ವಿಷಯಕ್ಕೆ ಹೋಗಿ

ಗ್ರಾ.ಪಂ. ಸದಸ್ಯರಿಂದ ಡಾಕ್ಟರ್ ವಾಟರ್ ಕುಡಿಯುವ ನೀರಿನ ಘಟಕ್ಕೆ ಬೀಗ:ಸಾರ್ವಜನಿಕರಿಂದ ವಿರೋಧ

ಕ್ಷುಲಕ ಕಾರಣ ನೀಡಿ ಸ್ಥಳೀಯ ಗ್ರಾ.ಪಂ. ಸದಸ್ಯರು ನೀರು ಪೋರೈಕೆ ಘಟಕಕ್ಕೆ ಬೀಗ ಹಾಕಿದ್ದನ್ನು ಪ್ರತಿಭಟಿಸಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ರಸ್ತೆ ತಡೆ ನಡೆಸಿದ್ದಲ್ಲದೆ ಸ್ಥಳಕ್ಕೆ ತಹಶೀಲ್ದಾರರನ್ನು ಕರೆಯಿಸಿ ಘಟಕವನ್ನು ಪುನರಾರಂಭ ಮಾಡಿಸಿದ ಘಟನೆ ಸೋಮವಾರ ಜರುಗಿದೆ.


ಹಿನ್ನಲೆ: ಹುಳಿಯಾರು ಗ್ರಾ.ಪಂ.ಯ ಸಹಭಾಗಿತ್ವದಲ್ಲಿ ಪೋಲೀಸ್ ಠಾಣೆಯ ಹತ್ತಿರ ಡಾಕ್ಟರ್ ವಾಟರ್ ಘಟಕವನ್ನು ಸ್ಥಾಪಿಸಿದ್ದು, 20ಲೀ ನ ಒಂದು ಕ್ಯಾನ್ ಗೆ ಏಳು ರೂ ನಂತೆ ಅಲ್ಲಿಗೆ ಬಂದು ಕೊಂಡೈಯ್ಯುವ ಆಧಾರದ ಮೇಲೆ ನೀರನ್ನು ಸರಬರಾಜು ಮಾಡಲಾಗುತ್ತಿತ್ತು.ಶುದ್ದ ನೀರು ಪ್ರತಿಯೊಂದು ಮನೆಗೂ ತಲುಪಿಸುವ ನಿಟ್ಟಿನಲ್ಲಿ ಕಳೆದ ಕೆಲ ತಿಂಗಳ ಹಿಂದೆ ನೀರಿನ ಕ್ಯಾನ್ ನ ವಿತರಣೆಯನ್ನು ಖಾಸಗಿ ವ್ಯಕ್ತಿಯವರಿಗೆ ನೀಡಿದ್ದು, ಅವರು ಪ್ರತಿ ಕ್ಯಾನ್ ಗೆ ರೂ.15ರಂತೆ ಮನೆ ಬಾಗಿಲಿಗೆ ವಿತರಣೆ ಮಾಡುತ್ತಿದ್ದರು.ಖಾಸಗಿ ವ್ಯಕ್ತಿಗೆ ವಿತರಣೆ ನೀಡಿದ್ದನ್ನು ವಿರೋಧಿಸಿ ಕೆಲ ಸದಸ್ಯರುಗಳು ಡಾಕ್ಟರ್ ವಾಟರ್ ಘಟಕಕ್ಕೆ ಬೀಗ ಹಾಕಿದ್ದಲ್ಲದೆ,ಬೋರಿನಿಂದ ಸರಬರಾಜಾಗುತ್ತಿದ್ದ ನೀರಿನ ಪೈಪನ್ನು ಸಹ ಕಿತ್ತುಹಾಕಿದ್ದರು. ಇದರಿಂದಾಗಿ ನಾಲ್ಕೈದು ದಿನಗಳಿಂದ ಈ ಘಟಕ ಸ್ಥಗಿತ ಗೊಂಡು ಜನ ಕುಡಿಯಲು ನೀರಿಲ್ಲದೆ ಪರದಾಡುವಂತಾಗಿತ್ತು.


ಪ್ರತಿಭಟನೆ ಏಕೆ: ಸದಸ್ಯರ ಕ್ರಮದ ಬಗ್ಗೆ ಅಸಮದಾನ ವ್ಯಕ್ತ ಪಡಿಸಿದ ಸಾರ್ವಜನಿಕರು ಘಟಕದ ಬಳಿಯೇ ಏಳು ರೂಗೆ ಕೊಡುತ್ತಿದ್ದ ನೀರನ್ನು ಸ್ಥಗಿತಗೊಳಿಸಿದ್ದನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿ ರಸ್ತೆ ತಡೆ ನಡೆಸಿದರು. ಎಲ್.ಆರ್.ಚಂದ್ರಶೇಖರ್ ಮತ್ತಿತರರು ಮಾತನಾಡಿ, ಹುಳಿಯಾರು ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು ಜನ ಕುಡಿಯುವ ನೀರನ್ನು ಕಿ.ಮೀ.ದೂರ ಸಾಗಿ ತರಬೇಕಿದೆ.ಅಲ್ಲದೆ ಪಟ್ಟಣದ ಸುತ್ತಮುತ್ತ ದೊರೆಯುವ ನೀರಿನಲ್ಲಿ ಪ್ಲೋರೈಡ್ ಅಂಶ ಅಧಿಕವಿದ್ದು,ಇದನ್ನು ಸೇವಿಸುವುದರಿಂದ ಜನ ಅನೇಕ ತೊಂದರೆಗಳಿಗೆ ಒಳಗಾಗುತ್ತಿದ್ದಾರೆ. ಹುಳಿಯಾರಿನ ಜನತೆಯ ಅದೃಷ್ಟವೆಂಬಂತೆ ಡಾಕ್ಟರ್ ವಾಟರ್ ಕಂಪನಿಯವರು ತಮ್ಮ ಘಟಕವನ್ನು ಇಲ್ಲಿ ಸ್ಥಾಪಿಸುವ ಮೂಲಕ ಉತ್ತಮ ನೀರಿನ ಪೋರೈಕೆಗೆ ಮುಂದಾಗಿ ನೀರು ಸರಬರಾಜು ಮಾಡುತ್ತಿರುವುದು ಶ್ಲಾಘಾನೀಯ. ಗ್ರಾ.ಪಂ.ಯ ಸದಸ್ಯರುಗಳ ನಡುವೆ ರಾಜಕೀಯ ಹಾಗೂ ಕಿತ್ತಾಟದ ಫಲವಾಗಿ ಘಟಕಕ್ಕೆ ಬೀಗ ಹಾಕಿರುವುದು ಕೂಡಲೇ ತೆರವು ಮಾಡದಿದ್ದಲ್ಲಿ ಹಾಗೂ ಪೂರೈಕೆ ಪೈಪ್ ಕಿತ್ತು ಹಾಕಿರುವ ಸದಸ್ಯರುಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನೆಯ ವಿಷಯ ತಿಳಿದು ಸಿಪಿಐ ಪ್ರಭಾಕರ್ ಅವರೊಂದಿಗೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಕಾಮಾಕ್ಷಮ್ಮ ಪ್ರತಿಭಟನಾಕಾರ ಸಮಸ್ಯೆಯನ್ನು ಆಲಿಸಿ,ಡಾಕ್ಟರ್ ವಾಟರ್ ಘಟಕದ ಅಧಿಕಾರಿಯೊಂದಿಗೆ ಮಾತನಾಡಿ,ಗ್ರಾ.ಪಂ.ಯವರೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಬಗ್ಗೆ ವಿಚಾರಿಸಿದರು. ಡಾಕ್ಟರ್ ವಾಟರ್ ಸಂಸ್ಥೆ ಹಾಗೂ ಗ್ರಾ.ಪಂ.ಯವರ ನಡುವೆ 15 ವರ್ಷದ ಒಪ್ಪಂದವಿದ್ದು, ಇದರ ನಿರ್ವಹಣೆಯನ್ನು 15ವರ್ಷದವರೆಗೆ ಕಂಪನಿಯೇ ನಿಭಾಯಿಸಿ ನಂತರ ಗ್ರಾ.ಪಂ.ವ್ಯಾಪ್ತಿಗೆ ಬಿಟ್ಟುಕೊಡುವುದಾಗಿದೆ.ಆದರೆ ಈಗ ಗ್ರಾ.ಪಂ.ಯವರೇ ಕೊಳವೆ ಬಾವಿಯ ಪೈಪ್ ತುಂಡರಿಸಿ ಈ ಘಟಕ ಸ್ಥಗಿತಗೊಳ್ಳುಂತೆ ಮಾಡಿರುವುದು ತಪ್ಪು,ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿ,ಕೊಳವೆಬಾವಿಯ ಪೈಪನ್ನು ಸರಿಪಡಿಸುವಂತೆ ಹೇಳಿ ಪ್ರತಿಬಟನೆಯನ್ನು ಹಿಂಪಡೆಯುವಂತೆ ಮಾಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾವೇದಿಕೆ,ಟಿಪ್ಪುಯುವಕ ಸಂಘ,ರೈತಸಂಘ,ಕನ್ನಡಸೇನೆ ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...