ವಿಷಯಕ್ಕೆ ಹೋಗಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅಗತ್ಯ

           ಗ್ರಾಮೀಣ ಪ್ರದೇಶದಲ್ಲಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು ಅವರಿಗೂ ಉತ್ತಮ ಪ್ರೋತ್ಸಾಹ ಸಿಕ್ಕರೆ ದೇಶದ ಆಸ್ತಿಯಾಗುತ್ತಾರೆ ಎಂದು ನೀರಾವರಿ ಹೋರಾಟಗಾರ ಡಾ.ಪರಮೇಶ್ವರಪ್ಪ ಹೇಳಿದರು.

ಹುಳಿಯಾರು ಹೋಬಳಿ ಗಾಣದಾಳು ಕ್ಲಸ್ಟರ್ ನ ಶಾಲೆಗಳ ಮಕ್ಕಳಿಗೆ ಶಾರದಜಯರಾಮಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ನೋಟ್ ಪುಸ್ತಕ ವಿತರಿಸಲಾಯಿತು. ಡಾ.ಪರಮೇಶ್ವರಪ್ಪ, ಜಿ.ಎಸ್.ಶ್ರೀನಿವಾಸ್, ಸಾ.ಚಿ.ನಾಗೇಶ್ ಮುಂತಾದವರು ಇದ್ದರು.


ಹೋಬಳಿಯ ಗಾಣದಾಳು ಗ್ರಾಮದಲ್ಲಿ ಶಾರದಜಯರಾಮಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಗಾಣದಾಳು, ಮೇಲನಹಳ್ಳಿ, ಗುರುವಾಪುರ, ಕಂಪನಹಳ್ಳಿ, ಯಗಚಿಹಳ್ಳಿ ಮುಂತಾದ ಗ್ರಾಮಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು.
ದೇಶದ ಸಾರ್ವಜನಿಕ ಆಡಳಿತದಲ್ಲಿ ಉತ್ತಮ ಹೆಸರು ಗಳಿಸಿರುವ ಬಹುತೇಕರು ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆಯಲ್ಲಿಯೇ ಅಭ್ಯಾಸ ಮಾಡಿದವರಾಗಿದ್ದಾರೆ. ಅಂತಹವರನ್ನು ಮಾದರಿಯಾಗಿಟ್ಟುಕೊಂಡು ಸಾದನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಶಾರದಜಯರಾಮಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಬೇಕು ಎಂಬ ಉದ್ದೇಶದಿಂದ ಪ್ರತಿವರ್ಷ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಮಕ್ಕಳಿಗೂ ನೋಟ್ ಪುಸ್ತಕ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

                             ಗಾಣದಾಳು ಗ್ರಾಪಂ ಅಧ್ಯಕ್ಷ ಜಿ.ಎಸ್.ಶ್ರೀನಿವಾಸ್ ಮಾತನಾಡಿ ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆಗಿಳಿ
ಯಬೇಕಾದ ನಮ್ಮ ಸರ್ಕಾರಿ ಶಾಲೆಗಳ ಮಕ್ಕಳ ಸೃಜನಶೀಲತೆಯನ್ನು ಹೆಚ್ಚಿಸಲು ಸಂಘ, 
ಸಂಸ್ಥೆಗಳು, ಟ್ರಸ್ಟ್ ಗಳು ನೆರವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ನೂರಾರು ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.


ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್, ವಕೀಲ ಸದಾಶಿವು, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...