ಪಟ್ಟಣದ ಮಾರುತಿ ನಗರದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ದೇವಾಲಯ ಜಿರ್ಣೋದ್ದಾರ ಸಮಿತಿ ಹಾಗೂ ಭಕ್ತಾಧಿಗಳಿಂದ ಸ್ವಾಮಿಯ ಐದನೇ ವರ್ಷದ ಅದ್ದೂರಿ ಹನುಮಜಯಂತಿ ಮಹೋತ್ಸವ ಹಾಗೂ ಪ್ರಥಮ ವರ್ಷದ ಆಂಜನೇಯಸ್ವಾಮಿ ಮಹಾರಥೋತ್ಸವ ಶನಿವಾರದಂದುವಿಜೃಂಭಣೆಯಿಂದ ನಡೆಯಿತು.
ಇದರಂಗವಾಗಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ರಾಮಚಮ್ದ್ರ ಭಟ್ಟರ ನೇತೃತ್ವದಲ್ಲಿ ಪ್ರಾರಂಭಗೊಂಡು ಗಣಪತಿ ಪೂಜೆ,ನವಗ್ರಹ ಪೂಜೆ,ಆಂಜನೇಯಸ್ವಾಮಿಗೆ ಪಂಚಾಮೃತ ಅಭಿಷೇಕ, ಪವಮಾನ ಹೋಮ, ಆಂಜನೇಯ ಮಹಾಮಂತ್ರ ಜಪ ನಡೆದು ಪೂರ್ಣಾಹುತಿ, ಮಹಾಮಂಗಳಾರತಿ ನಂತರ ಸರ್ವಾಲಂಕೃತಗೊಡಿದ್ದ ಆಂಜನೇಯಸ್ವಾಮಿಯವರನ್ನು ಗ್ರಾಮದೇವತೆಗಳಾದ ಹುಳಿಯಾರಮ್ಮ ಹಾಗೂ ದುರ್ಗಮ್ಮನವರ ಸಾನಿಧ್ಯದಲ್ಲಿ ನೂತನ ರಥಕ್ಕೇರಿಸಲಾಯಿತು.ಸಡಗರ ಮತ್ತು ಸಂಭ್ರಮಗಳಿಂದ ಪಾಲ್ಗೊಂಡಿದ್ದ ಅಪಾರ ಭಕ್ತರು ಜಯಘೋಷದೊಂದಿಗೆ ರಥಕ್ಕೆ ಪೂಜೆ ಸಲ್ಲಿಸಿ, ಹಣ್ಣು ದವನ ಎಸೆದು ಪುನೀತ ಭಾವ ಹೊಂದಿದರು. ಅಲಂಕೃತ ರಥವನ್ನು ದೇವಾಲಯದ ಮುಂಭಾಗ ದಿಂದ ರಾಮಗೋಪಾಲ್ ಸರ್ಕಲ್ ವರೆಗೆ ಎಳೆದು ತಂದರು. ಹನುಮನ ಮೂರ್ತಿಗೆ ಮಾಡಲಾಗಿದ್ದ ಅಲಂಕಾರವನ್ನು ಭಕ್ತರು ಕಣ್ತುಂಬಿಕೊಂಡರು. ದೇವಾಲಯದ ಆವರಣದಲ್ಲಿ ನಡೆದ ಅನ್ನಸಂತರ್ಪಣೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ