ವಿಷಯಕ್ಕೆ ಹೋಗಿ

ಕೈಗೆ ಬೆಳೆ ಬರುವಷ್ಟರಲ್ಲೇ ಹೆಸರು ಗಿಡಕ್ಕೆ ಕೀಟ ಬಾಧೆ : ಕಂಗಾಲಾದ ರೈತ

ವರದಿ: ಡಿ.ಆರ್.ನರೇಂದ್ರಬಾಬು
          ಹುಳಿಯಾರು: ಪಟ್ಟಣದ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ರೈತರು ಬಿತ್ತನೆ ಮಾಡಿದ್ದ ಹೆಸರು ಸಮೃದ್ದವಾಗಿ ಬೆಳೆದು ಇನ್ನೇನು ಫಸಲು ಕೈಗೆ ಬರುವಂತ ಸಮಯದಲ್ಲಿ ಮಳೆ ಕೈಕೊಟ್ಟಿದಲ್ಲದೆ ಹೆಸರುಗಿಡಕ್ಕೆ ಕೊಂಬಿನಹುಳುಗಳು(ಸ್ಟಿಂಡಿಜ್ ಮಾಥ್) ಕಾಟ ತಗುಲಿದ್ದು ಹೊಲದಲ್ಲಿ ಅಚ್ಚಹಸಿರಾಗಿ ನಳನಳಿಸುತ್ತಿದ್ದ ಗಿಡಗಳು ಕೀಟದ ಬಾಯಿಗೆ ತುತ್ತಾಗಿ ರೈತರನ್ನು ಸಂಕಷ್ಟಕೀಡಾಗುವಂತೆ ಮಾಡಿವೆ.
ಈಗಾಗಲೇ ಹೋಬಳಿಯ ದಸೂಡಿ,ದಬ್ಬಗುಂಟೆ,ಸೋಮನಹಳ್ಳಿ ಭಾಗಗಳಲ್ಲಿ ಪೂರ್ವಮುಂಗಾರು ಹಾಗೂ ಅಶ್ವಿನಿ ಮಳೆಗೆ ಹೆಸರು ಬಿತ್ತನೆ ಮಾಡಿದ್ದರಿಂದ ಹೆಸರಿಗೆ ಯಾವುದೇ ಕೀಟಬಾದೆಯಿಲ್ಲದೆ ಹುಲುಸಾಗಿ ಬೆಳೆದು ಇಲ್ಲಿನ ರೈತರಿಗೆ ಫಸಲು ಸಿಕ್ಕಿದ್ದು , ಕಳೆದ ಎರಡು ಮುರುದಿನಗಳಿಂದ ಹೆಸರುಗಿಡಗಳನ್ನು ಕಿತ್ತು ಕಾಳನ್ನು ಬೇರ್ಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಹುಳಿಯಾರು ಹೋಬಳಿ ದೊಡ್ಡಬಿದರೆ ಗ್ರಾಮದ ಹೊಲವೊಂದರಲ್ಲಿ ಕೊಂಬಿನಹುಳು ಬಾದೆಯಿಂದ ನಲುಗಿರುವ ಹೆಸರು.  ಒಳಚಿತ್ರದಲ್ಲಿ ಹೆಸರು ಗಿಡದಲ್ಲಿ ಕಂಡುಬಂದಿರುವ ಕೊಂಬಿನಹುಳು.

ಹೋಬಳಿಯ ದೊಡ್ಡಬಿದರೆ ,ಚಿಕ್ಕಬಿದರೆ,ನಂದಿಹಳ್ಳಿ,ಗೂಬೆಹಳ್ಳಿ ಮತ್ತು ಕಂದಿಕೆರೆ ಹೋಬಳಿಯ ಕೆಲವು ಗ್ರಾಮಗಗಳಲ್ಲಿ ಮಳೆಯ ಕೊರತೆಯಿಂದಾಗಿ ಫಸಲಿನ ಇಳುವರಿ ಕಡಿಮೆಯಾಗಿ ಹೆಸರುಗಿಡಗಳೆಲ್ಲಾ ಒಣಗಿದ್ದು ಒಂದೆಡೆಯಾದರೆ, ಕೊಂಬಿನ ಹುಳುಗಳ ಕಾಟ ಕೂಡ ಹೆಚ್ಚಾಗಿ ಗಿಡದ ಎಲೆ,ಚಿಗುರನ್ನು ಭಕ್ಷಿಸುವ ಮೂಲಕ ಉಳಿದ ಗಿಡಗಳು ನಾಶವಾಗುತ್ತಿವೆ.
ಹುಳುಗಳು ಹೀಗಿವೆ : ಈ ಹುಳುಗಳು ಹಸಿರು ಬಣ್ಣದಿಂದ ಕೂಡಿದ್ದು ತಲೆಯ ಮೇಲೆ ಚಿಕ್ಕದಾದ ಕೊಂಬುನ್ನು ಹೊಂದಿದ್ದು,ಲಾರ್ವಾವಸ್ಥೆಯಿಂದ ಹೆಸರು ಗಿಡದ ಎಲೆಯನ್ನು ತಿನ್ನುತ್ತಾ ಬೆಳವಣಿಗೆಯಾಗುತ್ತವೆ. ಇವು ಹಸಿರು ಬಣ್ಣದಿಂದ ಕೂಡಿದ್ದು ಎಲೆಗಳ ಮಧ್ಯೆಯಿದ್ದರೂ ಸಹ ಅವುಗಳ ಇರುವಿಕೆಯನ್ನು ತಿಳಿಯುವುದಿಲ್ಲ, ಎಲೆಗಳ ಕೆಳಭಾಗದಲ್ಲಿ ಇರುವ ಈ ಕೀಟ ಎಲೆಯನ್ನು ಒಂದುಕಡೆಯಿಂದ ತಿನ್ನುತ್ತಾ ಸಾಗಿ ನಂತರ ಚಿಗುರು, ಹೂ, ಕಾಯಿಯನ್ನು ತಿಂದು ಗಿಡವನ್ನು ಸಂಪೂರ್ಣ ನಾಶಮಾಡುತ್ತದೆ.
ಈ ಹುಳುಗಳು ಸಾಮಾನ್ಯವಾಗಿ ಹೆಸರು, ಎಳ್ಳು, ಉದ್ದು ಬೆಳೆಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿದ್ದು ಕಾಂಡ ಸಮೇತ ಗಿಡಗಳನ್ನು ಭಕ್ಷಿಸುತ್ತಾ ಸಂಪೂರ್ಣ ಬೆಳೆಯನ್ನು ನಾಶಪಡಿಸುತ್ತವೆ. ಹುಳುಗಳನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಲ್ಯಾನೆಟ್ , ಕ್ಲೋರೋ ಪೈರಿ ಫಾಸ್ ಅಥವಾ ಕ್ವಿನಾಲ್ ಫಾಸ್ 20 ಎಂ,ಎಲ್ ಔಷಧಿಯನ್ನು 10 ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡುವುದರಿಂದ ಈ ಕೀಟಬಾಧೆಯನ್ನು ಹತೋಟಿಗೆ ತರಬಹುದಾಗಿದೆ. ಮುಂಚಿತವಾಗಿ ಔಷಧಿ ಸಿಂಪರಣೆ ಮಾಡಿದ್ದ ಪಕ್ಷದಲ್ಲಿ ಈ ಹುಳುಗಳನ್ನು ನಾಶಪಡಿಸಬಹುದಾಗಿತ್ತು. ಹುಳುಗಳು ಪ್ರೌಢಾವಸ್ಥೆ ತಲುಪಿರುವುದರಿಂದ ಸ್ಪಲ್ಪ ಮಟ್ಟಿಗೆ ಹತೋಟಿಗೆ ತರಬಹುದಷ್ಟೆ ಎನ್ನುತ್ತಾರೆ ಇಲ್ಲಿನ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು.

ಒಟ್ಟಾರೆ ಹೋಬಳಿಯಲ್ಲಿನ ಹೆಸರು ಗಿಡಕ್ಕೆ ಕೆಂಪುತೆಲೆ ಕಂಬಳಿ ಹುಳ, ಕೊಂಬಿನಹುಳ, ಕಳದಿ ರೋಗ ಸೇರಿದಂತೆ ಒಂದಲ್ಲ ಒಂದು ರೀತಿಯ ಕೀಟ ಬಾಧೆಗಳು ತಗುಲುವ ಮೂಲಕ ಇಲ್ಲಿನ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಪರಿಸ್ಥಿತಿ ಎದುರಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...