ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಕಸದ್ದೇ ಕಾರುಬಾರು

ಜಿಲ್ಲೆಯಲ್ಲೇ ಅತಿ ದೊಡ್ಡ ಹೋಬಳಿ ಕೇಂದ್ರವಾಗಿರುವ, ತಾಲ್ಲೂಕಿನ ಅರ್ಹತೆ ಹೊಂದಿದ್ದರೂ ಪಟ್ಟಣವಾಗೇ ಉಳಿದಿರುವ, ಜಿಲ್ಲೆಯಲ್ಲಿಯೇ 33 ಸದಸ್ಯರನ್ನು ಹೊಂದಿರುವ ಅತಿ ದೊಡ್ಡ ಪಂಚಾಯ್ತಿಯಾಗಿರುವ ಹುಳಿಯಾರಿನಲ್ಲಿ ಕಸದ್ದೇ ಕಾರುಬಾರಾಗಿದ್ದು , ಪಟ್ಟಣದ ತುಂಬೆಲ್ಲಾ ಕಸದ ರಾಶಿ ರಾಶಿ ರಾರಾಜಿಸುತ್ತಿದ್ದು, ಜನತೆ ಅಸಹ್ಯಪಟ್ಟುಕೊಂಡು ಓಡಾಡುವಂತಾಗಿದೆ.
ಆಸ್ಪತ್ರೆಯ ಪ್ರವೇಶದ್ವಾರದಲ್ಲೆ ಕಾಣಸಿಗುವ ಕಸದ ರಾಶಿ.


ಹೌದು .ಹದಿಮೂರು ವಾರ್ಡ್ ಗಳನ್ನು ಹೊಂದಿ ಸರಿಸುಮಾರು 17 ಸಾವಿರ ಜನ ಸಂಖ್ಯೆಯನ್ನು ಮೀರಿರುವ ಪಟ್ಟಣದಲ್ಲಿ ಕಸವಿಲೇವಾರಿಯದ್ದೇ ದೊಡ್ಡ ಸಮಸ್ಯೆಯಾಗಿದೆ. ಪ್ರತಿ ವಾರ್ಡ್ ನಲ್ಲೂ ಕಸ ಶೇಖರಣೆಗೆ ಸೂಕ್ತ ವ್ಯವಸ್ಥೆಯಿಲ್ಲದ ಕಾರಣ ಗುಂಡಿಗಳು,ಚರಂಡಿ ಬದಿ ಹಾಗೂ ಖಾಲಿ ನಿವೇಶನಗಳೇ ಕಸ ಸಂಗ್ರಹಗಾರವಾಗಿ ನಿವಾಸಿಗಳು ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯದಿಂದ ಅನೈರ್ಮಲ್ಯಕ್ಕೆ ಕಾರಣವಾಗಿದೆ.
ಕಸದ ಸಂಗ್ರಹಗಾರವಾಗಿರುವ ಕೆರೆ ಅಂಗಳ

ಪಟ್ಟಣದ ಬಸ್ ನಿಲ್ದಾದ ಅಂಗಡಿಗಳ ಬಳಿ , ರಾಜ್ ಕುಮಾರ್ ರಸ್ತೆಯ ಆಸ್ಪತ್ರೆ ಕಾಂಪೌಡ್ ಬಳಿ, ಹುಳಿಯಾರಮ್ಮದೇವಿ ವೃತ್ತ,ಅಜಾದ್ ನಗರ,ಕೆಂಚಾಂಬ ನಗರ,ರಾಂಗೋಪಾಲ್ ಸರ್ಕಲ್, ಕೆಇಬಿ ಕಚೇರಿಯ ಕಾಂಪೌಡ್ ಬಳಿ , ಹುಳಿಯಾರು ಅಮಾನಿಕೆರೆ ಏರಿಯ ಪಕ್ಕ ಸೇರಿದಂತೆ ಎಲ್ಲಾ ವಾರ್ಡ್ ಗಳ ಗಲ್ಲಿಯೂ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದರೂ ಸಹ ಕಂಡರು ಕಾಣದಂತೆ ಜನ ಇಲ್ಲಿಯೇ ಸಂಚರಿಸುತ್ತಿದ್ದಾರೆ.
ಮಾರುತಿ ನಗರದ ನಿವೇಶನವೊಂದರಲ್ಲಿ ಸುರಿದಿರುವ ಕಸದ ರಾಶಿ


ಸಮಸ್ಯೆ ಏನು: ಪ್ರತಿ ಬೀದಿಯಲ್ಲಿ ಕಸ ಸಂಗ್ರಹಣೆಗೆ ತೊಟ್ಟಿಯಿಡದಿದ್ದು ಮನೆಯಲ್ಲಿನ ಕಸ ಎಲ್ಲಿ ಹಾಕುವುದೆಂಬ ಸಮಸ್ಯೆ ಪ್ರಮುಖವಾಗಿದೆ.ಇದರ ಜೊತೆಗೆ ತರಕಾರಿ ಅಂಗಡಿ, ಹತ್ತಾರೂ ಕೋಳಿ ಅಂಗಡಿ,ಹೋಟೆಲ್ ಸೇರಿದಂತೆ ನೂರಾರು ಅಂಗಡಿಗಳಿಂದ ಸಂಗ್ರಹವಾಗುವ ಟನ್ ಗಟ್ಟಲೆ ಕಸವನ್ನು ಎಲ್ಲಿ ಬೇಕೆಂದರಲ್ಲಿ ಸುರಿಯುವುದರಿಂದ ಸಮಸ್ಯೆ ಬಿಗಡಾಯಿಸಿದೆ.ಬಸ್ ನಿಲ್ದಾಣದ ಬಳಿ ಅತಿಹೆಚ್ಚು ಕಸ ಸಂಗ್ರಹವಾಗುತ್ತಿದ್ದು ಅದನ್ನು ಅಲ್ಲಿಯೆ ಬದಿಯಲ್ಲಿರುವ ಕೆರೆ ಅಂಗಳಕ್ಕೆ ಸುರಿಯುವುದರಿಂದ ಅದೆಲ್ಲ ಕೊಳೆತು ದುರ್ವಾಸನೆ ಬೀರುತ್ತಿದೆ.
ಆಸ್ಪತ್ರೆಯ ಮತ್ತೊಂದು ದ್ವಾರದಲ್ಲೂ ಕಾಣಸಿಗುವ ಕಸದ ರಾಶಿ.

ಕೊರತೆ : ಪಟ್ಟಣದಲ್ಲಿ ನಿತ್ಯ ಉತ್ಪತ್ತಿಯಾಗುವ ಕಸವನ್ನು ತೆರವು ಮಾಡಲು ಪೌರಕಾರ್ಮಿಕ ಕೊರತೆಯಿದೆ ಎನ್ನುತ್ತಾರೆ ಪಂಚಾಯ್ತಿಯ ಸಿಬ್ಬಂದಿ. 12 ಜನ ಲೆಖ್ಖದಲ್ಲಿದ್ದು 10 ಜನ ಮಾತ್ರ ಕೆಲಸ ಮಾಡುತ್ತಿದ್ದಾರೆ. ಅನಾರೋಗ್ಯದ ಕಾರಣ ,ನಿಗದಿತ ಸಮಯಕ್ಕೆ ವೇತನ ನೀಡದಿರುವ ನೆಪವೊಡ್ಡಿ ಅದರಲ್ಲೂ ಕೆಲವರು ಗೈರು ಆಗುತ್ತಾರೆ.ಇರುವ ಸಿಬ್ಬಂದಿಯಿಂದ ಪಟ್ಟಣದ ಕಸಗುಡಿಸಿ , ಇರುವ 145 ಚರಂಡಿಗಳನ್ನು ಸ್ವಚ್ಚಗೊಳಿಸಲು ಆಸಾಧ್ಯವಾಗಿದೆ.
ಕೆ.ಇ.ಬಿ ಮುಂಭಾಗದಲ್ಲಿ ಕಾಣಸಿಗುವ ಕಸದ ರಾಶಿ.

               ಪಟ್ಟಣದಲ್ಲಿ ನಿತ್ಯ ಉತ್ಪತ್ತಿಯಾಗುವ ಕಸವನ್ನು ಒಂದೆಡೆ ಸಂಗ್ರಹಿಸಲು ಪಂಚಾಯ್ತಿಯ ಯಾವುದೇ ಸ್ಥಳವಿಲ್ಲ, ಹಿಂದೆ ಪಟ್ಟಣದಿಂದ ಒಂದು ಕಿ.ಮೀ ದೂರದ ಲಿಂಗಪ್ಪನಪಾಳ್ಯದ ಬಳಿ ಇರುವ ಖಾಲಿ ಜಾಗದಲ್ಲಿ ಕಸ ಸಂಗ್ರಹಿಸಲು ಜಾಗ ಗುರ್ತಿಸಿದ್ದರೂ ಅದು ಇದುವರೆಗೂ ಮಂಜೂರಾಗಿಲ್ಲ. ಅಲ್ಲದೆ ಕಸ ತೆರವು ಮಾಡಲು ಪಂಚಾಯ್ತಿಯಲ್ಲಿ ಸ್ವಂತ ತಳ್ಳುವ ಗಾಡಿಯಾಗಲಿ,ಆಟೋವಾಗಲಿ, ಟ್ರ್ಯಾಕ್ಟರ್ ಇಲ್ಲದೆ ವಾರಕ್ಕೊಮ್ಮೆ ಬಾಡಿಗೆ ಟ್ರ್ಯಾಕ್ಟರ್ ಪಡೆದು ಇರುವ ಹತ್ತು ಪೌರಕಾರ್ಮಿಕರನ್ನೇ ಬಳಿಸಿ ಪಟ್ಟಣದ ವಿವಿಧ ರಸ್ತೆ, ಬಡಾವಣೆಗಳಲ್ಲಿ ಬಿದ್ದಿರುವ ಕಸವನ್ನು ಅದಷ್ಟೂ ತೆರವು ಮಾಡುತ್ತಿದ್ದೇವೆ ಆದರೂ ಸಹ ಕಸದ ಪ್ರಮಾಣ ಹೆಚ್ಚಾಗಿದೆ ಎನ್ನುತ್ತಾರೆ ಪಿಡಿಓ ಅಡವೀಶ್ ಕುಮಾರ್.


ಟ್ರಾಕ್ಟರ್ ಮಂಜಣ್ಣನ ಮನೆಮುಂಭಾಗದಲ್ಲಿ ಕಾಣಸಿಗುವ ಕಸದ ತಿಪ್ಪೆ.
 ಕಸಮುಕ್ತ ಪಟ್ಟಣಕ್ಕೆ ಪಂಚಾಯ್ತಿಸಿಬ್ಬಂದಿಯವರು ಸೂಕ್ತಕ್ರಮ ಕೈಗೊಂಡಲ್ಲಿಹಾಗೂ ಪಂಚಾಯ್ತಿ ಕಾರ್ಯ

ವೈಖರಿ ಬಗ್ಗೆ ಅಪಸ್ವರ ಎತ್ತುವ ನಾಗರೀಕರು ಸಹ ಎಲ್ಲೆಂದರಲ್ಲಿ ಕಸ ಎಸೆಯುವ ಚಾಳಿಯ ಬಗ್ಗೆ ಅರಿವು ಮೂಡಿಸಿಕೊಂಡು ಸಹಕರಿಸಿದಲ್ಲಿ ಮತ್ತು ಎಲ್ಲರೂ ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿ ವಹಿಸಿದಲ್ಲಿ ಪಟ್ಟಣ ಸ್ವಚ್ಛತೆ ಕಾಪಾಡಬಹುದಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...