ವಿಷಯಕ್ಕೆ ಹೋಗಿ

ನಗರ ಸ್ವಚ್ಚವಾಗಿಡಲು ಪೌರಕಾರ್ಮಿಕ ಸಹಕಾರ ಅಗತ್ಯ : ಕಾರ್ಯದರ್ಶಿ ಅಡವೀಶ್


 ಯಾವುದೇ ಒಂದು ಪಟ್ಟಣವನ್ನು ಸ್ವಚ್ಚವಾಗಿಡುವುದು ಅಲ್ಲಿನ ಪಂಚಾಯ್ತಿಯ ಎಲ್ಲಾ ಪೌರಕಾರ್ಮಿಕರ ದೈನಂದಿನ ಕಾರ್ಯವಾಗಿದ್ದು ,ಕೆಲಸದ ವಿಚಾರವಾಗಿ ಪಂಚಾಯ್ತಿಸದಸ್ಯರುಗಳು ಹಾಗೂ ಅಲ್ಲಿನ ಅಧಿಕಾರಿಗಳ ಜೊತೆ ಅವರು ಸೌಹಾರ್ದಯುತವಾಗಿ ನಡೆದುಕೊಳ್ಳುವ ಮೂಲಕ ಪಂಚಾಯ್ತಿಗೆ ಉತ್ತಮ ಹೆಸರು ತರಬೇಕೆಂದು ಕಾರ್ಯದರ್ಶಿ ಅಡವೀಶ್ ಕುಮಾರ್ ತಿಳಿಸಿದರು.

ಹುಳಿಯಾರು ಪಂಚಾಯ್ತಿಯಲ್ಲಿ ಸೋಮವಾರ ನಡೆದ ಪೌರಕಾರ್ಮಿಕರ ಸಭೆಯಲ್ಲಿ ಅವರು ಮಾತನಾಡಿದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಿದ್ದು ಯಾವುದೇಕಾರಣಕ್ಕೂ ನೀರಿನ ಸರಬರಾಜಿನಲ್ಲಿ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕೆಂದು ನೀರು ವಿತರಕರುಗಳಿಗೆ ಸೂಚಿಸಿದ ಅವರು ವಾಟರ್ ಟ್ಯಾಂಕ್,ಸಿಸ್ಟನ್ ತೊಳೆಯುವುದು,ಬೋರ್ ವೆಲ್,ಪೈಪ್ ಲೈನ್ ರಿಪೇರಿ ಕೆಲಸಗಳನ್ನು ಸಂಬಂಧಪಟ್ಟ ವಾಟರ್ಮೆನ್ ಸಕ್ರಿಯವಾಗಿ ನಿರ್ವಹಿಸುವುದು ನಿಮ್ಮಗಳ ಜವಬ್ದಾರಿಯಾಗಿದ್ದು ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ನಿಮ್ಮನ್ನೆ ಗುರಿಯಾಗಿಸುವುದಾಗಿ ಎಚ್ಚರಿಸಿದರು.
ಪೌರಕಾರ್ಮಿಕರು ತಮಗೆವಹಿಸಿ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸಿದಾಗ ಮಾತ್ರ ಪಟ್ಟಣ ಸ್ವಚ್ಚವಾಗಿರುತ್ತದೆ ಎಂದ ಅವರು ಅಧಿಕಾರಿಗಳು ಕೇಳಿದಾಗ ಅಲ್ಲಿ,ಇಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಾಜರಿ ಹಾಕಿಸುವ ಬದಲು ಪ್ರತಿ ದಿನ ಕಛೇರಿಗೆ ಬಂದು ಸಹಿ ಪುಸ್ತಕದಲ್ಲಿ ತಮ್ಮ ಹಾಜರಾತಿ ಹಾಕುವುದು ಕಡ್ಡಾಯವೆಂದರು. ಪ್ರತಿ ದಿನ ಮುಂಜಾನೆ 5ರಿಂದ 8 ಗಂಟೆವರೆಗೆ ಬಸ್ ಸ್ಟಾಂಡ್ ಸೇರಿದಂತೆ ಪಟ್ಟಣದ ಬೀದಿಗಳ ಕಸ ಗುಡಿಸಿ ತೆರವುಗೊಳಿಸಬೇಕು, ನಂತರ 10ರಿಂದ 3 ಗಂಟೆಯವರೆಗೆ ಪಟ್ಟಣದ ಚರಂಡಿಗಳನ್ನು ಸ್ವಚ್ಚ ಮಾಡುವ ಕಾರ್ಯ ಮಾಡಬೇಕಿದ್ದು ಪೌರಕಾರ್ಮಿಕರು ಗೊತ್ತು ಮಾಡಿರುವ ಸಮವಸ್ತ್ರವನ್ನು ತಮ್ಮ ಕೆಲಸದ ಅವಧಿಯಲ್ಲಿ ಧರಿಸಬೇಕೆಂದು ಸೂಚಿಸಿದರು. ಎಲ್ಲಾ ಪೌರಕಾರ್ಮಿಕರಿಗಾಗಿ ಜೀವವಿಮೆ ಮಾಡಿಸಿದ್ದು ಅವರ ವೇತನದಲ್ಲಿ ಕಟ್ ಆಗುತ್ತಿದೆ ಎಂದರು.
ಹುಳಿಯಾರು ಗ್ರಾ.ಪಂ.ಯ ಪೌರಕಾರ್ಮಿಕರ ಸಭೆಯಲ್ಲಿ ಅಧ್ಯಕ್ಷೆ ಪುಟ್ಟಿಬಾಯಿ,ಕಾರ್ಯದರ್ಶಿ ಅಡವೀಶ್ ಕುಮಾರ್ ಇದ್ದಾರೆ.

ಇದೇ ಸಂದರ್ಭದಲ್ಲಿ ತಮ್ಮ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ಪೌರಕಾರ್ಮಿಕರು ಚರಂಡಿ ಕ್ಲೀನ್ ಮಾಡಲು ಹೋದಾಗ ಮನೆಯವರು ಗಲಾಟೆ ಮಾಡುವ ಬದಲು ತಮ್ಮೊಂದಿಗೆ ಸಹಕರಿಸಬೇಕು , ಪಂಚಾಯ್ತಿಯಿಂದ ಕೊಟ್ಟಿರುವ ಶೋ,ಹ್ಯಾಂಡ್ ಗ್ಲೋವ್ಸ್ ಶಿಥಿಲವಾಗಿದ್ದು ಹೊಸದನ್ನು ಕೊಡಬೇಕು ಹಾಗೂ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಹೊದರೆ ನಮ್ಮ ಹತ್ತಿರವೂ ಸಹ ಹಣ ಕೇಳುತ್ತಾರೆ ಈ ಬಗ್ಗೆ ಪಂಚಾಯ್ತಿ ಅಧಿಕಾರಿಗಳು ಆಸ್ಪತ್ರೆಯ ವೈದ್ಯರಿಗೆ ತಿಳಿಸಬೇಕಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡು ಅವುಗಳನ್ನು ಪರಿಹರಿಸಿಕೊಡುವಂತೆ ಮತ್ತು ಯಶಸ್ವಿನಿ ಸೌಲಭ್ಯವನ್ನು ನಮಗೂ ಉಚಿತವಾಗಿ ದೊರೆಯುವಂತೆ ಮಾಡಬೇಕು ಎಂದು ಮನವಿ ಮಾಡಿದರು.

ಅಧ್ಯಕ್ಷೆ ಪುಟ್ಟಿಬಾಯಿ ಹಾಗೂ ಎಲ್ಲಾ ಪೌರಕಾರ್ಮಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.