ವಿಷಯಕ್ಕೆ ಹೋಗಿ

ಕ್ರೀಡಾಕೂಟದಲ್ಲಿ ದ್ವೇಷ,ಅಸೂಯೆ ಬೇಡ : ಎಲ್.ಆರ್.ಸಿ

          ಶಾಲಾ ಶೈಕ್ಷಣಿಕ ಚಟುವಟಿಕೆಯ ಭಾಗವಾಗಿರುವ ಕ್ರಿಡಾಕೂಟದಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡು,ಪ್ರತಿಯೊಂದು ಆಟದಲ್ಲಿ ಉತ್ಸಾಹದಿಂದ ಆಡುತ್ತಾ ಸೋಲು,ಗೆಲುವನ್ನು ಸರಿಸಮನಾಗಿ ತೆಗೆದುಕೊಳ್ಳಬೇಕೆ ಹೊರತು ಸಣ್ಣಪುಟ್ಟ ಕಾರಣಗಳಿಂದಾಗಿ ಕ್ರಿಡಾಪಟುಗಳಾಗಲಿ,ತರಬೇತುದಾರರಾಗಲಿ ದ್ವೇಷ,ಅಸೂಯೆಯ ಭಾವನೆಯನ್ನು ಬೆಳೆಸಿಕೊಳ್ಳಬಾರದೆಂದು ವಾಸವಿ ವಿದ್ಯಾಸಂಸ್ಥೆಯ ಸಹಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್ ಕಿವಿಮಾತು ಹೇಳಿದರು.
ಹುಳಿಯಾರಿನ ವಾಸವಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ಮಂಗಳವಾರ ಪ್ರಾರಂಭವಾದ ಪ್ರಾಥಮಿಕ ಶಾಲೆಗಳ ಎ ವಿಭಾಗದ ಹೋಬಳಿ ಮಟ್ಟದ ಕ್ರಿಡಾಕೂಟದಲ್ಲಿ ಕ್ರಿಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ,ಅವರು ಮಾತನಾಡಿದರು ,
ಹುಳಿಯಾರಿನ ವಾಸವಿಶಾಲಾ ಮೈದಾನದಲ್ಲಿ ಪ್ರಾರಂಭಗೊಂಡ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಗೆ ಸಂಸ್ಥೆಯ ಸಹಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರು.
               ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಒಂದು ವೇದಿಕೆಯಾಗಿ ಕ್ರೀಡಾಕೂಟ ಬಿಂಬಿತವಾಗಬೇಕು ಹಾಗೂ ಶಿಕ್ಷಕರು ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹದ ಮನೋಭಾವ ಮೂಡಿಸಿ ಪ್ರತಿಯೊಂದು ಮಗು ತನಗಿಷ್ಟವಾದ ಒಂದು ಆಟದಲ್ಲಾದರೂ ಸ್ಪರ್ಧಿಸುವಂತೆ ಮಾಡಬೇಕು ಎಂದರು.ಕ್ರೀಡಾಕೂಟದಲ್ಲಿ ಭಾಗವಹಿಸಿರುವ ವಿವಿಧ ಶಾಲೆಯ ಮಕ್ಕಳು ತಾವೆಲ್ಲಾ ಒಂದೇ ಶಾಲಾ ಮಕ್ಕಳು ಎಂದು ಭಾವಿಸಿ ಆಟಗಳನ್ನು ಆಡುತ್ತಾ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಬೇಕು.ಸ್ಪರ್ಧಾಳುಗಳು ಆಡುವ ಆಟವನ್ನು ಶ್ರದ್ದೆಯಿಂದ ಆಡಿದರೆ ಗೆಲವು ಲಭಿಸುತ್ತದೆ ಎಂದು ಕ್ರಿಡಾಪಟುಗಳನ್ನು ಹಾರೈಸಿದರು.

        ಕ್ರೀಡಾಂಗಣದ ಅವಶ್ಯಕತೆ ಇದೆ: ಹುಳಿಯಾರು ಹೋಬಳಿಯಾದ್ಯಂತ ಸಾಕಷ್ಟು ಶಾಲೆಗಳಿದ್ದರೂ ಸಹ ಕೇವಲ ಎರಡು ಮೂರು ಶಾಲೆಗಳು ವಿಶಾಲ ಆಟದ ಮೈದಾನ ಹೊಂದಿವೆ ಹೊರತು ಉಳಿದ ಅನೇಕ ಶಾಲೆಗಳಲ್ಲಿ ವಿಶಾಲ ಆಟದ ಮೈದಾನವಿಲ್ಲ, ಇದನ್ನು ಶಿಕ್ಷಣ ಇಲಾಖೆಯವರು ಗಂಭೀರವಾಗಿ ಪರಿಗಣಿಸಿ ಸುಸಜ್ಜಿತವಾದ ಹಾಗೂ ಕ್ರಿಡಾಕೂಟಗಳನ್ನು ನಡೆಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಒಳಗೊಂಡಂತಹ ಒಂದು ಕ್ರೀಡಾಂಗಣವನ್ನು ಪಟ್ಟಣದಲ್ಲಿ ಅಗತ್ಯವಾಗಿ,ಶೀಘ್ರದಲ್ಲಿ ನಿರ್ಮಿಸಬೇಕಿದೆ ಎಂದರು.

               ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ನರಸಿಂಹಮೂರ್ತಿ ಮಾತನಾಡಿ, ಪ್ರತಿ ಮಗುವು ಆಟದಲ್ಲಿ ನೆಪ ಮಾತ್ರಕ್ಕೆ ಭಾಗವಹಿಸದೆ ಒಂದು ಗುರಿಯನ್ನು ಹೊಂದಿ ಮುನ್ನೆಡೆಯಬೇಕು ಎಂದರು.ಕ್ರಿಡಾಕೂಟದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶಕೊಡದೆ,ಹರ್ಷದಾಯಕವಾಗಿ ಕ್ರಿಡೆಗಳನ್ನು ನಡೆಸುವಂತೆ ಸಿಬ್ಬಂದಿವರ್ಗದವರಿಗೆ ತಿಳಿಸಿದರು.
ಹೋಬಳಿ ಮಟ್ಟದ ಎ ವಿಭಾಗದ ಪ್ರಾಥಮಿಕಶಾಲಾ ಕ್ರಿಡಾಕೂಟದಲ್ಲಿ ಪಾಲ್ಗೊಂಡಿದ್ದ ತಂಡದ ಮಕ್ಕಳೊಂದಿಗೆ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಆರ್.ಲಕ್ಷ್ಮಿಕಾಂತ್ ಹಸ್ತಲಾಘವ ಮಾಡುವ ಮೂಲಕ ಪರಿಚಯ ಮಾಡಿಕೊಂಡರು.ಎಲ್.ಆರ್.ಚಂದ್ರಶೇಖರ್,ಗ್ರಾ.ಪಂ.ಅಧ್ಯಕ್ಷ ಪುಟ್ಟಿಬಾಯಿ ಹಾಗೂ ದೈಹಿಕ ಶಿಕ್ಷಕರಿದ್ದಾರೆ.
             ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಆರ್.ಲಕ್ಷ್ಮಿಕಾಂತ್ ಕ್ರೀಡಾಕೂಟದ ಅಧ್ಯಕ್ಷತೆವಹಿಸಿದ್ದು, ಸಂಸ್ಥೆಯ ನಿರ್ದೇಶಕ ಅಜೆಯ್ ವಾಲಿಬಾಲನ್ನು ಚಿಮ್ಮುವ ಮೂಲಕ ಕ್ರಿಡಾಕೂದ ಉದ್ಘಾಟನೆ ನೆರವೇರಿಸಿದರು.ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ, ವಾಸವಿ ಶಾಲೆಯ ಮುಖ್ಯಶಿಕ್ಷಕಿ ಗಾಯತ್ರಿ, ಸಿಅರ್.ಪಿ.ಗಳಾದ ಮಹಲಿಂಗಪ್ಪ,ಉಮಾಮಹೇಶ್, ಸಂಸ್ಥೆಯ ಕಾರ್ಯದರ್ಶಿ ರಾಮನಾಥ್, ಪದಾಧಿಕಾರಿಗಳಾದ ರಾಮಕಾಂತ್,ಶ್ರೀನಿವಾಸ್ ಬಿ.ವಿ,ಜ್ಯೋತಿನಾಗರಾಜು ಸೇರಿದಂತೆ ನಾನಾ ಶಾಲೆಗಳ ದೈಹಿಕಶಿಕ್ಷಕರು,ಸಿಬ್ಬಂದಿಯವರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.