ವಿಷಯಕ್ಕೆ ಹೋಗಿ

ಜಾನುವಾರು ಮೇವಿಗಾಗಿ ರೈತರಿಗೆ ಉಚಿತ ಬಿತ್ತನೆ ಬೀಜದ ಜೋಳ ವಿತರಣೆ

ಸರ್ಕಾರದ ಬರಪರಿಹಾರ ಯೋಜನೆಯಡಿ ಪಟ್ಟಣದ ಪಶು ಆರೋಗ್ಯಕೇಂದ್ರದಲ್ಲಿ ಹುಳಿಯಾರು ಹಾಗೂ ಸುತ್ತಮುತ್ತಲ ಹಳ್ಳಿಗಳ ರೈತರಿಗೆ ಜಾನುವಾರುಗಳ ಮೇವಿಗಾಗಿ ಬಿತ್ತನೆ ಬೀಜದ ಜೋಳನ್ನು ಉಚಿತ ವಿತರಣೆ ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ ಶನಿವಾರ ಚಾಲನೆ ನೀಡಿದರು.
ಬರಪರಿಹಾರ ಯೋಜನೆಯಡಿ ಜಾನುವಾರುಗಳ ಮೇವಿಗಾಗಿ ಬಿತ್ತನೆ ಬೀಜದ ಜೋಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಯಿತು.ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ,ತಾ.ಪಂ.ಸದಸ್ಯರಾದ ಕೆಂಕೆರೆ ನವೀನ್,ಜಯಣ್ಣ ಪಶು ವೈಧ್ಯಾಧಿಕಾರಿ ಡಾ||ಮಂಜುನಾಥ್ ಇದ್ದಾರೆ.
 ಈ ಸಂಧರ್ಭದಲ್ಲಿ ಪಶು ವೈಧ್ಯಾಧಿಕಾರಿ ಡಾ||ಮಂಜುನಾಥ್ ಮಾತನಾಡಿ,ಸರ್ಕಾರದವತಿಯಿಂದ ರೈತರಿಗಾಗಿ ಸಾಕಷ್ಟು ಸೌಲಭ್ಯಗಳಿವೆ ಅಂತೆಯೇ ತಮ್ಮ ಪಶು ಇಲಾಖೆವತಿಯಿಂದ ಉಚಿತ ಬಿತ್ತನೆ ಬೀಜ,ರಾಸುಗಳಿಗೆ ಉಚಿತ ಲಸಿಕೆ ಹಾಕುವ ಕಾರ್ಯಕ್ರಮ,ಗೊಬ್ಬರ ವಿತರಣೆಯನ್ನು ಮಾಡಲಾಗುತ್ತಿದೆ. ಕಳೆದ ಎರಡು-ಮೂರು ವರ್ಷಗಳಿಂದ ಈ ಭಾಗದಲ್ಲಿ ಬರಗಾಲ ವ್ಯಾಪಿಸಿದ್ದು ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ,ಮೇವಿಲ್ಲದೆ ರೈತರು ದನಕರುಗಳನ್ನು ಖಾಸಾಯಿ ಖಾನೆಗೆ ದೂಡುತ್ತಿದ್ದಾರೆ.ಇದನ್ನು ಅರಿತ ಸರ್ಕಾರ ಜಾನುವಾರುಗಳಿಗೆ ಅಗತ್ಯವಾಗಿ ಬೇಕಾಗಿರುವ ಮೇವನ್ನು ಬೇಳೆದುಕೊಳ್ಳಲು ರೈತರಿಗೆ ಉಚಿತವಾಗಿ ಮೇವಿಗೆ ಯೋಗ್ಯವಾದ ಜೋಳವನ್ನು ನೀಡುತ್ತಿದೆ.ಈ ಜೋಳವನ್ನು ಭಿತ್ತಿ ಕಟಾವು ಮಾಡಿದ ನಂತರ ಸ್ವಲ್ಪ ನೀರು ಹಾಯಿಸಿದರೆ ಪುನ: ಚಿಗುರುತ್ತದೆ ಎಂದರು. ರಾಸುಗಳಿಗೆ ಬರುವ ಕಲುಬಾಯಿ ರೋಗಕ್ಕೆ ಲಸಿಕೆ ಹಾಕುವ ಕಾರ್ಯಕ್ರಮವಿದ್ದು ಪಟ್ಟಣದಲ್ಲಿ ಮೂರುಕಡೆ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುತ್ತವೆ ಹಾಗೂ ಹಳ್ಳಿಗಳಿಗೆ ಸ್ವತ: ತಾವೇ ಹೋಗಿ ಲಸಿಕೆ ಹಾಕುತ್ತವೇ. ಪ್ರತಿಯೊಬ್ಬ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ತಿಳಿಸಿದರು ಹಾಗೂ ಲಸಿಕೆ ಹಾಕುವ ಕಾರ್ಯಕ್ರಮದ ಬಗ್ಗೆ ಗ್ರಾಮ ಪಂಚಾಯ್ತಿಯವರು ಬಹಿರಂಗ ಪ್ರಚಾರ ಮಾಡುವಂತೆ ಕೋರಿದರು.
ತಾ.ಪಂ.ಸದಸ್ಯ ಕೆಂಕೆರೆ ನವೀನ್ ಮಾತನಾಡಿ,ಪ್ರಸ್ತುತ ಜಾನುವಾರುಗಳ ಸಂಖ್ಯೆ ಕ್ಷೀಣಿಸಿದ್ದು,ರೈತರು ವ್ಯವಸಾಯವನ್ನು ಬಿಟ್ಟು ನಗರಗಳತ್ತ ವಲಸೆ ಹೋಗುತ್ತಿದ್ದಾರೆ ಎಂದು ವಿಷಾದಿಸಿದರು. ಬರಗಾಲದಿಂದ ರೈತರು ಹೆಚ್ಚಿನ ಕಷ್ಟದಲ್ಲಿ ಸಿಲುಕಿದ್ದು,ಇತ್ತ ಉತ್ತಮ ಮಳೆಯಾಗದೇ ಬೆಳೆಯು ಇಲ್ಲ,ಜಾನುವಾರುಗಳಿಗೆ ಮೇವು ಇಲ್ಲದಂತಾಗಿ ಪರಿತಪಿಸುತ್ತಿದ್ದಾರೆ ಎಂದರು.ರೈತರು ತಮ್ಮ ಜಾನುವಾರುಗಳಿಗೆ ಯಾವುದೇ ಸಮಸ್ಯೆ ಬಂದರೂ ನಿರ್ಲಕ್ಷಿಸದೆ ತಕ್ಷಣವೇ ಪಶು ವೈದ್ಯರನ್ನು ಭೇಟಿ ಮಾಡಿ ಪಶುಗಳಿಗೆ ಜೌಷದೋಪಚಾರ ಮಾಡಿಸಿ,ಈ ಭಾಗದಲ್ಲಿ ಮಂಜುನಾಥ್ ಅವರಂತಹ ಉತ್ತಮ ಡಾಕ್ಟರ್ ಇರುವುದು ನಮ್ಮೆಲ್ಲರಿಗೂ ಹೆಚ್ಚಿನ ಉಪಯೋಗವಾಗಲಿದೆ ಎಂದರು.
ನೇಪಿಯಲ್ ಕಡ್ಡಿ ಮೇವನ್ನು ಬೆಳೆಯುಲು ಮುಂದಾಗಿರುವ ರೈತರಿಗೆ ಉಚಿತವಾಗಿ ಒಂದು ಫೈಬರ್ ಬಾಂಡ್ಲಿ,ಪಿಕಾಸಿ,ಎರಡು ಚೀಲ ಯೂರಿಯಾ,ಒಂದು ಚೀಲ ಡಿಎಪಿ ಗೊಬ್ಬರವನ್ನು ವಿತರಿಸಲಾಯಿತು. ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ,ತಾ.ಪಂ.ಸದಸ್ಯ ಜಯಣ್ಣ ಸೇರಿದಂತೆ ಹುಳಿಯಾರು ಹಾಗೂ ಸುತ್ತಮುತ್ತಲ ಹಳ್ಳಿಗಳ ರೈತರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...