ವಿಷಯಕ್ಕೆ ಹೋಗಿ

ವಚನ ಸಾಹಿತ್ಯದ ಬಳಕೆಯಿಂದ ಸಂಸ್ಕೃತಿ ಉಳಿವು ; ಮಾತೆಮಹಾದೇವಿ

          ವಚನ ಸಾಹಿತ್ಯ ಅಧ್ಯಯನ ಮಾಡುವುದರಿಂದ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಬಹುದೆಂದು ಬಸವಧರ್ಮ ಪೀಠಾಧ್ಯಕ್ಷರಾದ ಡಾ||ಮಾತೆ ಮಹಾದೇವಿ ತಿಳಿಸಿದರು.
         ಯಳನಡು ಗ್ರಾಮದ ಬಸವಯೋಗಿ ಸಿದ್ದರಾಮೇಶ್ವರ ಸಂಘದ ವತಿಯಿಂದ ಸೋಮವಾರ ನಡೆದ ನೂತನ ಬಸವ ಮಂಟಪ ಹಾಗೂ ಪ್ರಾರ್ಥನಾ ಮಂದಿರದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಅವರು ಮಾತನಾಡಿದರು.
ಹುಳಿಯಾರು ಹೋಬಳಿ ಯಳನಡುವಿನಲ್ಲಿ ನಡೆದ ನೂತನ ಬಸವ ಮಂಟಪ ಹಾಗೂ ಪ್ರಾರ್ಥನಾ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಮಾತೆಮಹಾದೇವಿ,ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ, ನಿಜಗುಣಾನಂದ ಸ್ವಾಮೀಜಿ,ವೈ.ಆರ್.ಮಲ್ಲಿಕಾರ್ಜುನಯ್ಯ ಇತರರಿದ್ದಾರೆ.
         ಸಮಾನತೆ ಸಾರುವ ವಚನ ಸಾಹಿತ್ಯ ಅಧ್ಯಯನ ಮಾಡದೇ ಹೋದಲ್ಲಿ ಸಂಸ್ಕೃತಿ ಹಾಳಾಗುತ್ತದೆ ಎಂದ ಅವರು ವೀರಶೈವ ಎಂಬುದು ಜಾತಿಯಲ್ಲ ಅದೊಂದು ಧರ್ಮವಾಗಿದೆ. ಜಾತಿ,ವರ್ಣ,ವರ್ಗ ರಹಿತ ಧರ್ಮ ಸಹಿತ ಶರಣ ಸಮಾಜ ಹಾಗೂ ಕಲ್ಯಾಣ ರಾಜ್ಯ ನಿರ್ಮಾಣದ ಗುರಿ ಈ ಧರ್ಮದ ಧ್ಯೇಯವಾಗಿದ್ದು ಇದಕ್ಕೆ ಮಾನ್ಯತೆ ನೀಡಬೇಕಿದೆ ಎಂದರು. ಯಳನಡು ಸಿದ್ದರಾಮೇಶ್ವರರ ತಪೋಭೂಮಿಯಲ್ಲಿ ಇಂತಹ ಪ್ರಾರ್ಥನಾ ಮಂದಿರ ಸ್ಥಾಪನೆಯಾಗಿರುವುದು ಶ್ಲಾಘನೀಯ ಇದು ಇಲ್ಲಿಗೆ ಬರುವ ಶರಣರಿಗೆ ವಚನ ಸಾಹಿತ್ಯ ಉಣಬಡಿಸುವ ಕೇಂದ್ರವಾಗಲಿ ಎಂದು ಆಶಿಸಿದರು.

                ಬೆಂಗಳೂರಿನ ಬಸವ ಮಂಟಪದ ಬಸವಕುಮಾರಸ್ವಾಮೀಜಿ ವಿಶ್ವಗುರು ಬಸವೇಶ್ವರರ ಅಮೃತಶಿಲಾ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿದರು. ಯಳನಡು-ಅರಸೀಕೆರೆ ಮಹಾಸಂಸ್ಥಾನ ಮಠದ ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ, ಬೈಲಹೊಂಗಲ ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಬಸವಧರ್ಮ ತತ್ವಪ್ರಚಾರಕ ಸಣ್ಣನಂಜಪ್ಪ,ಮಾಜಿ ತಾಪಂ ಸದಸ್ಯ ವೈ.ಆರ್.ಮಲ್ಲಿಕಾರ್ಜುನಯ್ಯ ,ಸಿದ್ದರಾಮೇಶ್ವರ ಸಮುದಾಯ ಭವನದ ಅಧ್ಯಕ್ಷ ಜಿ.ಬಸವರಾಜು,ಕರಿಯಮ್ಮ ದೇಗುಲ ಸಮಿತಿ ಮಾಜಿ ಅಧ್ಯಕ್ಷ ಲಾಳಿ ವೈ.ಕೆ.ಸೋಮಶೇಖರಯ್ಯ, ಯಳನಡು ಬಸವಯೋಗಿ ಸಿದ್ದರಾಮೇಶ್ವರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ,ಕಾರ್ಯದರ್ಶಿ ಮಹೇಶ್ ಶಾಸ್ತ್ರಿ,ಸದಸ್ಯರಾದ ಸುದರ್ಶನಾ ಚಾರ್,ವೈ.ಬಿ.ನಾಗರಾಜು ಇತರರಿದ್ದರು. ಎಸ್.ನಾಗಭೂಷಣ ಪಟೇಲ್ ಸ್ವಾಗತಿಸಿ,ಹೊಸದುರ್ಗ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮೆ.ನಾ.ಬೊಮ್ಮಲಿಂಗಪ್ಪ ನಿರೂಪಿಸಿದರು. ಬೆಂಗಳೂರಿನ ನಿಸರ್ಗ ಮತ್ತು ಚೈತ್ರ, ತುರುವೇಕೆರೆ ಸಂತೋಷ್ ಕುಮಾರ್ ವಚನ ನೃತ್ಯರೂಪ ನಡೆಸಿಕೊಟ್ಟರು.






ಯಳನಡು ಗ್ರಾಮದಲ್ಲಿ ನಿರ್ಮಿಸಿರುವ ನೂತನ ಬಸವ ಮಂಟಪ ಹಾಗೂ ಪ್ರಾರ್ಥನಾ ಮಂದಿರ.










ಮಾತೆ ಮಹಾದೇವಿ ಅವರಿಂದ ನೂತನ ಬಸವಣ್ಣನ ವಿಗ್ರಹಕ್ಕೆ ಪೂಜೆ.



ಬಸವಧರ್ಮ ಪೀಠಾಧ್ಯಕ್ಷರಾದ ಡಾ||ಮಾತೆ ಮಹಾದೇವಿ ಅವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದ್ದು.





ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...