ವಿಷಯಕ್ಕೆ ಹೋಗಿ

ಕೊಬ್ಬರಿ ಖರೀದಿಕೇಂದ್ರ ತೆರೆಯುವಲ್ಲಿ ವಿಳಂಬ: ಗೊಂದಲದಲ್ಲಿ ತೆಂಗು ಬೆಳೆಗಾಗರು

         ಸಂಕಷ್ಟದಲ್ಲಿದ್ದ ತೆಂಗುಬೆಳೆಗಾರರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಸದನದಲ್ಲಿ ಚರ್ಚೆ ನಡೆದು ಜೂನ್ ಹನ್ನೆರಡರಿಂದಲೇ ಕೊಬ್ಬರಿ ಉತ್ಪಾದನಾ ಪ್ರದೇಶಗಳಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರ (ನಾಫೆಡ್) ತೆರೆದು ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಸಹಾಯಧನ ಸೇರಿದಂತೆ 6500ರೂಗೆ ಖರೀದಿಸುವಂತೆ ರಾಜ್ಯ ಸರ್ಕಾರ ಆದೇಶಹೊರಡಿಸಿದ್ದರೂ ಸಹ ಎಲ್ಲಿಯೂ ಖರೀದಿ ಕೇಂದ್ರಗಳು ನಿಗಧಿತವಾಗಿ ಪ್ರಾರಂಭವಾಗದೇ ತೆಂಗುಬೆಳೆಗಾರು ಗೊಂದಲಕ್ಕಿಡಾಗಿದ್ದಾರೆ.

        ಅಂತೆಯೇ ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇದುವರೆಗೂ ನಾಫೆಡ್ ಕೊಬ್ಬರಿ ಖರೀದಿಕೇಂದ್ರ ಪ್ರಾರಂಭವಾಗದೆ ಈ ಭಾಗದ ತೆಂಗು ಬೆಳೆಗಾರರು ಮಾರುಕಟ್ಟೆಗೆ ನಿತ್ಯವೂ ಅಲೆಯುವಂತಾಗಿದೆ.


      ತೆಂಗು ಹಾಗೂ ಕೊಬ್ಬರಿ ಬೆಲೆಯಲ್ಲಿ ಬಾರಿ ಇಳಿಕೆಯಿಂದಾಗಿ ಮಾರುಕಟ್ಟೆಯಲ್ಲಿನ ನಿಂಬೆಹಣ್ಣಿನ ಬೆಲೆಗಿಂತ ಕಡಿಮೆಯಿದೆ ಎಂದು ವಿಧಾನಸಭೆಯಲ್ಲಿ ಕೂಡ ಚರ್ಚೆನಡೆಯುವಂತಾದ ಹಿನ್ನಲೆಯಲ್ಲಿ ತೆಂಗುಬೆಳೆಗಾರ ಸಂಕಷ್ಟ ಅರಿತ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಸಾವಿರ ರೂ ಸಹಾಯಧನ ನೀಡಿ ಖರೀದಿಗೆ ಒಪ್ಪಿಗೆ ನೀಡಿತ್ತು. ತೆಂಗಿನ ಇಳುವರಿಯಲ್ಲಿ ಕುಂಟಿತ ಹಾಗೂ ಕೊಬ್ಬರಿಗೆ ಸೂಕ್ತ ಬೆಲೆ ದೊರೆಯದೆ ಕಂಗಾಲಾಗಿದ್ದ ತೆಂಗುಬೆಳೆಗಾರಿಗೆ ಇಂತಹ ಸಮಯದಲ್ಲಿ ರಾಜ್ಯ ಸರ್ಕಾರದ ಈ ಆದೇಶ ಸಂತಸ ತಂದಿತ್ತು. ಸರ್ಕಾರದ ಆದೇಶದಂತೆ ಹನ್ನೆರಡರಿಂದಲೇ ನಾಫೆಡ್ ಕೇಂದ್ರಗಳು ಪ್ರಾರಂಭವಾಗಿರುತ್ತವೆ ಎಂದು ತಿಳಿದು ಕೊಬ್ಬರಿ ಮಾರಲು ಮಾರುಕಟ್ಟೆಗೆ ಬಂದರೆ ಅಲ್ಲಿ ಕೊಬ್ಬರಿ ಖರೀದಿ ಕೇಂದ್ರ ಇನ್ನೂ ಪ್ರಾರಂಭವಾಗಿಲ್ಲ ಎಂಬ ವಿಷಯ ಕೇಳಿದ ಬೆಳೆಗಾರರು ನಿರಾಸೆಯಿಂದ ತಾವು ತಂದಿದ್ದ ಕೊಬ್ಬರಿಯನ್ನು ವಾಪಸ್ಸು ಮನೆಗೆ ತೆಗೆದುಕೊಂಡು ಹೋಗಲಾರದೇ ವರ್ತಕರಿಗೆ ಇರುವಷ್ಟು ಬೆಲೆಗೆ ಮಾರುವಂತ ಪರಿಸ್ಥಿತಿ ಎದುರಾಗಿದೆ.

        ವರ್ತಕರಿಗೆ ಅನುಕೂಲ: ನಾಫೆಡ್ ಬಗ್ಗೆ ಪ್ರಚಾರದ ಕೊರತೆ ಹಾಗೂ ನಿಗದಿತ ಸಮಯದಲ್ಲಿ ಕೇಂದ್ರ ಆರಂಭಿಸದಿದ್ದಲ್ಲಿ ವರ್ತಕರುಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದಂತಾಗುತ್ತದೆ.ಕಾಲಾವಕಾಶ ದೊರೆಯುವುದರಿಂದ ರೈತರ ಕೊಬ್ಬರಿಯನ್ನು ಕೊಂಡು ದಾಸ್ತಾನು ಮಾಡಿಕೊಂಡು ಕೇಂದ್ರ ಆರಂಭವಾಗುತ್ತಿದ್ದಂತೆಯೇ ಮಾರಾಟಕ್ಕೆ ಮುಂದಾಗುತ್ತಾರೆ, ಕ್ವಿಂಟಾಲ್ ಗೆ ಸಾವಿರಕ್ಕೂ ಹೆಚ್ಚಿನ ಲಾಭಗಳಿಸುತ್ತಾರೆ. ಇದಕ್ಕೆ ನಿದರ್ಶನವಾಗಿ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸುವ ಆದೇಶವನ್ನು ಸರ್ಕಾರ ಹೊರಡಿಸುವುದಕ್ಕಿಂತ ಮುಂಚೆ ಹುಳಿಯಾರಿನ ಮಾರುಕಟ್ಟೆಯಲ್ಲಿ ಕೆಲ ತಿಂಗಳುಗಳಿಂದ 4400ರ ಅಜುಬಾಜಿನಲ್ಲಿದ್ದ ಕೊಬ್ಬರಿ ಬೆಲೆ ಇದೀಗ ಧಿಡೀರನೆ 5 ಸಾವಿರಕ್ಕೆ ಹೆಚ್ಚಳ ಮಾಡುವ ಮೂಲಕ ರೈತರನ್ನು ತಮ್ಮತ್ತ ಸೆಳೆಯುತ್ತಿದ್ದು,ಹೆಚ್ಚಿನ ಸಂಗ್ರಹಕ್ಕೆ ಮುಂದಾಗಿದ್ದಾರೆ.

     ತಾ.20ರಿಂದ ಖರೀದಿ ಪ್ರಾರಂಭ : ಮಾರುಕಟ್ಟೆ ಆವರಣದಲ್ಲಿ ಖರೀದಿಕೇಂದ್ರದ ಬಗ್ಗೆ ಯಾವೊಂದು ಪ್ರಚಾರ ವಿಲ್ಲದಿರುವುದರ ಬಗ್ಗೆ ಮಾರುಕಟ್ತೆ ಸಮಿತಿಯನ್ನು ವಿಚಾರಿಸಲಾಗಿ 12ಕ್ಕೆ ಪ್ರಾರಂಭ ಎಂದು ಪತ್ರಿಕೆಯಲ್ಲಿ ಬಂದಿದ್ದೆ ವಿನ: ತಮಗೆ ಯಾವುದೇ ರೀತಿಯ ಆದೇಶ ಬಂದಿಲ್ಲ. ಕೇಂದ್ರ ಪ್ರಾರಂಭಿಸಲು ನಾಫೆಡ್ ಅಧಿಕಾರಿಗಳು ಯಾರೊಬ್ಬರೂ ಇದುವರೆವಿಗೂ ಬಂದಿಲ್ಲ. ಹಾಗಾಗಿ ಇನ್ನೂ ನಾಫೆಡ್ ಕೇಂದ್ರ ಪ್ರಾರಂಭವಾಗಿಲ್ಲ. ತಾ.19ರಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯವರು ಖರೀದಿ ಕೇಂದ್ರದ ಉದ್ಘಾಟನೆ ಮಾಡಲಿದ್ದು, ತಾ.20 ರಿಂದ ಕೊಬ್ಬರಿ ಖರೀದಿ ಪ್ರಾರಂಬಗೊಳ್ಳಲಿದ್ದು, ಪ್ರತಿ ಕ್ವಿಂಟಾಲ್ ಗೆ 5500ರೂ ಮತ್ತು ಸಹಾಯಧನ 1000ರೂ ನಂತೆ ಖರೀದಿ ನಡೆಯಲಿದೆ,ಪ್ರತಿ ಹತ್ತು ಕ್ವಿಂಟಾಲ್ ಗೆ ಮಾತ್ರ ಸಹಾಯಧನ ಸೀಮಿತವಾಗಿದ್ದು ಬೆಳೆಗಾರರ ಪಹಣಿ ಆಧಾರದ ಮೇಲೆ ಕೊಬ್ಬರಿ ನಡೆಯಲಿದೆ ಎಂದು ಕಾರ್ಯದರ್ಶಿ ಜಯರಾಮ್ ತಿಳಿಸಿದರು.

          ಪ್ರತಿ ಬಾರಿಯೂ ಖರೀದಿಕೇಂದ್ರ ಪ್ರಾರಂಭಿಸುವಾಗ ಗೋಡನ್,ದಾರ,ಚೀಲ ಇಲ್ಲ ಅನ್ನುವ ಸಮಸ್ಯೆಗಳೆಲ್ಲಾ ಮುಂದಿಟ್ಟುಕೊಂಡು ಖರೀದಿ ತಡವಾಗುತ್ತಿತ್ತು,ಈ ಬಾರಿ ಅದರ ಪುನರಾವರ್ತನೆಗೆ ಅವಕಾಶ ನೀಡದಂತೆ ಖರೀದಿ ಕೇಂದ್ರ ಶೀಘ್ರ ಪ್ರಾರಂಭಿಸಿದಲ್ಲಿ ರೈತರಿಗೆ ಅನುಕೂಲ ಕಲ್ಪಿಸಿಕೊಟ್ಟಂತಾಗುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...