ವಿಷಯಕ್ಕೆ ಹೋಗಿ

ಟೌನ್ ಬ್ಯಾಂಕ್ ಮಹಲಿಂಗಪ್ಪನವರಿಗೆ ಬೀಳ್ಕೊಡಿಗೆ

ಪಟ್ಟಣದ ಟೌನ್ ಕೋ-ಅಪರೇಟಿವ್ ಬ್ಯಾಂಕ್ ನ ವ್ಯವಸ್ಥಾಪಕರಾದ ಮಹಲಿಂಗಪ್ಪನವರ ಅವಧಿಯಲ್ಲಿ ಬ್ಯಾಂಕ್ ಅಭಿವೃದ್ಧಿಯತ್ತ ದಾಫುಗಾಲಿಟ್ಟಿದ್ದು ಲಾಭಾಂಶದಲ್ಲಿ ಮುನ್ನೆಡೆದಿದೆ ಎಂದು ಶಿರಾ ಬ್ಯಾಂಕ್ ನ ಅಧ್ಯಕ್ಷರಾದ ಎಸ್.ಆರ್.ಶಿವಕುಮಾರಸ್ವಾಮಿ ಪ್ರಶಂಶಿಸಿದರು.
ಇಲ್ಲಿನ ದಿ ಟೌನ್ ಕೋ-ಅಪರೇಟೀವ್ ಬ್ಯಾಂಕ್ ಹುಳಿಯಾರು ಶಾಖೆಯಲ್ಲಿ ಕಳೆದ 9 ವರ್ಷಗಳಿಂದ ಶಾಖಾ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಎಸ್.ಮಹಾಲಿಂಗಪ್ಪ ಅವರಿಗೆ ಬ್ಯಾಂಕ್ ವತಿಯಿಂದ ಸನ್ಮಾನಿಸಿ ಅವರು ಮಾತನಾಡಿದರು.
ಹುಳಿಯಾರಿನ ದಿ ಟೌನ್ ಕೋ-ಅಪರೇಟೀವ್ ಬ್ಯಾಂಕ್ ,ಹುಳಿಯಾರು ಶಾಖೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಮಹಲಿಂಗಪ್ಪನವರಿಗೆ ಆಡಳಿತ ಮಂಡಲಿಯಿಂದ ಸನ್ಮಾನಿಸಲಾಯಿತು. 


ಶುದ್ದ ಹಸ್ತರಾಗಿ, ನಿಸ್ವಾರ್ಥ ಸೇವೆಸಲ್ಲಿಸಿದ ಇವರು ತಮ್ಮ ಅವಧಿಯಲ್ಲಿ ಹುಳಿಯಾರು ಶಾಖೆಯಲ್ಲಿ ಹೆಚ್ಚು ವಹಿವಾಟು ನಡೆಸುವ ಮೂಲಕ ಸಾಕಷ್ಟು ಲಾಭಾಂಶ ತಂದು ಕೊಟ್ಟಿದ್ದರು. ಗ್ರಾಹಕ ಸ್ನೇಹಿಯಾಗಿದ್ದ ಇವರು ಕೊಟ್ಟ ಸಾಲವನ್ನು ಅವಧಿಯೊಳಗೆ ವಸೂಲಿ ಮಾಡುವ ಮೂಲಕ ಬ್ಯಾಂಕ್ ನ ಪ್ರಗತಿಗೆ ಸಹಕರಿಸಿದರು ಎಂದರು.
ಹುಳಿಯಾರು ಶಾಖೆ ಸಿಬ್ಬಂದಿ ಜೊತೆಯಲ್ಲಿ.

ನಲವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಇವರು ಹುಳಿಯಾರು ಶಾಖೆಯಲ್ಲಿ ಹತ್ತು ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದು ಸಂಬಳಕೋಸ್ಕರ ಕೆಲಸ ಮಾಡದೆ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡವರು ಎಂದು ಹುಳಿಯಾರು ಶಾಖಾಧ್ಯಕ್ಷ ಜಯನಾರಾಯಣ ತಿಳಿಸಿದರು.

ಸನ್ಮಾನ ಸ್ವೀಕರಿಸಿದ ಮಹಲಿಂಗಪ್ಪ ಮಾತನಾಡಿ , ಉಳಿತಾಯ ಠೇವಣಿ , ನಿಶ್ಚಿತ ಠೇವಣಿ, ಚಾಲ್ತಿ ಠೇವಣಿಯಲ್ಲಿ ಪ್ರಗತಿ ಸಾಧಿಸಿದ್ದು, ಗುರಿಮೀರಿ ಸಂಗ್ರಹಿಸಿದ್ದು, ಅವಶ್ಯ ಸಾಲ ಸೌಲಭ್ಯದ ಮೂಲಕ ಗ್ರಾಹಕರ ವ್ಯವಹಾರಕ್ಕೆ ಅನುಕೂಲ ಕಲ್ಪಿಸಿದ್ದು, ತಮ್ಮ ಅವಧಿಯಲ್ಲಿ ಉತ್ತಮ ಸೇವೆಗಳಿಸಿದ ತೃಪ್ತಿಯಿದೆ ಎಂದರು.

ಗ್ರಾಹಕರ ಪರವಾಗಿ ರೈತಸಂಘದ ಸತೀಶ್, ಏಜೆಂಟ್ ಲೋಕೇಶ್, ವರ್ತಕ ಬಾಲಾಜಿ,ಶಿಕ್ಷಕ ಬಸವಮೂರ್ತಿ,ಮಾಜಿ ಛೇರ್ ಮನ್ ವೆಂಕಟಾಛಲಪತಿ ಶೆಟ್ಟಿ ಮಾತನಾಡಿದರು.
ಈ ಸಂಧರ್ಭದಲ್ಲಿ ಬ್ಯಾಂಕ್ ನ ನಿರ್ದೇಶಕರಾದ ಕೋದಂಡರಾಮಪ್ಪ,ರಾಘವೇಂದ್ರ,ನೂತನ ವ್ಯವಸ್ಥಾಪಕ ಕುಮಾರ್ ಸ್ವಾಮಿ ಸೇರಿದಂತೆ ಹುಳಿಯಾರು ಶಾಖೆಯ ರಾಮಚಂದ್ರಪ್ಪ, ಸೌಭಾಗ್ಯಮ್ಮ,ರವಿಕುಮಾರ್, ಲಕ್ಷ್ಮಿನಾರಾಯಣ್ , ಸಿದ್ರಾಮಯ್ಯ ಹಾಜರಿದ್ದರು.


ಮಾಜಿ ಛೇರ್ಮನ್ ವೆಂಕಟಾಛಲಪತಿ ಶೆಟ್ಟಿ ಮಾತನಾಡುತ್ತಿರುವುದು.

ಶಿಕ್ಷಕ ಬಸವಮೂರ್ತಿಯವರೊಂದಿಗೆ ಮಹಲಿಂಗಪ್ಪ ಮತ್ತು ಅವರ ಮಕ್ಕಳು.

ಗ್ರಾಹಕನ್ನು ಉದ್ದೇಶಿಸಿ ಮಾತನಾಡುತ್ತಿರುವ ಮಹಲಿಂಗಪ್ಪ.


ವರ್ತಕ ಎಲ್.ಆರ್.ಬಾಲಾಜಿ ಮಾತನಾಡುತ್ತಿರುವುದು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...