ಇಲ್ಲಿನ ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಖಾಯಂ ವೈದ್ಯರನ್ನು ನೇಮಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಆಹೋರಾತ್ರಿ ಪ್ರತಿಭಟನೆ ನಡೆಸುವ ಸಲುವಾಗಿ ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ಇಂದು (ತಾ.14) ಶನಿವಾರ ಮಧ್ಯಾಹ್ನ 3 ಗಂಟೆಗೆ ಕರೆಯಲಾಗಿದೆ. ಈ ಸಭೆಗೆ ಹೋಬಳಿಯ ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು, ಗ್ರಾ.ಪಂ.ಅಧ್ಯಕ್ಷರು, ಸದಸ್ಯರು,ಸ್ತ್ರೀಶಕ್ತಿ ಸಂಘಗಳು,ಸ್ವಸಹಾಯ ಸಂಘಗಳು,ಹಿರಿಯ ಮುಖಂಡರು,ನಾಗರೀಕರು,ಜನಪ್ರತಿನಿಧಿಗಳು ಹಾಗೂ ಎಲ್ಲಾ ಸಾರ್ವಜನಿಕರು ಪಾಲ್ಗೊಂಡು ತಮ್ಮ ಸಲಹೆಗಳನ್ನು ತಿಳಿಸುವುದರೊಂದಿಗೆ ಸಭೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ದಲಿತ ಸಹಾಯವಾಣಿಯ ತಾಲ್ಲೂಕು ಅಧ್ಯಕ್ಷ ಆರ್.ಹನುಮಂತಯ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ.
ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ