ವಿಷಯಕ್ಕೆ ಹೋಗಿ

ಕೆಂಕೆರೆಯಲ್ಲಿ ಶ್ರದ್ಧಾಭಕ್ತಿಯಿಂದ ಕಾರಬ್ಬ ಆಚರಣೆ

          ಮಾಡಿದ ಆರಂಭ ಕೈ ಹತ್ತಲು,ಬಿತ್ತಿದ ಬೆಳೆ ಕೈಸೇರಲು ರೈತಾಪಿ ವರ್ಗದಲ್ಲಿ ಹಿಂದಿನಿಂದ ಅನೇಕ ಆಚರಣೆಗಳು ಜಾರಿಯಲ್ಲಿದ್ದು ಅದರಲೊಂದು ಈ ಕಾರಹಬ್ಬ. ಮುಂಗಾರಿನಲ್ಲಿ ರಾಗಿ,ಹುರುಳಿ,ತೊಗರಿ ಬೆಳೆ ಬಿತ್ತನೆಗೂ ಮುಂಚೆ ಕಾರಬ್ಬವನ್ನು ಆಚರಿಸುವ ಪರಿಪಾಟವಿದ್ದು ಈ ಬಾರಿ ತಾವು ಯಾವ ಬೆಳೆ ಬಿತ್ತಿದರೆ ಕೈ ಹತ್ತಲಿದೆ, ಹೆಚ್ಚು ಫಸಲು ದೊರೆಯಲಿದೆ ಹಾಗೂ ಈ ವರ್ಷ ಯಾವ ಫಸಲು (ಬೆಳೆ) ಅಧಿಕವಾಗಿ ಬೆಳೆದು ತಮ್ಮ ಕೈಸೇರಲಿದೆ ಎಂಬುದನ್ನು ನಂಬಿಕೆಯ ಆಧಾರದಲ್ಲಿ ತಿಳಿಯಲ್ಪಡಲು ಸಮೀಪದ ಕೆಂಕೆರೆ ಗ್ರಾಮದಲ್ಲಿ ಕಾರಬ್ಬವನ್ನು ಗ್ರಾಮದ ಹಿರಿಯರ ಸಮ್ಮುಖದಲ್ಲಿ ಗುರುವಾರ ಸಂಜೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದಲ್ಲಿ ಕಾರಬ್ಬದ ಅಂಗವಾಗಿ ಊರಿನ ಕಾರೆಕಲ್ಲಿನ ಹತ್ತಿರ ಧಾನ್ಯಗಳನ್ನು ತುಂಬಿದ ಮಡಿಕೆಯನ್ನು ಹೊಡೆಯುತ್ತಿರುವುದು.
   ಆಚರಣೆ ಹೇಗೆ: ಗ್ರಾಮದ ಶ್ರೀರಂಗನಾಥಸ್ವಾಮಿ ದೇವಾಲಯದ ಬಳಿ ಇರುವ ಕಾರೇಕಲ್ಲನ್ನು ಗ್ರಾಮದ ಹಿರಿಯ ಮಾರ್ಗದರ್ಶನದಲ್ಲಿ ಯುವಕರು ಶುಚಿಗೊಳಿಸಿ ಸುಣ್ಣ ಹಾಗೂ ಕೆಂಪು ಬಣ್ಣಹಚ್ಚಿ ನಂತರ ಬೇವಿನ ಸೊಪ್ಪು ಮತ್ತು ಅಂಬಳ್ಳಿಯನ್ನು ಬಿಗಿಯಾಗಿ ಬಿಗಿದು ಕಟ್ಟಿ ಪೂಜೆಗೆ ಸಿದ್ದತೆ ಮಾಡಿರುತ್ತಾರೆ. ಗ್ರಾಮದ ಸಮೀಪವಿರುವ ಗ್ಯಾರಳ್ಳದ ಸದಾಶಿವಣ್ಣ ಎಂಬುವರ ಮನೆಯಿಂದ ತರಲಾಗುವ ಅರಿಶಿನ ಅನ್ನದ ನೈವೇದ್ಯ(ಕಿಚುಡಿ)ದ ಜೊತೆಗೆ ಒಂದು ಮಣ್ಣಿನ ಮಡಿಕೆಯಲ್ಲಿ ನೀರುಹಾಕಿ ತಾವು ಬೆಳೆಯುವ ಧಾನ್ಯಗಳನ್ನೂ ಒಂದೊಂದು ಹಿಡಿಯಷ್ಟು ತುಂಬಲಾಗುತ್ತದೆ. ಆ ಮಡಿಕೆಗೆ ಅಂಗುನೂಲು, ಅಕ್ಷತೆಗಳನ್ನಿಟ್ಟು ಕೊಂಡು ಊರಿನ ಕಾರೆಕಲ್ಲಿನ ಹತ್ತಿರ ತಂದಿಟ್ಟು ಪೂಜೆಸಲ್ಲಿಸಿದ ನಂತರ ಗ್ರಾಮಸ್ಥರ ಒಪ್ಪಿಗೆ ಪಡೆದು ಮೆಡ್ಡೆಗೋಲಿನ ಸಹಾಯದಿಂದ ಆ ಮಡಿಕೆಯನ್ನು ಹೊಡೆಯುತ್ತಾರೆ. ಹಾಗೆ ಹೊಡೆದ ರಭಸಕ್ಕೆ ಮಡಿಕೆ ಒಳಗಿನ ಧಾನ್ಯಗಳೆಲ್ಲಾ ಮಡಿಕೆಯಲ್ಲಿದ್ದ ನೀರಿನೊಂದಿಗೆ ಹೊರಬಂದು ಹರಿಯುತ್ತವೆ. ಹೀಗೆ ಧಾನ್ಯಗಳಲ್ಲಿ ಯಾವ ಧಾನ್ಯ ಎಲ್ಲಕ್ಕಿಂತ ಮುಂದೆ ಹರಿದಿರುತ್ತದೆಯೋ ಆ ಧಾನ್ಯ ಈ ವರ್ಷ ಉತ್ತಮ ಫಸಲು ಕೊಡುತ್ತದೆಂದು ನಂಬುತ್ತಾರೆ. ಅಲ್ಲದೆ ಮುಂಗಾರು ಹಾಗೂ ಹಿಂಗಾರು ಬೆಳೆಗಳಲ್ಲಿ ಯಾವುದು ಹೆಚ್ಚು ದೊರೆಯುತ್ತದೆ ಎಂಬುದನ್ನೂ ಸಹ ಈ ಆಚರಣೆಯಲ್ಲಿ ತಿಳಿದು ಬರುತ್ತದೆ.
          ಗ್ರಾಮದ ಹಿರಿಯ ಸದಾಶಿವಯ್ಯ ಹೇಳುವಂತೆ ಅನಾದಿಕಾಲದಿಂದಲೂ ಈ ಆಚರಣೆ ಜಾರಿಯಲ್ಲಿದ್ದು ರಾಸುಗಳಿಗೆ ಯಾವುದೇ ರೋಗರುಜನೆ ಬಾರದಂತೆ ಹಾಗೂ ಉತ್ತಮ ಫಸಲು ಸಿಗಲಿ ಎಂಬ ನಂಬಿಕೆಯಿಂದ ನೇಗಿಲು,ನೊಗ,ಕುಂಟೆ,ಕೂರಿಗೆ ಸೇರಿದಂತೆ ಇತರ ಕೃಷಿ ಉಪಕರಣ ಶುಚಿಗೊಳಿಸಿಕೊಂಡು ತಾವು ಸಾಕಿದ ದನಗಳ ಮೈತೊಳೆದು ಅವುಗಳ ಕೊಂಬಿಗೆ ನೀಲಿ,ಕೆಂಪು ಬಣ್ಣ ಹಚ್ಚಿ ಹೂಗಳಿಂದ ಸಿಂಗರಿಸಿ, ಪೂಜಿಸಿದ ನಂತರ ನೈವೇದ್ಯ ಇಟ್ಟು ಊರಿನ ದೇವಾಲಯದಲ್ಲಿಗೆ ತೆರಳಿ ಪೂಜೆಸಲ್ಲಿಸಿ ಈ ಬಾರಿ ಉತ್ತಮ ಬೆಳೆ ಬರಲಿ ಎಂದು ಪ್ರಾರ್ಥಿಸಿಕೊಳ್ಳುವ ಮೂಲಕ ಹಬ್ಬ ಕೊನೆಗೊಳಿಸಲಾಯಿತು.

         ಈ ಸಂಧರ್ಭದಲ್ಲಿ ಪುರೋಹಿತರಾದ ಚನ್ನಬಸವಯ್ಯ,ಈಶ್ವರಯ್ಯ ಸೇರಿದಂತೆ ಚೇತನ,ಕುಮಾರಣ್ಣ,ಕೊಟ್ರೇಶ್,ಶ್ರೀಧರ್,ಚನ್ನಬಸವಯ್ಯ,ಬಾಬುರಾಜ್,ಶರತ್ ಸೇರಿದಂತೆ ಅಪಾರ ಸಂಖ್ಯೆಯ ಯುವಕರು ಕಾರೆಕಲ್ಲಿಗೆ ಕಟ್ಟಿದ್ದ ಅಂಬಳ್ಳಿ ಹಾಗೂ ಬೇವಿನ ಸೊಪ್ಪನ್ನು ಎಳೆಯುವಲ್ಲಿ ಪಾಲ್ಗೊಂಡಿದ್ದು, ತಮ್ಮ ಮನೆಗಳಿಗೆ ಈ ಕಾರೆಸೊಪ್ಪನ್ನು ತೆಗೆದು ಕೊಂಡು ಹೋಗುವ ಮೂಲಕ ಕಾರಬ್ಬವನ್ನು ಆಚರಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...