ವಿಷಯಕ್ಕೆ ಹೋಗಿ

ಕೊಬ್ಬರಿ ಖರೀದಿಕೇಂದ್ರ ತೆರೆಯುವಲ್ಲಿ ವಿಳಂಬ: ಗೊಂದಲದಲ್ಲಿ ತೆಂಗು ಬೆಳೆಗಾಗರು

         ಸಂಕಷ್ಟದಲ್ಲಿದ್ದ ತೆಂಗುಬೆಳೆಗಾರರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಸದನದಲ್ಲಿ ಚರ್ಚೆ ನಡೆದು ಜೂನ್ ಹನ್ನೆರಡರಿಂದಲೇ ಕೊಬ್ಬರಿ ಉತ್ಪಾದನಾ ಪ್ರದೇಶಗಳಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರ (ನಾಫೆಡ್) ತೆರೆದು ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಸಹಾಯಧನ ಸೇರಿದಂತೆ 6500ರೂಗೆ ಖರೀದಿಸುವಂತೆ ರಾಜ್ಯ ಸರ್ಕಾರ ಆದೇಶಹೊರಡಿಸಿದ್ದರೂ ಸಹ ಎಲ್ಲಿಯೂ ಖರೀದಿ ಕೇಂದ್ರಗಳು ನಿಗಧಿತವಾಗಿ ಪ್ರಾರಂಭವಾಗದೇ ತೆಂಗುಬೆಳೆಗಾರು ಗೊಂದಲಕ್ಕಿಡಾಗಿದ್ದಾರೆ.

        ಅಂತೆಯೇ ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇದುವರೆಗೂ ನಾಫೆಡ್ ಕೊಬ್ಬರಿ ಖರೀದಿಕೇಂದ್ರ ಪ್ರಾರಂಭವಾಗದೆ ಈ ಭಾಗದ ತೆಂಗು ಬೆಳೆಗಾರರು ಮಾರುಕಟ್ಟೆಗೆ ನಿತ್ಯವೂ ಅಲೆಯುವಂತಾಗಿದೆ.


      ತೆಂಗು ಹಾಗೂ ಕೊಬ್ಬರಿ ಬೆಲೆಯಲ್ಲಿ ಬಾರಿ ಇಳಿಕೆಯಿಂದಾಗಿ ಮಾರುಕಟ್ಟೆಯಲ್ಲಿನ ನಿಂಬೆಹಣ್ಣಿನ ಬೆಲೆಗಿಂತ ಕಡಿಮೆಯಿದೆ ಎಂದು ವಿಧಾನಸಭೆಯಲ್ಲಿ ಕೂಡ ಚರ್ಚೆನಡೆಯುವಂತಾದ ಹಿನ್ನಲೆಯಲ್ಲಿ ತೆಂಗುಬೆಳೆಗಾರ ಸಂಕಷ್ಟ ಅರಿತ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಸಾವಿರ ರೂ ಸಹಾಯಧನ ನೀಡಿ ಖರೀದಿಗೆ ಒಪ್ಪಿಗೆ ನೀಡಿತ್ತು. ತೆಂಗಿನ ಇಳುವರಿಯಲ್ಲಿ ಕುಂಟಿತ ಹಾಗೂ ಕೊಬ್ಬರಿಗೆ ಸೂಕ್ತ ಬೆಲೆ ದೊರೆಯದೆ ಕಂಗಾಲಾಗಿದ್ದ ತೆಂಗುಬೆಳೆಗಾರಿಗೆ ಇಂತಹ ಸಮಯದಲ್ಲಿ ರಾಜ್ಯ ಸರ್ಕಾರದ ಈ ಆದೇಶ ಸಂತಸ ತಂದಿತ್ತು. ಸರ್ಕಾರದ ಆದೇಶದಂತೆ ಹನ್ನೆರಡರಿಂದಲೇ ನಾಫೆಡ್ ಕೇಂದ್ರಗಳು ಪ್ರಾರಂಭವಾಗಿರುತ್ತವೆ ಎಂದು ತಿಳಿದು ಕೊಬ್ಬರಿ ಮಾರಲು ಮಾರುಕಟ್ಟೆಗೆ ಬಂದರೆ ಅಲ್ಲಿ ಕೊಬ್ಬರಿ ಖರೀದಿ ಕೇಂದ್ರ ಇನ್ನೂ ಪ್ರಾರಂಭವಾಗಿಲ್ಲ ಎಂಬ ವಿಷಯ ಕೇಳಿದ ಬೆಳೆಗಾರರು ನಿರಾಸೆಯಿಂದ ತಾವು ತಂದಿದ್ದ ಕೊಬ್ಬರಿಯನ್ನು ವಾಪಸ್ಸು ಮನೆಗೆ ತೆಗೆದುಕೊಂಡು ಹೋಗಲಾರದೇ ವರ್ತಕರಿಗೆ ಇರುವಷ್ಟು ಬೆಲೆಗೆ ಮಾರುವಂತ ಪರಿಸ್ಥಿತಿ ಎದುರಾಗಿದೆ.

        ವರ್ತಕರಿಗೆ ಅನುಕೂಲ: ನಾಫೆಡ್ ಬಗ್ಗೆ ಪ್ರಚಾರದ ಕೊರತೆ ಹಾಗೂ ನಿಗದಿತ ಸಮಯದಲ್ಲಿ ಕೇಂದ್ರ ಆರಂಭಿಸದಿದ್ದಲ್ಲಿ ವರ್ತಕರುಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದಂತಾಗುತ್ತದೆ.ಕಾಲಾವಕಾಶ ದೊರೆಯುವುದರಿಂದ ರೈತರ ಕೊಬ್ಬರಿಯನ್ನು ಕೊಂಡು ದಾಸ್ತಾನು ಮಾಡಿಕೊಂಡು ಕೇಂದ್ರ ಆರಂಭವಾಗುತ್ತಿದ್ದಂತೆಯೇ ಮಾರಾಟಕ್ಕೆ ಮುಂದಾಗುತ್ತಾರೆ, ಕ್ವಿಂಟಾಲ್ ಗೆ ಸಾವಿರಕ್ಕೂ ಹೆಚ್ಚಿನ ಲಾಭಗಳಿಸುತ್ತಾರೆ. ಇದಕ್ಕೆ ನಿದರ್ಶನವಾಗಿ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸುವ ಆದೇಶವನ್ನು ಸರ್ಕಾರ ಹೊರಡಿಸುವುದಕ್ಕಿಂತ ಮುಂಚೆ ಹುಳಿಯಾರಿನ ಮಾರುಕಟ್ಟೆಯಲ್ಲಿ ಕೆಲ ತಿಂಗಳುಗಳಿಂದ 4400ರ ಅಜುಬಾಜಿನಲ್ಲಿದ್ದ ಕೊಬ್ಬರಿ ಬೆಲೆ ಇದೀಗ ಧಿಡೀರನೆ 5 ಸಾವಿರಕ್ಕೆ ಹೆಚ್ಚಳ ಮಾಡುವ ಮೂಲಕ ರೈತರನ್ನು ತಮ್ಮತ್ತ ಸೆಳೆಯುತ್ತಿದ್ದು,ಹೆಚ್ಚಿನ ಸಂಗ್ರಹಕ್ಕೆ ಮುಂದಾಗಿದ್ದಾರೆ.

     ತಾ.20ರಿಂದ ಖರೀದಿ ಪ್ರಾರಂಭ : ಮಾರುಕಟ್ಟೆ ಆವರಣದಲ್ಲಿ ಖರೀದಿಕೇಂದ್ರದ ಬಗ್ಗೆ ಯಾವೊಂದು ಪ್ರಚಾರ ವಿಲ್ಲದಿರುವುದರ ಬಗ್ಗೆ ಮಾರುಕಟ್ತೆ ಸಮಿತಿಯನ್ನು ವಿಚಾರಿಸಲಾಗಿ 12ಕ್ಕೆ ಪ್ರಾರಂಭ ಎಂದು ಪತ್ರಿಕೆಯಲ್ಲಿ ಬಂದಿದ್ದೆ ವಿನ: ತಮಗೆ ಯಾವುದೇ ರೀತಿಯ ಆದೇಶ ಬಂದಿಲ್ಲ. ಕೇಂದ್ರ ಪ್ರಾರಂಭಿಸಲು ನಾಫೆಡ್ ಅಧಿಕಾರಿಗಳು ಯಾರೊಬ್ಬರೂ ಇದುವರೆವಿಗೂ ಬಂದಿಲ್ಲ. ಹಾಗಾಗಿ ಇನ್ನೂ ನಾಫೆಡ್ ಕೇಂದ್ರ ಪ್ರಾರಂಭವಾಗಿಲ್ಲ. ತಾ.19ರಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯವರು ಖರೀದಿ ಕೇಂದ್ರದ ಉದ್ಘಾಟನೆ ಮಾಡಲಿದ್ದು, ತಾ.20 ರಿಂದ ಕೊಬ್ಬರಿ ಖರೀದಿ ಪ್ರಾರಂಬಗೊಳ್ಳಲಿದ್ದು, ಪ್ರತಿ ಕ್ವಿಂಟಾಲ್ ಗೆ 5500ರೂ ಮತ್ತು ಸಹಾಯಧನ 1000ರೂ ನಂತೆ ಖರೀದಿ ನಡೆಯಲಿದೆ,ಪ್ರತಿ ಹತ್ತು ಕ್ವಿಂಟಾಲ್ ಗೆ ಮಾತ್ರ ಸಹಾಯಧನ ಸೀಮಿತವಾಗಿದ್ದು ಬೆಳೆಗಾರರ ಪಹಣಿ ಆಧಾರದ ಮೇಲೆ ಕೊಬ್ಬರಿ ನಡೆಯಲಿದೆ ಎಂದು ಕಾರ್ಯದರ್ಶಿ ಜಯರಾಮ್ ತಿಳಿಸಿದರು.

          ಪ್ರತಿ ಬಾರಿಯೂ ಖರೀದಿಕೇಂದ್ರ ಪ್ರಾರಂಭಿಸುವಾಗ ಗೋಡನ್,ದಾರ,ಚೀಲ ಇಲ್ಲ ಅನ್ನುವ ಸಮಸ್ಯೆಗಳೆಲ್ಲಾ ಮುಂದಿಟ್ಟುಕೊಂಡು ಖರೀದಿ ತಡವಾಗುತ್ತಿತ್ತು,ಈ ಬಾರಿ ಅದರ ಪುನರಾವರ್ತನೆಗೆ ಅವಕಾಶ ನೀಡದಂತೆ ಖರೀದಿ ಕೇಂದ್ರ ಶೀಘ್ರ ಪ್ರಾರಂಭಿಸಿದಲ್ಲಿ ರೈತರಿಗೆ ಅನುಕೂಲ ಕಲ್ಪಿಸಿಕೊಟ್ಟಂತಾಗುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...