ವಿಷಯಕ್ಕೆ ಹೋಗಿ

ವೈಭವಯುತ ಕಾರೇಹಳ್ಳಿ ಶ್ರೀರಂಗನಾಥಸ್ವಾಮಿ ಬ್ರಹ್ಮರಥೋತ್ಸವ

ಹುಳಿಯಾರು: ಹೋಬಳಿಯ ಕಾರೆಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿಯ ಮೂಲಸ್ಥಾನದಲ್ಲಿ ದನಗಳ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಮಾ.14ರ ಶುಕ್ರವಾರದಂದು ಸಂಭ್ರಮ ಹಾಗೂ ವೈಭವಯುತವಾಗಿ ಭಕ್ತರ ಹರ್ಷೋದ್ಘಾರದೊಂದಿಗೆ ಜರುಗಿತು.
ಕಳೆದ ಮೂರುದಿನಗಳಿಂದ ಜಾತ್ರೆ ಅಂಗವಾಗಿ ಕಂಕಣ, ಅಂಕುರಾರ್ಪಣೆ, ಧ್ವಜಾರೋಹಣ, ಉಯ್ಯಾಲೋತ್ಸವ, ಗಜಾರೋಹಣ, ಗರುಡ ವಾಹನೋತ್ಸವ, ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಭಕ್ತಿಯೊಂದಿಗೆ ವಿಧಿವತ್ತಾಗಿ ನಡೆದಿದ್ದು ಇಂದು ಮುಂಜಾನೆಯಿಂದಲೆ ರಥೋತ್ಸವದ ಪೂಜಾ ಕೈಂಕರ್ಯ ನಡೆದು, ವಿಪ್ರರುಗಳು ಸ್ವಾಮಿಯನ್ನು ಮೂಲ ದೇವಸ್ಥಾನದಿಂದ ಮಂಗಳವಾಧ್ಯ ಹಾಗೂ ಪೂರ್ಣಕುಂಭದೊಂದಿಗೆ ಸಹಸ್ರಾರು ಭಕ್ತರು ಉದ್ಘೋಷದೊಂದಿಗೆ ಕರೆತಂದು ವೈಭವಯುತವಾಗಿ ಅಲಂಕರಿಸಿದ್ದ ರಥದಲ್ಲಿ ಶ್ರೀ ಸ್ವಾಮಿಯವರನ್ನು ಕುಳ್ಳಿರಿಸಿ, ರಥದ ಮುಂದಿನ ಅಂಬನ್ನು ತುಂಡರಿಸುವ ಮೂಲಕ ಭಕ್ತರ ಜೈಕಾರದೊಂದಿಗೆ,ಬೆನಕನಹಳ್ಳಿ ರಂಗನಾಥಸ್ವಾಮಿ,ಹೊಯ್ಸಲಕಟ್ಟೆ ಕರಿಯಮ್ಮ ಯರೆಹಳ್ಳಿ ಕರಿಯಮ್ಮ ಹಾಗೂ ಇತರ ದೇವರುಗಳ ಸಮ್ಮುಖದಲ್ಲಿ ರಥವನ್ನು ಎಳೆಯುವ ಮೂಲಕ ರಥೋತ್ಸವ ನೆರವೇರಿಸಲಾಯಿತು.
ಸುಡುವ ಬಿಸಿಲನ್ನೂ ಲೆಕ್ಕಿಸದೆ ಬೆಳಿಗ್ಗೆಯಿಂದಲೇ ಕಿಕ್ಕಿರಿದು ನೆರೆದಿದ್ದ ಭಕ್ತರು ರಥದ ಮೇಲೆ ಸರ್ವಾಲಂಕೃತಗೊಂಡಿದ್ದ ಸ್ವಾಮಿಯನ್ನು ಕಂಡು ಕೈಮುಗಿದು ತಮ್ಮ ಭಕ್ತಿಯನ್ನು ಸಮರ್ಪಿಸಿದರೆ ಕೆಲವರು ತೇರಿಗೆ ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿಕೊಂಡರು. ರಥೋತ್ಸವದ ನಂತರ ಮಹಿಳೆಯರು ಸ್ವಾಮಿಯವರಿಗೆ ಹಣ್ಣುಕಾಯಿ ಮಾಡಿಸಿಕೊಂಡು ಆಶಿರ್ವಾದ ಪಡೆದುಕೊಂಡರು.
ದಸೂಡಿಯ ದಿ.ಕೊಟ್ಟಿಗೆ ರಂಗೇಗೌಡರ ಸಹೋದರರು ಮತ್ತು ಮಕ್ಕಳಿಂದ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ನಡೆಯಿತು.ಜಿ.ಎಂ.ಸೀನಪ್ಪ ಶಟ್ಟರು ಮತ್ತು ಜಿ.ಎಸ್.ಸತ್ಯನಾರಾಯಣ ಶೆಟ್ಟರು ಇವರುಗಳಿಂದ ಆರ್ಯವೈಶ್ಯ ಮಂಡಳಿ ಹಾಗೂ ದೇವಾಲಯ ಸಮಿತಿಯಿಂದ ಮಹಾಜನತೆಗೆ ಅನ್ನ ದಾಸೋಹ ನಡೆಯಿತು.
ಪ್ರತಿವರ್ಷದ ಪ್ರತೀತಿ ಎಂಬತ್ತೆ ಈ ಬಾರಿಯೂ ಸಹ ದನಗಳ ಜಾತ್ರೆ ಕೂಡಿದ್ದು, ತುಮಕೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳ ರೈತರು ರಾಸುಗಳನ್ನು ಕೊಳ್ಳಲು,ಮಾರಾಟ ಮಾಡಲು ಆಗಮಿಸಿದ್ದು, ತಮ್ಮ ಕೃಷಿ ಚಟುವಟಿಕೆಗಳಿಗೆ ಅನುಕೂಲಕರವಾದ ರಾಸುಗಳನ್ನು ಕೊಳ್ಳುತ್ತಿದ್ದ ದೃಶ್ಯ ಕಂಡುಬಂತು. ಸುಮಾರು ಎರಡು ಸಾವಿರಕ್ಕೂ ಅಧಿಕ ರಾಸುಗಳು ಸೇರಿದ್ದು ರಾಸುಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು. ರಥೋತ್ಸವದ ನಂತರ ದನಗಳ ಜಾತ್ರೆ ಕಳೆಗಟ್ಟುತ್ತದ್ದೆ ಎಂಬಂತೆ ಸುತ್ತಮುತ್ತಲ ಗ್ರಾಮಗಳ ರೈತರು ಇನ್ನಷ್ಟು ದನಗಳು ಮಾರಾಟ ಮಾಡಲು ಬರುವುದಿದ್ದು ಮಾ.21ರ ಶುಕ್ರವಾರದವರೆಗೆ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಜಾತ್ರೆ ನಡೆಯಲಿದೆ. 

ಹುಳಿಯಾರು ಹೋಬಳಿ ಕಾರೇಹಳ್ಳಿ ಶ್ರೀರಂಗನಾಥಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ರೈತರು ತಮ್ಮ ರಾಸುಗಳಿಗೆ ಪರಿಕರಗಳನ್ನು ಕೊಂಡುಕೊಳ್ಳುತ್ತಿರುವುದು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.