ವಿಷಯಕ್ಕೆ ಹೋಗಿ

ಕ್ರೀಡಾಕೂಟದಲ್ಲಿ ದ್ವೇಷ,ಅಸೂಯೆ ಬೇಡ : ಎಲ್.ಆರ್.ಸಿ

          ಶಾಲಾ ಶೈಕ್ಷಣಿಕ ಚಟುವಟಿಕೆಯ ಭಾಗವಾಗಿರುವ ಕ್ರಿಡಾಕೂಟದಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡು,ಪ್ರತಿಯೊಂದು ಆಟದಲ್ಲಿ ಉತ್ಸಾಹದಿಂದ ಆಡುತ್ತಾ ಸೋಲು,ಗೆಲುವನ್ನು ಸರಿಸಮನಾಗಿ ತೆಗೆದುಕೊಳ್ಳಬೇಕೆ ಹೊರತು ಸಣ್ಣಪುಟ್ಟ ಕಾರಣಗಳಿಂದಾಗಿ ಕ್ರಿಡಾಪಟುಗಳಾಗಲಿ,ತರಬೇತುದಾರರಾಗಲಿ ದ್ವೇಷ,ಅಸೂಯೆಯ ಭಾವನೆಯನ್ನು ಬೆಳೆಸಿಕೊಳ್ಳಬಾರದೆಂದು ವಾಸವಿ ವಿದ್ಯಾಸಂಸ್ಥೆಯ ಸಹಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್ ಕಿವಿಮಾತು ಹೇಳಿದರು.
ಹುಳಿಯಾರಿನ ವಾಸವಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ಮಂಗಳವಾರ ಪ್ರಾರಂಭವಾದ ಪ್ರಾಥಮಿಕ ಶಾಲೆಗಳ ಎ ವಿಭಾಗದ ಹೋಬಳಿ ಮಟ್ಟದ ಕ್ರಿಡಾಕೂಟದಲ್ಲಿ ಕ್ರಿಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ,ಅವರು ಮಾತನಾಡಿದರು ,
ಹುಳಿಯಾರಿನ ವಾಸವಿಶಾಲಾ ಮೈದಾನದಲ್ಲಿ ಪ್ರಾರಂಭಗೊಂಡ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಗೆ ಸಂಸ್ಥೆಯ ಸಹಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರು.
               ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಒಂದು ವೇದಿಕೆಯಾಗಿ ಕ್ರೀಡಾಕೂಟ ಬಿಂಬಿತವಾಗಬೇಕು ಹಾಗೂ ಶಿಕ್ಷಕರು ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹದ ಮನೋಭಾವ ಮೂಡಿಸಿ ಪ್ರತಿಯೊಂದು ಮಗು ತನಗಿಷ್ಟವಾದ ಒಂದು ಆಟದಲ್ಲಾದರೂ ಸ್ಪರ್ಧಿಸುವಂತೆ ಮಾಡಬೇಕು ಎಂದರು.ಕ್ರೀಡಾಕೂಟದಲ್ಲಿ ಭಾಗವಹಿಸಿರುವ ವಿವಿಧ ಶಾಲೆಯ ಮಕ್ಕಳು ತಾವೆಲ್ಲಾ ಒಂದೇ ಶಾಲಾ ಮಕ್ಕಳು ಎಂದು ಭಾವಿಸಿ ಆಟಗಳನ್ನು ಆಡುತ್ತಾ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಬೇಕು.ಸ್ಪರ್ಧಾಳುಗಳು ಆಡುವ ಆಟವನ್ನು ಶ್ರದ್ದೆಯಿಂದ ಆಡಿದರೆ ಗೆಲವು ಲಭಿಸುತ್ತದೆ ಎಂದು ಕ್ರಿಡಾಪಟುಗಳನ್ನು ಹಾರೈಸಿದರು.

        ಕ್ರೀಡಾಂಗಣದ ಅವಶ್ಯಕತೆ ಇದೆ: ಹುಳಿಯಾರು ಹೋಬಳಿಯಾದ್ಯಂತ ಸಾಕಷ್ಟು ಶಾಲೆಗಳಿದ್ದರೂ ಸಹ ಕೇವಲ ಎರಡು ಮೂರು ಶಾಲೆಗಳು ವಿಶಾಲ ಆಟದ ಮೈದಾನ ಹೊಂದಿವೆ ಹೊರತು ಉಳಿದ ಅನೇಕ ಶಾಲೆಗಳಲ್ಲಿ ವಿಶಾಲ ಆಟದ ಮೈದಾನವಿಲ್ಲ, ಇದನ್ನು ಶಿಕ್ಷಣ ಇಲಾಖೆಯವರು ಗಂಭೀರವಾಗಿ ಪರಿಗಣಿಸಿ ಸುಸಜ್ಜಿತವಾದ ಹಾಗೂ ಕ್ರಿಡಾಕೂಟಗಳನ್ನು ನಡೆಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಒಳಗೊಂಡಂತಹ ಒಂದು ಕ್ರೀಡಾಂಗಣವನ್ನು ಪಟ್ಟಣದಲ್ಲಿ ಅಗತ್ಯವಾಗಿ,ಶೀಘ್ರದಲ್ಲಿ ನಿರ್ಮಿಸಬೇಕಿದೆ ಎಂದರು.

               ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ನರಸಿಂಹಮೂರ್ತಿ ಮಾತನಾಡಿ, ಪ್ರತಿ ಮಗುವು ಆಟದಲ್ಲಿ ನೆಪ ಮಾತ್ರಕ್ಕೆ ಭಾಗವಹಿಸದೆ ಒಂದು ಗುರಿಯನ್ನು ಹೊಂದಿ ಮುನ್ನೆಡೆಯಬೇಕು ಎಂದರು.ಕ್ರಿಡಾಕೂಟದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶಕೊಡದೆ,ಹರ್ಷದಾಯಕವಾಗಿ ಕ್ರಿಡೆಗಳನ್ನು ನಡೆಸುವಂತೆ ಸಿಬ್ಬಂದಿವರ್ಗದವರಿಗೆ ತಿಳಿಸಿದರು.
ಹೋಬಳಿ ಮಟ್ಟದ ಎ ವಿಭಾಗದ ಪ್ರಾಥಮಿಕಶಾಲಾ ಕ್ರಿಡಾಕೂಟದಲ್ಲಿ ಪಾಲ್ಗೊಂಡಿದ್ದ ತಂಡದ ಮಕ್ಕಳೊಂದಿಗೆ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಆರ್.ಲಕ್ಷ್ಮಿಕಾಂತ್ ಹಸ್ತಲಾಘವ ಮಾಡುವ ಮೂಲಕ ಪರಿಚಯ ಮಾಡಿಕೊಂಡರು.ಎಲ್.ಆರ್.ಚಂದ್ರಶೇಖರ್,ಗ್ರಾ.ಪಂ.ಅಧ್ಯಕ್ಷ ಪುಟ್ಟಿಬಾಯಿ ಹಾಗೂ ದೈಹಿಕ ಶಿಕ್ಷಕರಿದ್ದಾರೆ.
             ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಆರ್.ಲಕ್ಷ್ಮಿಕಾಂತ್ ಕ್ರೀಡಾಕೂಟದ ಅಧ್ಯಕ್ಷತೆವಹಿಸಿದ್ದು, ಸಂಸ್ಥೆಯ ನಿರ್ದೇಶಕ ಅಜೆಯ್ ವಾಲಿಬಾಲನ್ನು ಚಿಮ್ಮುವ ಮೂಲಕ ಕ್ರಿಡಾಕೂದ ಉದ್ಘಾಟನೆ ನೆರವೇರಿಸಿದರು.ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ, ವಾಸವಿ ಶಾಲೆಯ ಮುಖ್ಯಶಿಕ್ಷಕಿ ಗಾಯತ್ರಿ, ಸಿಅರ್.ಪಿ.ಗಳಾದ ಮಹಲಿಂಗಪ್ಪ,ಉಮಾಮಹೇಶ್, ಸಂಸ್ಥೆಯ ಕಾರ್ಯದರ್ಶಿ ರಾಮನಾಥ್, ಪದಾಧಿಕಾರಿಗಳಾದ ರಾಮಕಾಂತ್,ಶ್ರೀನಿವಾಸ್ ಬಿ.ವಿ,ಜ್ಯೋತಿನಾಗರಾಜು ಸೇರಿದಂತೆ ನಾನಾ ಶಾಲೆಗಳ ದೈಹಿಕಶಿಕ್ಷಕರು,ಸಿಬ್ಬಂದಿಯವರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...