ವಿಷಯಕ್ಕೆ ಹೋಗಿ

ನಗರ ಸ್ವಚ್ಚವಾಗಿಡಲು ಪೌರಕಾರ್ಮಿಕ ಸಹಕಾರ ಅಗತ್ಯ : ಕಾರ್ಯದರ್ಶಿ ಅಡವೀಶ್


 ಯಾವುದೇ ಒಂದು ಪಟ್ಟಣವನ್ನು ಸ್ವಚ್ಚವಾಗಿಡುವುದು ಅಲ್ಲಿನ ಪಂಚಾಯ್ತಿಯ ಎಲ್ಲಾ ಪೌರಕಾರ್ಮಿಕರ ದೈನಂದಿನ ಕಾರ್ಯವಾಗಿದ್ದು ,ಕೆಲಸದ ವಿಚಾರವಾಗಿ ಪಂಚಾಯ್ತಿಸದಸ್ಯರುಗಳು ಹಾಗೂ ಅಲ್ಲಿನ ಅಧಿಕಾರಿಗಳ ಜೊತೆ ಅವರು ಸೌಹಾರ್ದಯುತವಾಗಿ ನಡೆದುಕೊಳ್ಳುವ ಮೂಲಕ ಪಂಚಾಯ್ತಿಗೆ ಉತ್ತಮ ಹೆಸರು ತರಬೇಕೆಂದು ಕಾರ್ಯದರ್ಶಿ ಅಡವೀಶ್ ಕುಮಾರ್ ತಿಳಿಸಿದರು.

ಹುಳಿಯಾರು ಪಂಚಾಯ್ತಿಯಲ್ಲಿ ಸೋಮವಾರ ನಡೆದ ಪೌರಕಾರ್ಮಿಕರ ಸಭೆಯಲ್ಲಿ ಅವರು ಮಾತನಾಡಿದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಿದ್ದು ಯಾವುದೇಕಾರಣಕ್ಕೂ ನೀರಿನ ಸರಬರಾಜಿನಲ್ಲಿ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕೆಂದು ನೀರು ವಿತರಕರುಗಳಿಗೆ ಸೂಚಿಸಿದ ಅವರು ವಾಟರ್ ಟ್ಯಾಂಕ್,ಸಿಸ್ಟನ್ ತೊಳೆಯುವುದು,ಬೋರ್ ವೆಲ್,ಪೈಪ್ ಲೈನ್ ರಿಪೇರಿ ಕೆಲಸಗಳನ್ನು ಸಂಬಂಧಪಟ್ಟ ವಾಟರ್ಮೆನ್ ಸಕ್ರಿಯವಾಗಿ ನಿರ್ವಹಿಸುವುದು ನಿಮ್ಮಗಳ ಜವಬ್ದಾರಿಯಾಗಿದ್ದು ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ನಿಮ್ಮನ್ನೆ ಗುರಿಯಾಗಿಸುವುದಾಗಿ ಎಚ್ಚರಿಸಿದರು.
ಪೌರಕಾರ್ಮಿಕರು ತಮಗೆವಹಿಸಿ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸಿದಾಗ ಮಾತ್ರ ಪಟ್ಟಣ ಸ್ವಚ್ಚವಾಗಿರುತ್ತದೆ ಎಂದ ಅವರು ಅಧಿಕಾರಿಗಳು ಕೇಳಿದಾಗ ಅಲ್ಲಿ,ಇಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಾಜರಿ ಹಾಕಿಸುವ ಬದಲು ಪ್ರತಿ ದಿನ ಕಛೇರಿಗೆ ಬಂದು ಸಹಿ ಪುಸ್ತಕದಲ್ಲಿ ತಮ್ಮ ಹಾಜರಾತಿ ಹಾಕುವುದು ಕಡ್ಡಾಯವೆಂದರು. ಪ್ರತಿ ದಿನ ಮುಂಜಾನೆ 5ರಿಂದ 8 ಗಂಟೆವರೆಗೆ ಬಸ್ ಸ್ಟಾಂಡ್ ಸೇರಿದಂತೆ ಪಟ್ಟಣದ ಬೀದಿಗಳ ಕಸ ಗುಡಿಸಿ ತೆರವುಗೊಳಿಸಬೇಕು, ನಂತರ 10ರಿಂದ 3 ಗಂಟೆಯವರೆಗೆ ಪಟ್ಟಣದ ಚರಂಡಿಗಳನ್ನು ಸ್ವಚ್ಚ ಮಾಡುವ ಕಾರ್ಯ ಮಾಡಬೇಕಿದ್ದು ಪೌರಕಾರ್ಮಿಕರು ಗೊತ್ತು ಮಾಡಿರುವ ಸಮವಸ್ತ್ರವನ್ನು ತಮ್ಮ ಕೆಲಸದ ಅವಧಿಯಲ್ಲಿ ಧರಿಸಬೇಕೆಂದು ಸೂಚಿಸಿದರು. ಎಲ್ಲಾ ಪೌರಕಾರ್ಮಿಕರಿಗಾಗಿ ಜೀವವಿಮೆ ಮಾಡಿಸಿದ್ದು ಅವರ ವೇತನದಲ್ಲಿ ಕಟ್ ಆಗುತ್ತಿದೆ ಎಂದರು.
ಹುಳಿಯಾರು ಗ್ರಾ.ಪಂ.ಯ ಪೌರಕಾರ್ಮಿಕರ ಸಭೆಯಲ್ಲಿ ಅಧ್ಯಕ್ಷೆ ಪುಟ್ಟಿಬಾಯಿ,ಕಾರ್ಯದರ್ಶಿ ಅಡವೀಶ್ ಕುಮಾರ್ ಇದ್ದಾರೆ.

ಇದೇ ಸಂದರ್ಭದಲ್ಲಿ ತಮ್ಮ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ಪೌರಕಾರ್ಮಿಕರು ಚರಂಡಿ ಕ್ಲೀನ್ ಮಾಡಲು ಹೋದಾಗ ಮನೆಯವರು ಗಲಾಟೆ ಮಾಡುವ ಬದಲು ತಮ್ಮೊಂದಿಗೆ ಸಹಕರಿಸಬೇಕು , ಪಂಚಾಯ್ತಿಯಿಂದ ಕೊಟ್ಟಿರುವ ಶೋ,ಹ್ಯಾಂಡ್ ಗ್ಲೋವ್ಸ್ ಶಿಥಿಲವಾಗಿದ್ದು ಹೊಸದನ್ನು ಕೊಡಬೇಕು ಹಾಗೂ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಹೊದರೆ ನಮ್ಮ ಹತ್ತಿರವೂ ಸಹ ಹಣ ಕೇಳುತ್ತಾರೆ ಈ ಬಗ್ಗೆ ಪಂಚಾಯ್ತಿ ಅಧಿಕಾರಿಗಳು ಆಸ್ಪತ್ರೆಯ ವೈದ್ಯರಿಗೆ ತಿಳಿಸಬೇಕಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡು ಅವುಗಳನ್ನು ಪರಿಹರಿಸಿಕೊಡುವಂತೆ ಮತ್ತು ಯಶಸ್ವಿನಿ ಸೌಲಭ್ಯವನ್ನು ನಮಗೂ ಉಚಿತವಾಗಿ ದೊರೆಯುವಂತೆ ಮಾಡಬೇಕು ಎಂದು ಮನವಿ ಮಾಡಿದರು.

ಅಧ್ಯಕ್ಷೆ ಪುಟ್ಟಿಬಾಯಿ ಹಾಗೂ ಎಲ್ಲಾ ಪೌರಕಾರ್ಮಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...