ವಿಷಯಕ್ಕೆ ಹೋಗಿ

ತವರು ಕ್ಷೇತ್ರವನ್ನು ಎಂದಿಗೂ ಕಡೆಗಣಿಸಲ್ಲ :ಸಚಿವ ಟಿ.ಬಿ.ಜೆ

                   ತನಗೆ ಮೊದಲ ಬಾರಿ ಗೆಲವು ತಂದು ಕೊಟ್ಟ ಕಳ್ಳಂಬೆಳ್ಳ ಕ್ಷೇತ್ರ ಹಾಗೂ ಕ್ಷೇತ್ರದ ಹೋಬಳಿಗಳಲ್ಲಿ ಪ್ರಮುಖವಾದ ಹುಳಿಯಾರು ಹೋಬಳಿ ತನ್ನ ತವರಿದ್ದಂತೆ,ಇಲ್ಲಿಯ ಜನ ತನ್ನನ್ನು ಮೊದಲ ಬಾರಿ ಶಾಸಕ ಹಾಗೂ ಕೃಷಿಸಚಿವರನ್ನಾಗಿ ಆಯ್ಕೆ ಮಾಡಿದ್ದರು, ಅದರಂತೆ ಈ ಬಾರಿ ಕಾನೂನು ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆಯ್ಕೆ ಮಾಡುವಲ್ಲಿ  ತನ್ನನ್ನು ಬೆಂಬಲಿಸಿರುವ ತನ್ನ ತವರು ಕ್ಷೇತ್ರದಂತಿರುವ ಹುಳಿಯಾರನ್ನು ಎಂದಿಗೂ ಮರೆಯುವುದಿಲ್ಲ ಹಾಗೂ ಕ್ಷೇತ್ರದ  ಅಭಿವೃದ್ದಿಗಾಗಿ ಶ್ರಮಿಸುವೆ ಎಂದು ರಾಜ್ಯ ಕಾನೂನು ಸಚಿವರಾದ ಟಿ.ಬಿ.ಜಯಚಂದ್ರ ತಿಳಿಸಿದರು.
                           ತಿಪಟೂರಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಫೆಡ್ ಕೇಂದ್ರದ ಉದ್ಘಾಟನೆ ನೆರವೇರಿಸಿ ಶಿರಾಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಹುಳಿಯಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಹೋಬಳಿಯ ಸಮಸ್ಯೆಗಳನ್ನು ಆಲಿಸಿದರು.
ಹುಳಿಯಾರಿಗೆ ಬುಧವಾರ ಸಂಜೆ ಭೇಟಿ ನೀಡಿದ ಸಚಿವ ಟಿ.ಬಿ.ಜಯಚಂದ್ರ ಜನರ ಸಮಸ್ಯೆಗಳನ್ನು ಆಲಿಸಿದರು.
                  ನಾನು ರೈತರ ಸಂಕಷ್ಟವನ್ನು ಅರಿತಿದ್ದು, ಕೃಷಿ ಸಚಿವರಾಗಿದ್ದಾಗ ರೈತರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದೆವು. ಅಲ್ಲದೆ ಈ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಕಾರ್ಯವಾಗಿ ತೆಂಗುಬೆಳೆಗಾರರಿಗೆ ಅನುಕೂಲವಾಗುವಂತೆ ಪ್ರತಿಯೊಂದು ಮಾರುಕಟ್ಟೆಗಳಲ್ಲಿ ನಫೆಡ್ ಕೇಂದ್ರಗಳನ್ನು ತೆರೆಯುವ ಮೂಲಕ ರೈತರಿಂದ ನೇರವಾಗಿ ಕೊಬ್ಬರಿ ಖರೀದಿಗೆ ಮುಂದಾಗಿದ್ದು, ಕೊಬ್ಬರಿ ಪ್ರತಿ ಕ್ವಿಂಟಾಲ್ ಗೆ ಒಂದು ಸಾವಿರ ರೂ ಸಹಾಯ ನೀಡಿದ್ದೇನೆ.ಅಲ್ಲದೆ ಇದರ ಸದುಪಯೋಗ ರಾಜ್ಯದ ಎಲ್ಲಾ ತೆಂಗುಬೆಳೆಗಾರರಿಗೆ ದೊರೆಯಬೇಕಿದ್ದು,ಇದರ ಮಧ್ಯೆಯಾವುದೇ ಮಧ್ಯವರ್ತಿಗಳಾಗಲಿ,ಅಧಿಕಾರಿಗಳಾಗಲಿ,ವರ್ತಕರಾಗಿ ತಮ್ಮ ಬುದ್ದಿವಂತಿಕೆಯನ್ನು ತೊರಿಸಿದರೆ ಅಂತಹವರ ವಿರುದ್ದ ಉಗ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ನಫೆಡ್ ಕೇಂದ್ರ ಪ್ರಾರಂಭವಾಗುತ್ತಿದಂತೆ ಅನೇಕ ಕಡೆ ಕೊಬ್ಬರಿ ಬೆಲೆ ದಿಢೀರನೇ ಏರಿಕೆಯಾಗಿದೆ,ಇದು ನಫೆಡ್ ಕೇಂದ್ರಗಳಿಗೆ ರೈತರು ಕೊಬ್ಬರಿಯನ್ನು ಮಾರದಂತೆ ತಡೆಯುವ ತಂತ್ರವಾಗಿದೆ.ಇಂತಹ ಯಾವುದಕ್ಕೂ ರೈತರು ಮಣಿಯದೇ ಸರ್ಕಾರ ಸ್ಥಾಪಿಸಿರುವ ನಫೆಡ್ ಕೇಂದ್ರಗಳಿಗೆ ತಮ್ಮ ಕೊಬ್ಬರಿಯನ್ನು ಮಾರಿ ಹಾಗೂ ಮೂರರಿಂದ ನಾಲ್ಕು ದಿನಗಳಲ್ಲಿ ತಮಗೆ ನಿಮ್ಮ ಹಣ ಕೈಸೇರಲಿದೆ ಎಂದರು.
                           ತಾನೂ ಈ ಭಾಗದವನೆ ಆಗಿದ್ದು ಇಲ್ಲಿನ ವರ್ತರು ಮತ್ತು ಅಧಿಕಾರಿಗಳು ಯಾವ ರೀತಿ ಆಟಗಳನ್ನು ಆಡುತ್ತಾರೆಂಬುದನ್ನು ಬಲ್ಲವನಾಗಿದ್ದು, ಈ ಸಂದರ್ಭದಲ್ಲಿ ಯಾರು ತಮ್ಮ ಗೋದಾಮುಗಳಲ್ಲಿ ಹೆಚ್ಚಿನ ಕೊಬ್ಬರಿ ಶೇಖರಣೆ ಮಾಡಿರುತ್ತಾರೆಂದನ್ನು ತನಗೆ ತಿಳಿಸಿ ಅವರ ಗೋಡೋನ್ ಗಳನ್ನು ಸೀಸ್ ಮಾಡಿಸುವುದಾಗಿ ಹಾಗೂ ವರ್ತಕರ ಜೊತೆ ಮಾರುಕಟ್ಟೆ ಅಧಿಕಾರಿಗಳು ಕೈಜೋಡಿಸಿದರೆ ಅವರ ವಿರುದ್ದವೂ ಉಗ್ರಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
              ಹುಳಿಯಾರು ಅಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲದೆ ರೋಗಿಗಳಿಗೆ ತುಂಬಾ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದಾಗ ಸಚಿವರು ಕೂಡಲೇ ಮೊಬೈಲ್ ಮೂಲಕ ಡಿಹೆಚ್ ಓ ಅವರೊಂದಿಗೆ ಮಾತನಾಡಿ ಇನ್ನು ಕೆಲ ದಿನಗಳಲ್ಲಿ ಖಾಯಂ ವೈದ್ಯರನ್ನು ನೇಮಿಸುವಂತೆ ತಿಳಿಸಿದರು. ಅಲ್ಲದೆ ಈ ಭಾಗದಲ್ಲಿ ಶುದ್ದ ಕುಡಿಯುವ ನೀರಿಲ್ಲ ಎಂಬುದು ತಮಗೆ ತಿಳಿದಿದ್ದು,ಬೋರನಕಣಿವೆಯಿಂದ ಹುಳಿಯಾರಿಗೆ ನಿತ್ಯ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವ ಶುದ್ದೀಕರಣ ಘಟಕವನ್ನು ಗ್ರಾಮ ಪಂಚಾಯ್ತಿಯಿಂದ ಬೇರ್ಪಡಿಸಿ ಜಿಲ್ಲಾ ಇಂಜಿನಿಯರ್ ಅವರ ಅಧೀನಕ್ಕೆ ನೀಡಿ,ಸದಾಕಾಲ ಸ್ವಚ್ಚವಾಗಿಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
                  ಈ ಸಂಧರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ಆಶೋಕ್ ಬಾಬು,ಧನುಷ್ ರಂಗನಾಥ್, ಜಬೀಉಲ್ಲಾ, ಮೀಸೆ ರಂಗಪ್ಪ, ಎಪಿಎಂಸಿ ಉಪಾಧ್ಯಕ್ಷ ಸಿದ್ರಾಮಯ್ಯ,ಯಳನಡು ಮಲ್ಲಿಕಣ್ನ, ಹೊಸಳ್ಳಿ ಅಶೋಕ್,ಕೆಂಕೆರೆ ಶಿವಕುಮಾರ್,ಬಡಗಿ ರಾಮಣ್ಣ, ವೆಂಕಟೇಶ್, ಚಿಕ್ಕಬಿದರೆ ಶಾಂತಣ್ಣ,ಚುರುಮುರಿ ಶ್ರೀನಿವಾಸ್ ಹಾಗೂ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...