ವಿಷಯಕ್ಕೆ ಹೋಗಿ

ಹುಳಿಯಾರಲ್ಲಿ ಸಂಭ್ರಮದ ಗೌರಿ ಹಬ್ಬದ ಸಡಗರ

ತವರಿನೊಂದಿಗಿನ ಅವಿನಾಭಾವ ಸಂಬಂಧದ ಸಂಕೇತವಾಗಿ ಆಚರಿಸುವ , ಹೆಣ್ಣುಮಕ್ಕಳಿಗೆ ಪ್ರಿಯವಾದ ಗೌರಿ ಹಬ್ಬವನ್ನು ಮದುವೆಯಾಗಿರಲಿ, ಆಗಿರದೆ ಇರಲಿ ಎಲ್ಲಾ ಹೆಣ್ಣು ಮಕ್ಕಳು ಸೇರಿ ಹೆತ್ತವರು ಅಥವಾ ಸೋದರ ಸಂಬಂಧಿಗಳಿಂದ ಉಡುಗೊರೆಯನ್ನು ಪಡೆದು ನೂರ್ಕಾಲ ಬಾಳು ಎಂಬ ಆಶೀರ್ವಾದ ಪಡೆಯುವುದರೊಂದಿಗೆ ಗೌರಿಹಬ್ಬವನ್ನು ಆಚರಿಸುತ್ತಾರೆ. ಅಂತೆಯೇ ಭಾನುವಾರದಂದು ಪಟ್ಟಣದ ಮನೆಮನೆಗಳಲ್ಲಿ ಗೌರಿ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ವಿವಿಧ ಹೂಗಳಿಂದ ಅಲಂಕರಿಸಿ, ಸಿಹಿ ಅಡುಗೆ ಮಾಡಿ, ಮನೆಗೆ ಬಂದವರಿಗೆ ಬಾಗೀನ ನೀಡುವ ಮೂಲಕ ಹಬ್ಬವನ್ನು ಸಡಗರ ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು.
ಹುಳಿಯಾರಿನಲ್ಲಿ ಭಾನುವಾರದಂದು ಗೌರಿ ಹಬ್ಬದ ದಿನ ಮನೆಯೊಂದರಲ್ಲಿ ಪ್ರತಿಷ್ಠಾಪಿಸಿದ್ದ ಪುಟ್ಟ ಗೌರಿ ವಿಗ್ರಹ ನೋಡುಗರ ಗಮನ ಸೆಳೆಯಿತು.

ಗೌರಿ ಹಬ್ಬವನ್ನು ಹಿಂದಿನಿಂದಲೂ ಭಕ್ತಿಯಿಂದ ಆಚರಿಸಿಕೊಂಡು ಬಂದಿರುವ ಮಹಿಳೆಯರು ಗೌರಿ ಪೂಜೆ ಸಲ್ಲಿಸಿ ನಂತರ ಮುತ್ತೈದಯರಿಗೆ ಬಾಗಿನ ಅರ್ಪಿಸುವಲ್ಲಿ ನಿರತರಾಗಿದ್ದರು. ತವರುಮನೆಗೆ ಬಂದಿದ್ದ ಹೆಣ್ಣುಮಕ್ಕಳು ಮುಂಜಾನೆಯಿಂದಲೇ ಮನೆಯ ಆವರಣವನ್ನು ಸಾರಿಸಿ, ಸಿಂಗರಿಸಿ ಗೌರಿ ವಿಗ್ರಹವನ್ನು ಫಲ-ಪುಷ್ಪಗಳಿಂದ ಅಲಂಕರಿಸಿದ್ದಲ್ಲದೆ, ವಿವಿದ ಪೂಜಾ ಕಾರ್ಯಗಳನ್ನು ಮಾಡಿ ಹಿರಿಯರಿಂದ ಆಶೀರ್ವಾದ ಪಡೆಯುವ ಮೂಲಕ ಹಬ್ಬದ ಶುಭಾಷಯವನ್ನು ಹಂಚಿಕೊಳ್ಳುತ್ತಿದ್ದರು. ಪಟ್ಟಣದ ದೇವಾಲಯಗಳಲ್ಲಿ ದೇವರುಗಳಿಗೆ ವಿಶೇಷ ಪೂಜೆ,ಅಲಂಕಾರಗಳನ್ನು ಮಾಡಿದ್ದು ಅನೇಕರು ದೇವಾಲಯಗಳಿಗೆ ಬಂದು ಪೂಜೆ ಸಲ್ಲಿಸಿದರು.
ಹುಳಿಯಾರಿನಲ್ಲಿ ಭಾನುವಾರದಂದು ಗೌರಿ ಹಬ್ಬದ ದಿನ ಮನೆಯೊಂದರಲ್ಲಿ ಸುಮಂಗಲಿಯರು ಗೌರಿಪೂಜೆ ಮಾಡುತ್ತಿರುವ ಒಂದು ದೃಶ್ಯ.
ಗಣೇಶ ಚರ್ಥುತಿ ಅಂಗವಾಗಿ ಗಣೇಶ ವಿಗ್ರಹಗಳನ್ನು ಕೊಳ್ಳಲು ಜನ ಮುಗಿಬಿದಿದ್ದು,ಹುಳಿಯಾರಿನ ಬಸ್ ನಿಲ್ದಾಣದಲ್ಲಿ ಜನಜಂಗುಳಿಯೇ ನೆರೆದಿತ್ತು,ಸುತ್ತಮುತ್ತಲಿನ ಹಳ್ಳಿಗಳಿಂದ ಬಂದಿದ್ದ ರೈತರು,ಯುವಕರು ತಮ್ಮ ತಮ್ಮ ಊರುಗಳಿಗೆ ವಿವಿಧ ಬಗೆಯ ಗಣೇಶನ ಮೂರ್ತಿಗಳನ್ನು, ಅದರ ಅಲಂಕಾರಕ್ಕೆ ಬೇಕಾದ ಹೂ,ಹಣ್ಣು,ಬಾಳೆಕಂದು ಸೇರಿದಂತೆ ನಾನಾ ಬಗೆಯ ವಸ್ತುಗಳನ್ನು ಕೊಂಡೈಯುತ್ತಿದ್ದರು.
ಹುಳಿಯಾರಿನ ಗ್ರಾಮದೇವತೆ ಹುಳಿಯಾರಮ್ಮನವರಿಗೆ ಗೌರಿಹಬ್ಬದ ಅಂಗವಾಗಿ ಅರ್ಚಕ ರವೀಂದ್ರಾಚಾರ್ ಅವರು ಮಾಡಿದ್ದ ಸ್ವರ್ಣಗೌರಿ ಅಂಕಾರ ಭಕ್ತರ ಗಮನ ಸೆಳೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...