ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸೆಪ್ಟೆಂಬರ್, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಇಂದು(ತಾ.14) ಪೂರ್ವಭಾವಿ ಸಭೆ

 ಇಲ್ಲಿನ ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಖಾಯಂ ವೈದ್ಯರನ್ನು ನೇಮಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಆಹೋರಾತ್ರಿ ಪ್ರತಿಭಟನೆ ನಡೆಸುವ ಸಲುವಾಗಿ ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ಇಂದು (ತಾ.14) ಶನಿವಾರ ಮಧ್ಯಾಹ್ನ 3 ಗಂಟೆಗೆ ಕರೆಯಲಾಗಿದೆ. ಈ ಸಭೆಗೆ ಹೋಬಳಿಯ ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು, ಗ್ರಾ.ಪಂ.ಅಧ್ಯಕ್ಷರು, ಸದಸ್ಯರು,ಸ್ತ್ರೀಶಕ್ತಿ ಸಂಘಗಳು,ಸ್ವಸಹಾಯ ಸಂಘಗಳು,ಹಿರಿಯ ಮುಖಂಡರು,ನಾಗರೀಕರು,ಜನಪ್ರತಿನಿಧಿಗಳು ಹಾಗೂ ಎಲ್ಲಾ ಸಾರ್ವಜನಿಕರು ಪಾಲ್ಗೊಂಡು ತಮ್ಮ ಸಲಹೆಗಳನ್ನು ತಿಳಿಸುವುದರೊಂದಿಗೆ ಸಭೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ದಲಿತ ಸಹಾಯವಾಣಿಯ ತಾಲ್ಲೂಕು ಅಧ್ಯಕ್ಷ ಆರ್.ಹನುಮಂತಯ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ.

ಅಭಿಮಾನಿಗಳಿಂದ ಕೆ.ಎಸ್. ಕೆ ಹುಟ್ಟುಹಬ್ಬ ಆಚರಣೆ

                              ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬವನ್ನು ಹೋಬಳಿಯ ಖಾಸಗಿ ಬಸ್ ಮಾಲೀಕರ ಹಾಗೂ ಏಜೆಂಟರ ಚಾರಿಟಬಲ್ ಟ್ರಸ್ಟ್ ವತಿಯಿಂದ ಇಲ್ಲಿನ ಪರಿವೀಕ್ಷಣಾ ಮಂದಿರದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಏಜೆಂಟರ್ ಸೇವಾ ಚಾರಿಟಬಲ್ ಟ್ರಸ್ಟ್ ನ ಲೋಕೇಶ್, ಹು.ಕೃ.ವಿಶ್ವನಾಥ್, ಇಂತಿಯಾಜ್, ಗಂಗಣ್ಣ,ರಾಜಣ್ಣ,ರಾಘವೇಂದ್ರ.ಎಸ್.ಎಲ್.ಆರ್.ಪ್ರದೀಪ್,ಕರವೇ ಅಧ್ಯಕ್ಷ ಶ್ರೀನಿವಾಸ್,ಗ್ರಾ.ಪಂ.ಸದಸ್ಯ ಹೇಮಂತ್ ಇನ್ನಿತರರು ಪಾಲ್ಗೊಂಡಿದ್ದು,ಸಂಘದ ಪರವಾಗಿ ಏಜೆಂಟ್ ಲೋಕೇಶಣ್ಣ ಸ್ವಾಗತಿಸಿ ಶುಭಕೊರಿದರು. ಸಂಘದವರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕಿರಣ್ ಕುಮಾರ್ ಬಸ್ಸಿನ ಪ್ರಯಾಣಿಕರೊಂದಿಗೆ ಸ್ನೇಹಯುತವಾಗಿ ನಡೆದುಕೊಳ್ಳುವಂತೆ ಏಜೆಂಟರ್ ಗಳಿಗೆ ಕಿವಿಮಾತು ಹೇಳಿದರು. ಬಸ್ ನಿಲ್ದಾಣದ ಸಮಸ್ಯೆಯ ಬಗ್ಗೆ ತಮಗೆ ತಿಳಿದಿದ್ದು, ಶೀಘ್ರದಲ್ಲಿ ಈ ಸಮಸ್ಯೆಯ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು. ಹುಳಿಯಾರಿನ ಖಾಸಗಿ ಬಸ್ ಮಾಲೀಕರ ಹಾಗೂ ಏಜೆಂಟರ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಪರಿವೀಕ್ಷಣಾ ಮಂದಿರದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರ ಹುಟ್ಟುಹಬ್ಬ ಆಚರಿಸಿದರು.ಸಂಘದ ಲೋಕೇಶಣ್ಣ,ರಾಘವೇಂದ್ರ,ಎಸ್.ಎಲ್.ಆರ್.ಪ್ರದೀಪ್ ಸೇರಿದಂತೆ ಇತರರಿದ್ದಾರೆ.                  ವಿದ್ಯಾವಾರಿಧಿ ಶಾಲೆಯಲ

ಹುಳಿಯಾರಲ್ಲಿ ಸಂಭ್ರಮದ ಗೌರಿ ಹಬ್ಬದ ಸಡಗರ

ತವರಿನೊಂದಿಗಿನ ಅವಿನಾಭಾವ ಸಂಬಂಧದ ಸಂಕೇತವಾಗಿ ಆಚರಿಸುವ , ಹೆಣ್ಣುಮಕ್ಕಳಿಗೆ ಪ್ರಿಯವಾದ ಗೌರಿ ಹಬ್ಬವನ್ನು ಮದುವೆಯಾಗಿರಲಿ, ಆಗಿರದೆ ಇರಲಿ ಎಲ್ಲಾ ಹೆಣ್ಣು ಮಕ್ಕಳು ಸೇರಿ ಹೆತ್ತವರು ಅಥವಾ ಸೋದರ ಸಂಬಂಧಿಗಳಿಂದ ಉಡುಗೊರೆಯನ್ನು ಪಡೆದು ನೂರ್ಕಾಲ ಬಾಳು ಎಂಬ ಆಶೀರ್ವಾದ ಪಡೆಯುವುದರೊಂದಿಗೆ ಗೌರಿಹಬ್ಬವನ್ನು ಆಚರಿಸುತ್ತಾರೆ. ಅಂತೆಯೇ ಭಾನುವಾರದಂದು ಪಟ್ಟಣದ ಮನೆಮನೆಗಳಲ್ಲಿ ಗೌರಿ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ವಿವಿಧ ಹೂಗಳಿಂದ ಅಲಂಕರಿಸಿ, ಸಿಹಿ ಅಡುಗೆ ಮಾಡಿ, ಮನೆಗೆ ಬಂದವರಿಗೆ ಬಾಗೀನ ನೀಡುವ ಮೂಲಕ ಹಬ್ಬವನ್ನು ಸಡಗರ ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಹುಳಿಯಾರಿನಲ್ಲಿ ಭಾನುವಾರದಂದು ಗೌರಿ ಹಬ್ಬದ ದಿನ ಮನೆಯೊಂದರಲ್ಲಿ ಪ್ರತಿಷ್ಠಾಪಿಸಿದ್ದ ಪುಟ್ಟ ಗೌರಿ ವಿಗ್ರಹ ನೋಡುಗರ ಗಮನ ಸೆಳೆಯಿತು. ಗೌರಿ ಹಬ್ಬವನ್ನು ಹಿಂದಿನಿಂದಲೂ ಭಕ್ತಿಯಿಂದ ಆಚರಿಸಿಕೊಂಡು ಬಂದಿರುವ ಮಹಿಳೆಯರು ಗೌರಿ ಪೂಜೆ ಸಲ್ಲಿಸಿ ನಂತರ ಮುತ್ತೈದಯರಿಗೆ ಬಾಗಿನ ಅರ್ಪಿಸುವಲ್ಲಿ ನಿರತರಾಗಿದ್ದರು. ತವರುಮನೆಗೆ ಬಂದಿದ್ದ ಹೆಣ್ಣುಮಕ್ಕಳು ಮುಂಜಾನೆಯಿಂದಲೇ ಮನೆಯ ಆವರಣವನ್ನು ಸಾರಿಸಿ, ಸಿಂಗರಿಸಿ ಗೌರಿ ವಿಗ್ರಹವನ್ನು ಫಲ-ಪುಷ್ಪಗಳಿಂದ ಅಲಂಕರಿಸಿದ್ದಲ್ಲದೆ, ವಿವಿದ ಪೂಜಾ ಕಾರ್ಯಗಳನ್ನು ಮಾಡಿ ಹಿರಿಯರಿಂದ ಆಶೀರ್ವಾದ ಪಡೆಯುವ ಮೂಲಕ ಹಬ್ಬದ ಶುಭಾಷಯವನ್ನು ಹಂಚಿಕೊಳ್ಳುತ್ತಿದ್ದರು. ಪಟ್ಟಣದ ದೇವಾಲಯಗಳಲ್ಲಿ ದೇವರುಗಳಿಗೆ ವಿಶೇಷ ಪೂಜೆ,ಅಲ

ಗೌರಿ-ಗಣೇಶ ಹಬ್ಬದ ಸಂತೆ ಸಡಗರ

ಹುಳಿಯಾರಿನಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಗುರುವಾರ ನಡೆದ ಹಬ್ಬದ ಸಂತೆಯಲ್ಲಿ ಜನ ಗೌರಿ ಬಾಗಿನದ ಮರಗಳನ್ನು ಕೊಳ್ಳುತ್ತಿರುವ ದೃಶ್ಯ.

ಶಿಕ್ಷಕರ ದಿನಾಚರಣೆ

ಹುಳಿಯಾರು-ಕೆಂಕೆರೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಾಂಶುಪಾಲ ನಟರಾಜ್ ಮಾತನಾಡಿದರು.ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದಾರೆ.

ಉತ್ತಮ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ : ಮೂಗೇಶಪ್ಪ

           ಪ್ರಸ್ತುತ ಸಮಾಜಲ್ಲಿ ಭ್ರಷ್ಟಾಚಾರ,ಲಂಚಗುಳಿತನ ಸೇರಿದಂತೆ ಅನೇಕ ಸಮಸ್ಯೆಗಳು ದೇಶದ ಅಭಿವೃದ್ದಿಗೆ ಮಾರಕವಾಗಿವೆ.ಇಂತಹ ಸಮಾಜಕಂಠಕ ಪಿಡುಗುಗಳು ನಿರ್ಮೂಲನೆಯಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಅದಕ್ಕಾಗಿ ಇಂದಿನ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜಕಟ್ಟುವ ಕಾರ್ಯದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವುದು ಬಹುಮುಖ್ಯವೆಂದು ಪ್ರಾಂಶುಪಾಲ ಆರ್.ಮೂಗೇಶಪ್ಪ ಕಿವಿಮಾತು ಹೇಳಿದರು.             ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಸಂಘದವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಾಂಶುಪಾಲ ಆರ್.ಮೂಗೇಶಪ್ಪ ಮಾತನಾಡಿದರು.           ವಿದ್ಯಾರ್ಥಿ ಜೀವನ ಎಂಬುದು ಸೂಕ್ಷ್ಮವಾದದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಭೋದನೆ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸತ್ಪ್ರಜೆಗಳಗುವಂತೆ ರೂಪಿಸುವ ರೂವಾರಿಗಳಾಗಿದ್ದು, ಗುರುಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಗುರಿ ತಲುಪಬೇಕು ಎಂದರು.ರಾಧಾಕೃಷ್ಣನ್ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದಲ್ಲದೆ ರಾಷ್ಟ್ರದ ರಾಷ್ಟ್ರಪತಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದು, ಅಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಇಂದಿನ ಶಿಕ್ಷಕರು ಪಾಲಿಸುವ ಮೂಲಕ ದೇಶದ ಅಭಿವೃದ್