ವಿಷಯಕ್ಕೆ ಹೋಗಿ

ಹುಳಿಯಾರು : ಕಾರ್ಯದರ್ಶಿಯಿಂದ ಹಣ ದುರುಪಯೋಗ - ಸದಸ್ಯರಿಂದ ಅರೋಪ

           ಇಲ್ಲಿನ ಗ್ರಾ.ಪಂ.ಯ ಕಾರ್ಯದರ್ಶಿ ಅಡವೀಶ್ ಕುಮಾರ್ ಪಂಚಾಯ್ತಿ ಸದಸ್ಯರ ಒಪ್ಪಿಗೆಯಿಲ್ಲದೆ ಲಕ್ಷಾಂತರ ರೂ ಹಣವನ್ನು ಡ್ರಾ ಮಾಡಿಕೊಂಡು ದುರುಪಯೋಗ ಮಾಡಿದ್ದಾರೆಂದು ಗ್ರಾ.ಪಂ.ಯ ಸದಸ್ಯರು ಆರೋಪಿಸಿದ್ದಾರೆ.
                 ಪಂಚಾಯ್ತಿಯಲ್ಲಿ ಸೋಮವಾರದಂದು ನಡೆದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು , ಪಂಚಾಯ್ತಿಯ ಸದಸ್ಯರ ಗಮನಕ್ಕೆ ತಾರದೇ ಸುಮಾರು ಲಕ್ಷಾಂತರ ರೂಗಳನ್ನು ಪಂಚಾಯ್ತಿ ಖಾತೆಯಿಂದ ಡ್ರಾ ಮಾಡಿರುವುದಾಗಿ ಇಓ ಕೃಷ್ಣನಾಯಕ್ ಅವರ ಸಮಕ್ಷಮದಲ್ಲಿ ಸದ್ಯಸ್ಯರು ದೂರಿದ್ದಾರೆ. ಈ ಹಿಂದೆಯಿದ್ದ ಅಧ್ಯಕ್ಷರು ಹಾಗೂ ಹಾಲಿ ಇರುವ ಕಾರ್ಯದರ್ಶಿ ಅವರು ಸಭೆ ಮುಂದೆ ಚರ್ಚೆಗಿಡದೆ ತಮಗೆ ಮನ ಬಂದಂತೆ ಪಂಚಾಯ್ತಿ ಖಾತೆಯಿಂದ ಹಣ ತೆಗೆದಿರುವುದಾಗಿ ಹಾಗೂ ಯಾವುದೇ ರೀತಿಯ ಬಿಲ್,ಓಚರ್ ಗಳನ್ನು ತಮಗೆ ತೋರಿಸದೆ, ದಿನವಹಿ ಪುಸ್ತಕದಲ್ಲೂ ಸರಿಯಾಗಿ ನಮೋದಿಸದೇ ಇರುವುದರಿಂದ ಹಣದ ದುರುಪಯೋಗ ಮಾಡಿರಬಹುದೆಂದು ಎಂದು ಸದಸ್ಯರು ಇಓ ಅವರಿಗೆ ತಿಳಿಸಿದರು.
                       ಪಂಚಾಯ್ತಿಯ ಅಭಿವೃದ್ದಿ ಕಾರ್ಯಗಳಿಗೆ ನೆರವಾಗಲೆಂದು ಸರ್ಕಾರ ಅನುದಾನ ಬಿಡುಗಡೆ ಮಾಡಿದರೆ ಅದನ್ನು ಪಟ್ಟಣದ ಸಮಸ್ಯೆಗಳನ್ನು ಬಗೆ ಹರಿಸಲು ಬಳಸುವ ಬದಲು ತಮ್ಮಿಷ್ಟದಂತೆ ಖರ್ಚು ಮಾಡಿದ್ದಾರೆ. ಇದಕ್ಕೆ ಸರಿಯಾದ ಲೆಖ್ಖಪತ್ರವಿಟ್ಟಿಲ್ಲ, ಈರೀತಿ ಮಾಡುವುದರಿಂದ ಪಂಚಾಯ್ತಿಗೆ ತುಂಬಲಾರದ ನಷ್ಟವಾಗುವುದಲ್ಲದೆ, ಜನಪ್ರತಿನಿಧಿಗಳಾದ ನಾವು ಜನರಿಂದ ಬೈಯಿಸಿ ಕೊಳ್ಳಬೇಕಾಗುತ್ತದೆ,ಪಂಚಾಯ್ತಿಯ ಮಾನ ಹರಾಜಾಗುತ್ತದೆ ಎಂದು ದೂರಿದ್ದಾರೆ.
ಹುಳಿಯಾರು ಗ್ರಾ.ಪಂ. ಕಾರ್ಯದರ್ಶಿ ಸದಸ್ಯರ ಗಮನಕ್ಕೆ ತರದೇ ಲಕ್ಷಾಂತರ ಹಣ ದುರುಪಯೋಗ ಮಾಡಿದ್ದಾರೆಂದು ಆರೋಪಿಸಿದ ಸದಸ್ಯರು ಇಓ ಅವರೊಂದಿಗೆ ಮಾತಿನ ಚಕಮಕಿ ನಡೆಸಿದರು.
             ಕಾರ್ಯದರ್ಶಿ ಪ್ರತಿಕ್ರಿಯೆ: ತಾವು ಯಾವುದೇ ಹಣವನ್ನು ದುರುಪಯೋಗ ಮಾಡಿಲ್ಲ, ಪಂಚಾಯ್ತಿಗೆ ಈ ಹಿಂದೆ ಎಲೆಕ್ಟ್ರಿಕಲ್ ಸಾಮಗ್ರಿ ಸೇರಿದಂತೆ ಇತರ ವಸ್ತುಗಳನ್ನು ತಂದಿದ್ದು ಅವುಗಳ ಸಾಲ ಹಾಗೆಯೆ ಉಳಿದಿತ್ತು ,ಈಗ ಪುನ: ವಸ್ತುಗಳನ್ನು ತರಬೇಕಿದ್ದು ಅದಕ್ಕಾಗಿ ಈ ಹಿಂದಿನ ಸಾಲವನ್ನು ಅಂಗಡಿಯವರಿಗೆ ಕೊಡುವ ಸಲುವಾಗಿ ಈ ಹಣ ಡ್ರಾ ಮಾಡಿರುವುದಾಗಿ,ಅದಕ್ಕೆ ಸಂಬಂಧಪಟ್ಟ ಎಲ್ಲಾ ಆಧಾರಗಳನ್ನು ತಾವು ಇಟ್ಟಿರುವುದಾಗಿ ತಿಳಿಸಿದರು.
          ಇಓ ಮಧ್ಯಸ್ಥಿಕೆ: ಕಾರ್ಯದರ್ಶಿಯವಿರುದ್ದ ಸದಸ್ಯರ ದೂರನ್ನು ಮನಗಂಡ ಇಓ ಮಧ್ಯಸ್ಥಿಕೆವಹಿಸಿ ಕಾರ್ಯದರ್ಶಿಯನ್ನು ವಿಚಾರಿಸಿ ಹಣ ಡ್ರಾ ಮಾಡಿರುವ ಬಗ್ಗೆ ದಾಖಲೆ ಪರಿಶೀಲಿಸಿ ಸದಸ್ಯರನ್ನು ಸಮಾಧಾನ ಪಡಿಸಿದರು. ಯಾವುದೇ ಸರಿಯಾದ ದಾಖಲೆಗಳಿಲ್ಲದೆ ಏಕಾಏಕಿ ಒಬ್ಬರ ಮೇಲೆ ಆರೋಪ ಮಾಡುವುದು ತಪ್ಪಾಗುತ್ತದೆ . ಮೊದಲು ಈ ಬಗ್ಗೆ ತನಿಖೆ ನಡೆಸಬೇಕಿದ್ದು ಅದಕ್ಕಾಗಿ ಶೀಘ್ರದಲ್ಲೆ ತಮ್ಮ ಕಛೇರಿಯಿಂದ ಲೆಖ್ಖಾಧಿಕಾರಿಯನ್ನು ಇಲ್ಲಿಗೆ ಕಳುಹಿಸಿ ಹಣ ದುರುಪಯೋಗವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಕರಾರುವಕ್ಕಾಗಿ ತಿಳಿದುಕೊಂಡು ಹಾಗೇನಾದರೂ ಹಣ ದುರುಪಯೋಗವಾಗಿದ್ದಲ್ಲಿ ಅದರಲ್ಲಿ ಯಾರು ಪಾಲುದಾರರಿರುತ್ತಾರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಗೂ ಅವರ ವೇತನದಲ್ಲಿ ಅದನ್ನು ಹಿಂಪಡೆಯುವುದಾಗಿ ತಿಳಿಸಿದರು.
              ಗದ್ದಲದ ಸಭೆ: ಪಂಚಾಯ್ತಿಯ ಸಭೆಯುದ್ದಕ್ಕೂ ಗದ್ದಲವೇ ಮನೆ ಮಾಡಿದ್ದು,ಒಬ್ಬರ ಮಾತು ಮತ್ತೊಬ್ಬರಿಗೆ ಕೇಳದೆ ಏನು ಹೇಳುತ್ತಾರೆ ಎಂಬುದೆ ತಿಳಿಯದಂತಾಗಿತ್ತು. ಸದಸ್ಯರು ಒಬ್ಬರಾದ ನಂತರ ಒಬ್ಬರಂತೆ ಏರು ದ್ವನಿಯಲ್ಲಿ ಮಾತನಾಡುತ್ತಾ, ಇಓ ಹಾಗೂ ಕಾರ್ಯದರ್ಶಿ ಅವರ ಮೇಲೆ ಹೌಹಾರುತ್ತಿದ್ದರು. ಸಭೆ ಕರೆದ ಉದ್ದೇಶವನ್ನು ಮರೆತು ಕಾರ್ಯದರ್ಶಿಯ ಮೇಲೆ ಕೆಂಗಣ್ಣು ಬೀರುತ್ತಿದ್ದರು. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರೂ ಮಾತ್ರ ಇದಕ್ಕೂ ತಮಗೂ ಸಂಬಂಧವೇ ಇಲ್ಲವೇನೋ ಎಂಬಂತೆ ಮೌನವಹಿಸಿದ್ದರು.

           ನೂತನ ಅಧ್ಯಕ್ಷರ ಚೊಚ್ಚಲ ಸಭೆ ಇದಾಗಿದ್ದು ಸದಸ್ಯರಾದ ಅಶೋಕ್ ಬಾಬು,ಜಹೀರ್ ಸಾಬ್,ಪುಟ್ಟರಾಜು,ಗಂಗಣ್ಣ,ಗೀತಾಬಾಬು,ಹೇಮಂತ್,ರಾಘವೇಂದ್ರ,ಶಿವಣ್ಣ,ಅನ್ಸರ್ ಆಲಿ,ವೆಂಕಟಮ್ಮ ಸೇರಿದಂತೆ ಇತರ ಸದಸ್ಯರಿದ್ದರು,









ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.