗಿ ಬೆಳೆದು ಹೂ ಬಿಡುವ ಹಂತ ತಲುಪಿರುತ್ತವೆ.ಈ ಸಮಯದಲ್ಲಿ ಹೆಸರು ಗಿಡಗಳಲ್ಲಿ ಕೆಂಪು ತಲೆ ಕಂಬಳಿಹುಳುವಿನ ಬಾಧೆ ಕಂಡುಬರುತ್ತಿದ್ದು,ಕಂಬಳಿ ಹುಳುಗಳು ಸಣ್ಣ ಮರಿಗಳಿಂದ ಪ್ರೌಢಾವಸ್ಥೆಗೆ ಬರುವ ಹಂತದಲ್ಲಿ ಹೆಸರು ಗಿಡಗಳನ್ನು ಪೂರ್ಣವಾಗಿ ತಿನ್ನುವುದಲ್ಲದೆ,ಬದುಗಳಲ್ಲಿನ ಮೆತ್ತನೆಯ ಹುಲ್ಲನ್ನು ಭಕ್ಷಿಸುತ್ತದೆ.ಈ ಹುಳುಗಳು ಕೆಲ ದಿನಗಳಲ್ಲಿ ಇಡಿ ಬೆಳೆಯನ್ನೆ ತಿಂದು ನಾಶಮಾಡುವ ಶಕ್ತಿಯನ್ನು ಹೊಂದಿದ್ದು, ಬೆಳೆ ಸಂಪೂರ್ಣ ನಾಶಹೊಂದುವ ಸಂಕಷ್ಟದ ಪರಿಸ್ಥಿತಿ ರೈತರಿಗೆ ಎದುರಾಗಿದೆ.

      ಈ ಹುಳುವಿನ ತೊಂದರೆ ಹುಳಿಯಾರು ಹೋಬಳಿಯ ಕೋರಗೆರೆ,ಯಳನಡು,ಹಂದನಕೆರೆ ಭಾಗದ ದೊಡ್ಡಎಣ್ಣೆಗೆರೆ ಗ್ರಾಮ ಪಂಚಾಯ್ತಿಯ ಊರುಗಳಲ್ಲಿ ಹೆಚ್ಚಾಗಿ ಕಂಡುಬಂದಿರುತ್ತದೆ.ರೈತರು ತಮಗೆ ತಿಳಿದ ಕೀಟನಾಶಕವನ್ನು ಸಿಂಪಡಿಸಿದರೂ ಸಹ ಯಾವುದೇ ಪ್ರಯೋಜನ ಕಂಡುಬಾರದೆ ಈ ಬಾರಿಯೂ ಹೆಸರು ಬೆಳೆ ತಮ್ಮ ಕೈತಪ್ಪಲಿದೆಯ ಎಂಬ ಆತಂಕ ವ್ಯಕ್ತವಾಗಿದೆ,

ಹುಳುವಿನ ಹತೋಟಿ ಕ್ರಮ: ಕೆಂಪುತಲೆಹುಳುವಿನ ಹತೋಟಿಗೆ ಸಂಬಂಧಿಸಿದಂತೆ ಕೃಷಿಇಲಾಖೆಯು ಗಮನ ಹರಿಸಿದ್ದು ಕೆಲವೊಂದು ಗೊಬ್ಬರ ಹಾಗೂ ಕೀಟ ನಾಶಕದ ಬಳಕೆಯನ್ನು ತಿಳಿಸಿದ್ದಾರೆ.ಶೇ.5 ರಷ್ಟು ಪೆನ್ವಿಲರೇಟ್ ಧೂಳನ್ನು ಪ್ರತಿ ಎಕರೆಗೆ ಎಂಟು ಕೆ.ಜಿ.ಯಂತೆ ಧೂಳಿಕರಿಸುವ ಮೂಲಕ ಕೀಟವನ್ನು ಅತ್ಯುತಮವಾಗಿ ಹತೋಟಿ ಮಾಡಬಹುದಾಗಿದೆ.. ಶೇ.5ರಷ್ಟು ಮೀಥೈಲ್ ಪ್ಯಾರಥೀನ್ ಧೂಳು ಎಂಟು ಕೆ.ಜಿ ಅಥವಾ ಪೆನ್ವಿಲರೇಟ್ 20% ಇಸಿಯನ್ನು ಒಂದು ಲೀಟರ್ ಗೆ ಒಂದು ಮಿ.ಲಿಯಂತೆ ಸಿಂಪರಣೆ ಮಾಡುವ ಮೂಲಕ ಹುಳುವಿನ ತೊಂದರೆ ತಡೆಗಟ್ಟಬಹುದಾಗಿದೆ.ಬೆಳೆಗಳಿಗೆ ಶಿಪಾರಸ್ಸಿನಂತೆ ಮಾತ್ರ ರಸಗೊಬ್ಬರ ಉಪಯೋಗಿಸಬೇಕಿದ್ದು, ಯೂರಿಯಾವನ್ನು ಅಗತ್ಯಕ್ಕೆ ತಕ್ಕಂತೆ ಬಳಸದೆ ಹೆಚ್ಚಿನ ಪ್ರಮಾಣದಲ್ಲಿ ಬಳಸಿದಲ್ಲಿ ಕೀಟಗಳ ಮತ್ತು ರೋಗಗಳ ಹಾವಳಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು,ಬೆಳೆಗಳು ನಾಶಹೊಂದುತ್ತವೆ. ಈ ಭಾಗದ ಎಲ್ಲಾರೈತರು ಸಾಮೂಹಿಕವಾಗಿ ಸಸ್ಯ ಸಂರಕ್ಷಣಾ ಕ್ರಮವನ್ನು ಅನುಸರಿಸುವ ಮೂಲಕ ಬೆಳೆಯಳನ್ನು ರಕ್ಷಿಸಿ ಕೊಳ್ಳುವ ಕಾರ್ಯದಲ್ಲಿ ಕೈಜೋಡಿಸಬೇಕಿದೆ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ತಿಳಿಸುತ್ತಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.