ವಿಷಯಕ್ಕೆ ಹೋಗಿ

ಹುಳಿಯಾರಲ್ಲಿ ಸಂಭ್ರಮದ ಗೌರಿ ಹಬ್ಬದ ಸಡಗರ

ತವರಿನೊಂದಿಗಿನ ಅವಿನಾಭಾವ ಸಂಬಂಧದ ಸಂಕೇತವಾಗಿ ಆಚರಿಸುವ , ಹೆಣ್ಣುಮಕ್ಕಳಿಗೆ ಪ್ರಿಯವಾದ ಗೌರಿ ಹಬ್ಬವನ್ನು ಮದುವೆಯಾಗಿರಲಿ, ಆಗಿರದೆ ಇರಲಿ ಎಲ್ಲಾ ಹೆಣ್ಣು ಮಕ್ಕಳು ಸೇರಿ ಹೆತ್ತವರು ಅಥವಾ ಸೋದರ ಸಂಬಂಧಿಗಳಿಂದ ಉಡುಗೊರೆಯನ್ನು ಪಡೆದು ನೂರ್ಕಾಲ ಬಾಳು ಎಂಬ ಆಶೀರ್ವಾದ ಪಡೆಯುವುದರೊಂದಿಗೆ ಗೌರಿಹಬ್ಬವನ್ನು ಆಚರಿಸುತ್ತಾರೆ. ಅಂತೆಯೇ ಭಾನುವಾರದಂದು ಪಟ್ಟಣದ ಮನೆಮನೆಗಳಲ್ಲಿ ಗೌರಿ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ವಿವಿಧ ಹೂಗಳಿಂದ ಅಲಂಕರಿಸಿ, ಸಿಹಿ ಅಡುಗೆ ಮಾಡಿ, ಮನೆಗೆ ಬಂದವರಿಗೆ ಬಾಗೀನ ನೀಡುವ ಮೂಲಕ ಹಬ್ಬವನ್ನು ಸಡಗರ ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು.
ಹುಳಿಯಾರಿನಲ್ಲಿ ಭಾನುವಾರದಂದು ಗೌರಿ ಹಬ್ಬದ ದಿನ ಮನೆಯೊಂದರಲ್ಲಿ ಪ್ರತಿಷ್ಠಾಪಿಸಿದ್ದ ಪುಟ್ಟ ಗೌರಿ ವಿಗ್ರಹ ನೋಡುಗರ ಗಮನ ಸೆಳೆಯಿತು.

ಗೌರಿ ಹಬ್ಬವನ್ನು ಹಿಂದಿನಿಂದಲೂ ಭಕ್ತಿಯಿಂದ ಆಚರಿಸಿಕೊಂಡು ಬಂದಿರುವ ಮಹಿಳೆಯರು ಗೌರಿ ಪೂಜೆ ಸಲ್ಲಿಸಿ ನಂತರ ಮುತ್ತೈದಯರಿಗೆ ಬಾಗಿನ ಅರ್ಪಿಸುವಲ್ಲಿ ನಿರತರಾಗಿದ್ದರು. ತವರುಮನೆಗೆ ಬಂದಿದ್ದ ಹೆಣ್ಣುಮಕ್ಕಳು ಮುಂಜಾನೆಯಿಂದಲೇ ಮನೆಯ ಆವರಣವನ್ನು ಸಾರಿಸಿ, ಸಿಂಗರಿಸಿ ಗೌರಿ ವಿಗ್ರಹವನ್ನು ಫಲ-ಪುಷ್ಪಗಳಿಂದ ಅಲಂಕರಿಸಿದ್ದಲ್ಲದೆ, ವಿವಿದ ಪೂಜಾ ಕಾರ್ಯಗಳನ್ನು ಮಾಡಿ ಹಿರಿಯರಿಂದ ಆಶೀರ್ವಾದ ಪಡೆಯುವ ಮೂಲಕ ಹಬ್ಬದ ಶುಭಾಷಯವನ್ನು ಹಂಚಿಕೊಳ್ಳುತ್ತಿದ್ದರು. ಪಟ್ಟಣದ ದೇವಾಲಯಗಳಲ್ಲಿ ದೇವರುಗಳಿಗೆ ವಿಶೇಷ ಪೂಜೆ,ಅಲಂಕಾರಗಳನ್ನು ಮಾಡಿದ್ದು ಅನೇಕರು ದೇವಾಲಯಗಳಿಗೆ ಬಂದು ಪೂಜೆ ಸಲ್ಲಿಸಿದರು.
ಹುಳಿಯಾರಿನಲ್ಲಿ ಭಾನುವಾರದಂದು ಗೌರಿ ಹಬ್ಬದ ದಿನ ಮನೆಯೊಂದರಲ್ಲಿ ಸುಮಂಗಲಿಯರು ಗೌರಿಪೂಜೆ ಮಾಡುತ್ತಿರುವ ಒಂದು ದೃಶ್ಯ.
ಗಣೇಶ ಚರ್ಥುತಿ ಅಂಗವಾಗಿ ಗಣೇಶ ವಿಗ್ರಹಗಳನ್ನು ಕೊಳ್ಳಲು ಜನ ಮುಗಿಬಿದಿದ್ದು,ಹುಳಿಯಾರಿನ ಬಸ್ ನಿಲ್ದಾಣದಲ್ಲಿ ಜನಜಂಗುಳಿಯೇ ನೆರೆದಿತ್ತು,ಸುತ್ತಮುತ್ತಲಿನ ಹಳ್ಳಿಗಳಿಂದ ಬಂದಿದ್ದ ರೈತರು,ಯುವಕರು ತಮ್ಮ ತಮ್ಮ ಊರುಗಳಿಗೆ ವಿವಿಧ ಬಗೆಯ ಗಣೇಶನ ಮೂರ್ತಿಗಳನ್ನು, ಅದರ ಅಲಂಕಾರಕ್ಕೆ ಬೇಕಾದ ಹೂ,ಹಣ್ಣು,ಬಾಳೆಕಂದು ಸೇರಿದಂತೆ ನಾನಾ ಬಗೆಯ ವಸ್ತುಗಳನ್ನು ಕೊಂಡೈಯುತ್ತಿದ್ದರು.
ಹುಳಿಯಾರಿನ ಗ್ರಾಮದೇವತೆ ಹುಳಿಯಾರಮ್ಮನವರಿಗೆ ಗೌರಿಹಬ್ಬದ ಅಂಗವಾಗಿ ಅರ್ಚಕ ರವೀಂದ್ರಾಚಾರ್ ಅವರು ಮಾಡಿದ್ದ ಸ್ವರ್ಣಗೌರಿ ಅಂಕಾರ ಭಕ್ತರ ಗಮನ ಸೆಳೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...