ವಿಷಯಕ್ಕೆ ಹೋಗಿ

ಹುಳಿಯಾರು : ಕಾರ್ಯದರ್ಶಿಯಿಂದ ಹಣ ದುರುಪಯೋಗ - ಸದಸ್ಯರಿಂದ ಅರೋಪ

           ಇಲ್ಲಿನ ಗ್ರಾ.ಪಂ.ಯ ಕಾರ್ಯದರ್ಶಿ ಅಡವೀಶ್ ಕುಮಾರ್ ಪಂಚಾಯ್ತಿ ಸದಸ್ಯರ ಒಪ್ಪಿಗೆಯಿಲ್ಲದೆ ಲಕ್ಷಾಂತರ ರೂ ಹಣವನ್ನು ಡ್ರಾ ಮಾಡಿಕೊಂಡು ದುರುಪಯೋಗ ಮಾಡಿದ್ದಾರೆಂದು ಗ್ರಾ.ಪಂ.ಯ ಸದಸ್ಯರು ಆರೋಪಿಸಿದ್ದಾರೆ.
                 ಪಂಚಾಯ್ತಿಯಲ್ಲಿ ಸೋಮವಾರದಂದು ನಡೆದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು , ಪಂಚಾಯ್ತಿಯ ಸದಸ್ಯರ ಗಮನಕ್ಕೆ ತಾರದೇ ಸುಮಾರು ಲಕ್ಷಾಂತರ ರೂಗಳನ್ನು ಪಂಚಾಯ್ತಿ ಖಾತೆಯಿಂದ ಡ್ರಾ ಮಾಡಿರುವುದಾಗಿ ಇಓ ಕೃಷ್ಣನಾಯಕ್ ಅವರ ಸಮಕ್ಷಮದಲ್ಲಿ ಸದ್ಯಸ್ಯರು ದೂರಿದ್ದಾರೆ. ಈ ಹಿಂದೆಯಿದ್ದ ಅಧ್ಯಕ್ಷರು ಹಾಗೂ ಹಾಲಿ ಇರುವ ಕಾರ್ಯದರ್ಶಿ ಅವರು ಸಭೆ ಮುಂದೆ ಚರ್ಚೆಗಿಡದೆ ತಮಗೆ ಮನ ಬಂದಂತೆ ಪಂಚಾಯ್ತಿ ಖಾತೆಯಿಂದ ಹಣ ತೆಗೆದಿರುವುದಾಗಿ ಹಾಗೂ ಯಾವುದೇ ರೀತಿಯ ಬಿಲ್,ಓಚರ್ ಗಳನ್ನು ತಮಗೆ ತೋರಿಸದೆ, ದಿನವಹಿ ಪುಸ್ತಕದಲ್ಲೂ ಸರಿಯಾಗಿ ನಮೋದಿಸದೇ ಇರುವುದರಿಂದ ಹಣದ ದುರುಪಯೋಗ ಮಾಡಿರಬಹುದೆಂದು ಎಂದು ಸದಸ್ಯರು ಇಓ ಅವರಿಗೆ ತಿಳಿಸಿದರು.
                       ಪಂಚಾಯ್ತಿಯ ಅಭಿವೃದ್ದಿ ಕಾರ್ಯಗಳಿಗೆ ನೆರವಾಗಲೆಂದು ಸರ್ಕಾರ ಅನುದಾನ ಬಿಡುಗಡೆ ಮಾಡಿದರೆ ಅದನ್ನು ಪಟ್ಟಣದ ಸಮಸ್ಯೆಗಳನ್ನು ಬಗೆ ಹರಿಸಲು ಬಳಸುವ ಬದಲು ತಮ್ಮಿಷ್ಟದಂತೆ ಖರ್ಚು ಮಾಡಿದ್ದಾರೆ. ಇದಕ್ಕೆ ಸರಿಯಾದ ಲೆಖ್ಖಪತ್ರವಿಟ್ಟಿಲ್ಲ, ಈರೀತಿ ಮಾಡುವುದರಿಂದ ಪಂಚಾಯ್ತಿಗೆ ತುಂಬಲಾರದ ನಷ್ಟವಾಗುವುದಲ್ಲದೆ, ಜನಪ್ರತಿನಿಧಿಗಳಾದ ನಾವು ಜನರಿಂದ ಬೈಯಿಸಿ ಕೊಳ್ಳಬೇಕಾಗುತ್ತದೆ,ಪಂಚಾಯ್ತಿಯ ಮಾನ ಹರಾಜಾಗುತ್ತದೆ ಎಂದು ದೂರಿದ್ದಾರೆ.
ಹುಳಿಯಾರು ಗ್ರಾ.ಪಂ. ಕಾರ್ಯದರ್ಶಿ ಸದಸ್ಯರ ಗಮನಕ್ಕೆ ತರದೇ ಲಕ್ಷಾಂತರ ಹಣ ದುರುಪಯೋಗ ಮಾಡಿದ್ದಾರೆಂದು ಆರೋಪಿಸಿದ ಸದಸ್ಯರು ಇಓ ಅವರೊಂದಿಗೆ ಮಾತಿನ ಚಕಮಕಿ ನಡೆಸಿದರು.
             ಕಾರ್ಯದರ್ಶಿ ಪ್ರತಿಕ್ರಿಯೆ: ತಾವು ಯಾವುದೇ ಹಣವನ್ನು ದುರುಪಯೋಗ ಮಾಡಿಲ್ಲ, ಪಂಚಾಯ್ತಿಗೆ ಈ ಹಿಂದೆ ಎಲೆಕ್ಟ್ರಿಕಲ್ ಸಾಮಗ್ರಿ ಸೇರಿದಂತೆ ಇತರ ವಸ್ತುಗಳನ್ನು ತಂದಿದ್ದು ಅವುಗಳ ಸಾಲ ಹಾಗೆಯೆ ಉಳಿದಿತ್ತು ,ಈಗ ಪುನ: ವಸ್ತುಗಳನ್ನು ತರಬೇಕಿದ್ದು ಅದಕ್ಕಾಗಿ ಈ ಹಿಂದಿನ ಸಾಲವನ್ನು ಅಂಗಡಿಯವರಿಗೆ ಕೊಡುವ ಸಲುವಾಗಿ ಈ ಹಣ ಡ್ರಾ ಮಾಡಿರುವುದಾಗಿ,ಅದಕ್ಕೆ ಸಂಬಂಧಪಟ್ಟ ಎಲ್ಲಾ ಆಧಾರಗಳನ್ನು ತಾವು ಇಟ್ಟಿರುವುದಾಗಿ ತಿಳಿಸಿದರು.
          ಇಓ ಮಧ್ಯಸ್ಥಿಕೆ: ಕಾರ್ಯದರ್ಶಿಯವಿರುದ್ದ ಸದಸ್ಯರ ದೂರನ್ನು ಮನಗಂಡ ಇಓ ಮಧ್ಯಸ್ಥಿಕೆವಹಿಸಿ ಕಾರ್ಯದರ್ಶಿಯನ್ನು ವಿಚಾರಿಸಿ ಹಣ ಡ್ರಾ ಮಾಡಿರುವ ಬಗ್ಗೆ ದಾಖಲೆ ಪರಿಶೀಲಿಸಿ ಸದಸ್ಯರನ್ನು ಸಮಾಧಾನ ಪಡಿಸಿದರು. ಯಾವುದೇ ಸರಿಯಾದ ದಾಖಲೆಗಳಿಲ್ಲದೆ ಏಕಾಏಕಿ ಒಬ್ಬರ ಮೇಲೆ ಆರೋಪ ಮಾಡುವುದು ತಪ್ಪಾಗುತ್ತದೆ . ಮೊದಲು ಈ ಬಗ್ಗೆ ತನಿಖೆ ನಡೆಸಬೇಕಿದ್ದು ಅದಕ್ಕಾಗಿ ಶೀಘ್ರದಲ್ಲೆ ತಮ್ಮ ಕಛೇರಿಯಿಂದ ಲೆಖ್ಖಾಧಿಕಾರಿಯನ್ನು ಇಲ್ಲಿಗೆ ಕಳುಹಿಸಿ ಹಣ ದುರುಪಯೋಗವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಕರಾರುವಕ್ಕಾಗಿ ತಿಳಿದುಕೊಂಡು ಹಾಗೇನಾದರೂ ಹಣ ದುರುಪಯೋಗವಾಗಿದ್ದಲ್ಲಿ ಅದರಲ್ಲಿ ಯಾರು ಪಾಲುದಾರರಿರುತ್ತಾರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಗೂ ಅವರ ವೇತನದಲ್ಲಿ ಅದನ್ನು ಹಿಂಪಡೆಯುವುದಾಗಿ ತಿಳಿಸಿದರು.
              ಗದ್ದಲದ ಸಭೆ: ಪಂಚಾಯ್ತಿಯ ಸಭೆಯುದ್ದಕ್ಕೂ ಗದ್ದಲವೇ ಮನೆ ಮಾಡಿದ್ದು,ಒಬ್ಬರ ಮಾತು ಮತ್ತೊಬ್ಬರಿಗೆ ಕೇಳದೆ ಏನು ಹೇಳುತ್ತಾರೆ ಎಂಬುದೆ ತಿಳಿಯದಂತಾಗಿತ್ತು. ಸದಸ್ಯರು ಒಬ್ಬರಾದ ನಂತರ ಒಬ್ಬರಂತೆ ಏರು ದ್ವನಿಯಲ್ಲಿ ಮಾತನಾಡುತ್ತಾ, ಇಓ ಹಾಗೂ ಕಾರ್ಯದರ್ಶಿ ಅವರ ಮೇಲೆ ಹೌಹಾರುತ್ತಿದ್ದರು. ಸಭೆ ಕರೆದ ಉದ್ದೇಶವನ್ನು ಮರೆತು ಕಾರ್ಯದರ್ಶಿಯ ಮೇಲೆ ಕೆಂಗಣ್ಣು ಬೀರುತ್ತಿದ್ದರು. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರೂ ಮಾತ್ರ ಇದಕ್ಕೂ ತಮಗೂ ಸಂಬಂಧವೇ ಇಲ್ಲವೇನೋ ಎಂಬಂತೆ ಮೌನವಹಿಸಿದ್ದರು.

           ನೂತನ ಅಧ್ಯಕ್ಷರ ಚೊಚ್ಚಲ ಸಭೆ ಇದಾಗಿದ್ದು ಸದಸ್ಯರಾದ ಅಶೋಕ್ ಬಾಬು,ಜಹೀರ್ ಸಾಬ್,ಪುಟ್ಟರಾಜು,ಗಂಗಣ್ಣ,ಗೀತಾಬಾಬು,ಹೇಮಂತ್,ರಾಘವೇಂದ್ರ,ಶಿವಣ್ಣ,ಅನ್ಸರ್ ಆಲಿ,ವೆಂಕಟಮ್ಮ ಸೇರಿದಂತೆ ಇತರ ಸದಸ್ಯರಿದ್ದರು,









ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...