ವಿಷಯಕ್ಕೆ ಹೋಗಿ

ಜಾನುವಾರು ಮೇವಿಗಾಗಿ ರೈತರಿಗೆ ಉಚಿತ ಬಿತ್ತನೆ ಬೀಜದ ಜೋಳ ವಿತರಣೆ

ಸರ್ಕಾರದ ಬರಪರಿಹಾರ ಯೋಜನೆಯಡಿ ಪಟ್ಟಣದ ಪಶು ಆರೋಗ್ಯಕೇಂದ್ರದಲ್ಲಿ ಹುಳಿಯಾರು ಹಾಗೂ ಸುತ್ತಮುತ್ತಲ ಹಳ್ಳಿಗಳ ರೈತರಿಗೆ ಜಾನುವಾರುಗಳ ಮೇವಿಗಾಗಿ ಬಿತ್ತನೆ ಬೀಜದ ಜೋಳನ್ನು ಉಚಿತ ವಿತರಣೆ ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ ಶನಿವಾರ ಚಾಲನೆ ನೀಡಿದರು.
ಬರಪರಿಹಾರ ಯೋಜನೆಯಡಿ ಜಾನುವಾರುಗಳ ಮೇವಿಗಾಗಿ ಬಿತ್ತನೆ ಬೀಜದ ಜೋಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಯಿತು.ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ,ತಾ.ಪಂ.ಸದಸ್ಯರಾದ ಕೆಂಕೆರೆ ನವೀನ್,ಜಯಣ್ಣ ಪಶು ವೈಧ್ಯಾಧಿಕಾರಿ ಡಾ||ಮಂಜುನಾಥ್ ಇದ್ದಾರೆ.
 ಈ ಸಂಧರ್ಭದಲ್ಲಿ ಪಶು ವೈಧ್ಯಾಧಿಕಾರಿ ಡಾ||ಮಂಜುನಾಥ್ ಮಾತನಾಡಿ,ಸರ್ಕಾರದವತಿಯಿಂದ ರೈತರಿಗಾಗಿ ಸಾಕಷ್ಟು ಸೌಲಭ್ಯಗಳಿವೆ ಅಂತೆಯೇ ತಮ್ಮ ಪಶು ಇಲಾಖೆವತಿಯಿಂದ ಉಚಿತ ಬಿತ್ತನೆ ಬೀಜ,ರಾಸುಗಳಿಗೆ ಉಚಿತ ಲಸಿಕೆ ಹಾಕುವ ಕಾರ್ಯಕ್ರಮ,ಗೊಬ್ಬರ ವಿತರಣೆಯನ್ನು ಮಾಡಲಾಗುತ್ತಿದೆ. ಕಳೆದ ಎರಡು-ಮೂರು ವರ್ಷಗಳಿಂದ ಈ ಭಾಗದಲ್ಲಿ ಬರಗಾಲ ವ್ಯಾಪಿಸಿದ್ದು ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ,ಮೇವಿಲ್ಲದೆ ರೈತರು ದನಕರುಗಳನ್ನು ಖಾಸಾಯಿ ಖಾನೆಗೆ ದೂಡುತ್ತಿದ್ದಾರೆ.ಇದನ್ನು ಅರಿತ ಸರ್ಕಾರ ಜಾನುವಾರುಗಳಿಗೆ ಅಗತ್ಯವಾಗಿ ಬೇಕಾಗಿರುವ ಮೇವನ್ನು ಬೇಳೆದುಕೊಳ್ಳಲು ರೈತರಿಗೆ ಉಚಿತವಾಗಿ ಮೇವಿಗೆ ಯೋಗ್ಯವಾದ ಜೋಳವನ್ನು ನೀಡುತ್ತಿದೆ.ಈ ಜೋಳವನ್ನು ಭಿತ್ತಿ ಕಟಾವು ಮಾಡಿದ ನಂತರ ಸ್ವಲ್ಪ ನೀರು ಹಾಯಿಸಿದರೆ ಪುನ: ಚಿಗುರುತ್ತದೆ ಎಂದರು. ರಾಸುಗಳಿಗೆ ಬರುವ ಕಲುಬಾಯಿ ರೋಗಕ್ಕೆ ಲಸಿಕೆ ಹಾಕುವ ಕಾರ್ಯಕ್ರಮವಿದ್ದು ಪಟ್ಟಣದಲ್ಲಿ ಮೂರುಕಡೆ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುತ್ತವೆ ಹಾಗೂ ಹಳ್ಳಿಗಳಿಗೆ ಸ್ವತ: ತಾವೇ ಹೋಗಿ ಲಸಿಕೆ ಹಾಕುತ್ತವೇ. ಪ್ರತಿಯೊಬ್ಬ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ತಿಳಿಸಿದರು ಹಾಗೂ ಲಸಿಕೆ ಹಾಕುವ ಕಾರ್ಯಕ್ರಮದ ಬಗ್ಗೆ ಗ್ರಾಮ ಪಂಚಾಯ್ತಿಯವರು ಬಹಿರಂಗ ಪ್ರಚಾರ ಮಾಡುವಂತೆ ಕೋರಿದರು.
ತಾ.ಪಂ.ಸದಸ್ಯ ಕೆಂಕೆರೆ ನವೀನ್ ಮಾತನಾಡಿ,ಪ್ರಸ್ತುತ ಜಾನುವಾರುಗಳ ಸಂಖ್ಯೆ ಕ್ಷೀಣಿಸಿದ್ದು,ರೈತರು ವ್ಯವಸಾಯವನ್ನು ಬಿಟ್ಟು ನಗರಗಳತ್ತ ವಲಸೆ ಹೋಗುತ್ತಿದ್ದಾರೆ ಎಂದು ವಿಷಾದಿಸಿದರು. ಬರಗಾಲದಿಂದ ರೈತರು ಹೆಚ್ಚಿನ ಕಷ್ಟದಲ್ಲಿ ಸಿಲುಕಿದ್ದು,ಇತ್ತ ಉತ್ತಮ ಮಳೆಯಾಗದೇ ಬೆಳೆಯು ಇಲ್ಲ,ಜಾನುವಾರುಗಳಿಗೆ ಮೇವು ಇಲ್ಲದಂತಾಗಿ ಪರಿತಪಿಸುತ್ತಿದ್ದಾರೆ ಎಂದರು.ರೈತರು ತಮ್ಮ ಜಾನುವಾರುಗಳಿಗೆ ಯಾವುದೇ ಸಮಸ್ಯೆ ಬಂದರೂ ನಿರ್ಲಕ್ಷಿಸದೆ ತಕ್ಷಣವೇ ಪಶು ವೈದ್ಯರನ್ನು ಭೇಟಿ ಮಾಡಿ ಪಶುಗಳಿಗೆ ಜೌಷದೋಪಚಾರ ಮಾಡಿಸಿ,ಈ ಭಾಗದಲ್ಲಿ ಮಂಜುನಾಥ್ ಅವರಂತಹ ಉತ್ತಮ ಡಾಕ್ಟರ್ ಇರುವುದು ನಮ್ಮೆಲ್ಲರಿಗೂ ಹೆಚ್ಚಿನ ಉಪಯೋಗವಾಗಲಿದೆ ಎಂದರು.
ನೇಪಿಯಲ್ ಕಡ್ಡಿ ಮೇವನ್ನು ಬೆಳೆಯುಲು ಮುಂದಾಗಿರುವ ರೈತರಿಗೆ ಉಚಿತವಾಗಿ ಒಂದು ಫೈಬರ್ ಬಾಂಡ್ಲಿ,ಪಿಕಾಸಿ,ಎರಡು ಚೀಲ ಯೂರಿಯಾ,ಒಂದು ಚೀಲ ಡಿಎಪಿ ಗೊಬ್ಬರವನ್ನು ವಿತರಿಸಲಾಯಿತು. ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ,ತಾ.ಪಂ.ಸದಸ್ಯ ಜಯಣ್ಣ ಸೇರಿದಂತೆ ಹುಳಿಯಾರು ಹಾಗೂ ಸುತ್ತಮುತ್ತಲ ಹಳ್ಳಿಗಳ ರೈತರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...