ವಿಷಯಕ್ಕೆ ಹೋಗಿ

ಪುರದ ಚನ್ನಬಸವಣ್ಣನ ಕಡೆಕಾರ್ತೀಕ ಮಹೋತ್ಸವದಲ್ಲಿ ರಾಗಿಮುದ್ದೆ ಊಟದ ವಿಶೇಷ

ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದ ಪುರಾಣ ಪ್ರಸಿದ್ದ ಶ್ರೀಚನ್ನಬಸವೇಶ್ವರ ಸ್ವಾಮಿಯ ಕೃತಿಕಾ ಮಹೋತ್ಸವವು ಸ್ವಾಮಿಯ ಮೂಲಸ್ಥಾನವಾದ ಪುರದಮಠದಲ್ಲಿ ಸೋಮವಾರ ಗ್ರಾಮದೇವತೆ ಶ್ರೀಕಾಳಿಕಾಂಭ ದೇವಿ ಹಾಗೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ,ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ವೈಭವಯುತವಾಗಿ ನಡೆಯಿತು.


16ನೇ ಶತಮಾನದ ಸಂತ ಗೋಸಲ ಚನ್ನಬಸವಣ್ಣನವರ ತಪೋಕ್ಷೇತ್ರವೆಂದೇ ಖ್ಯಾತವಾಗಿರುವ ಪುರದ ಮಠದಲ್ಲಿ ಪ್ರತಿವರ್ಷದ ಕಾರ್ತಿಕ ಮಾಸದ ಪೂರ್ಣಿಮದಂದು ಈ ಕಾರ್ತಿಕ ಮಹೋತ್ಸವ ನಡೆಯುತ್ತದೆ. ಅದರಂತೆ ಸೋಮವಾರ ಬೆಳಿಗ್ಗೆ ಕೆಂಕೆರೆ ಗ್ರಾಮದಲ್ಲಿರುವ ಸ್ವಾಮಿಗೆ ವಿಶೇಷ ಪೂಜೆ ನಡೆಸಿ,ನಂತರ ಗ್ರಾಮದೇವತೆ ಕಾಳಮ್ಮ ಹಾಗೂ ಸ್ವಾಮಿಯವರನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿದ್ದಲ್ಲದೆ, ಬಸವನ ಉತ್ಸವದೊಂದಿಗೆ ಮೂಲಸ್ಥಾನ ಪುರದಮಠಕ್ಕೆ ಕರೆದ್ಯೊಯಲಾಯಿತು. ಮೂಲಸ್ಥಾನದಲ್ಲಿರುವ ಸ್ವಾಮಿಯ ಮೂಲವಿಗ್ರಹಕ್ಕೆ ನಟರಾಜ್ ಪೌರೋಹಿತ್ಯದಲ್ಲಿ ಅಭಿಷೇಕ, ಮಾಡಿ ನಂತರ ಬಗೆಬಗೆ ಹೂಗಳಿಂದ ಸಿಂಗರಿಸಿ,ಮಧ್ಯಾಹ್ನ 1 ಗಂಟೆಗೆ ಪುರದಮಠದಲ್ಲಿ ಬಸವನ ಉತ್ಸವ ನಡೆಸಿ, ತಯಾರಿಸಿದ್ದ ಪ್ರಸಾದವನ್ನು ಸ್ವಾಮಿಯ ಗದ್ದಿಗೆ ಇರುವ ಪುರಾತನ ಗುಹೆಗಳಿಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ನೆರವೇರಿಸಿ ಬಂದ ನಂತರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಯಿತು.

ರಾಗಿಮುದ್ದೆಸಾರಿನ ಊಟ : ಇಲ್ಲಿನ ವಿಶೇಷವೆಂದರೆ ಮಹೊತ್ಸವಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ರಾಗಿಮುದ್ದೆ ಸಂತರ್ಪಣೆ.ಸುತ್ತಮುತ್ತಲ ಗ್ರಾಮಗಳ ಭಕ್ತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಒಂದು ಭಾಗವನ್ನು ಇಲ್ಲಿ ನಡೆಯುವ ಮಹಾ ದಾಸೋಹಕ್ಕೆ ಕೊಟ್ಟು ಸಹಕರಿಸುವುದು ಹಿಂದಿನಿಂದ ನಡೆದು ಬಂದಿದೆ. ಮಹಾ ದಾಸೋಹದಲ್ಲಿ ‘ಮುದ್ದೆ-ಸಾರು’ ರುಚಿ ಸವಿಯುವುದು ವಿಶೇಷ.ಎಲ್ಲಾ ಭಕ್ತಾಧಿಗಳೂ ಸ್ವಾಮಿಯ ಪ್ರಸಾದವಾದ ರಾಗಿ ಮುದ್ದೆ ಊಟವನ್ನು ಸವಿಯದೇ ಹೋಗುವುದಿಲ್ಲ,ಇಲ್ಲಿಗೆ ಆಗಮಿಸುವ ಸುಮಾರು 8 ರಿಂದ 10 ಸಾವಿರ ಭಕ್ತಾಧಿಗಳಿಗಾಗಿ ಬೆಳಗಿನಿಂದಲೇ ಗ್ರಾಮದಲ್ಲಿನ ಅಡುಗೆಭಟ್ಟರು,ಗ್ರಾಮದ ಹಿರಿಯರು,ಯುವಕರು ಅಡುಗೆ ಮಾಡುವ ಕಾರ್ಯದಲ್ಲಿ ತೊಡಗಿದರೆ,ಮಹಿಳೆಯರು ಮುದ್ದೆ ಕಟ್ಟುವ ಕಾರ್ಯದಲ್ಲಿ ತೊಡಗಿರುತ್ತಾರೆ.ಇಲ್ಲಿಗೆ ತುಮಕೂರು ಜಿಲ್ಲೆಯ ನಾನಾ ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ಈ ಪ್ರಸಾದವನ್ನು ಪಡೆಯುತ್ತಾರೆ.ಅಲ್ಲದೆ ಇಲ್ಲಿ ತಯಾರಿಸಲಾಗಿದ್ದ ಸಾಂಬಾರನ್ನು ನಂತರ ತಮ್ಮ ಮನೆಗಳಿಗೆ ಕೊಂಡೈಯುವುದು ವಿಶೇಷ. ಊಟ ವಿತರಿಸುವ ಸಲುವಾಗಿ ಕೌಂಟರ್ ವ್ಯವಸ್ಥೆ ಮಾಡಿದ್ದು,ಭಕ್ತಾಧಿಗಳಿಗೆ ರಾಗಿ ಮುದ್ದೆ ಊಟವನ್ನು ಉಣಬಡಿಸಿದರು.



 
    ಮಹೋತ್ಸವದ ನೇತೃತ್ವವನ್ನು ಸಂತೋಷ್, ಬಾಬುರಾಜ್, ದರ್ಶನ್, ಉಮೇಶ್, ಶರತ್, ಮಹೇಶ್, ದೇವರಾಜು,ಮಧು,ಅನಿಲ್,ವಿಶ್ವನಾಥ್,ಶ್ರೀಧರ ಸೇರಿದಂತೆ ಚನ್ನಬಸವೇಶ್ವರಯುವಕ ಸಂಘದವರು ವಹಿಸಿದ್ದರು. ತಾ.ಪಂ.ಸದಸ್ಯ ನವೀನ್, ಗ್ರಾ.ಪಂ.ಸದಸ್ಯರಾದ ಯು.ಸಿ.ಗೌಡ,ಬೆಂಕಿ ಬಸವರಾಜು ಸೇರಿದಂತೆ ಅಪಾರ ಸಂಖ್ಯೆಯ ಗ್ರಾಮಸ್ಥರು ಆಗಮಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...