ವಿಷಯಕ್ಕೆ ಹೋಗಿ

ಕೈಗೆ ಬೆಳೆ ಬರುವಷ್ಟರಲ್ಲೇ ಹೆಸರು ಗಿಡಕ್ಕೆ ಕೀಟ ಬಾಧೆ : ಕಂಗಾಲಾದ ರೈತ

ವರದಿ: ಡಿ.ಆರ್.ನರೇಂದ್ರಬಾಬು
          ಹುಳಿಯಾರು: ಪಟ್ಟಣದ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ರೈತರು ಬಿತ್ತನೆ ಮಾಡಿದ್ದ ಹೆಸರು ಸಮೃದ್ದವಾಗಿ ಬೆಳೆದು ಇನ್ನೇನು ಫಸಲು ಕೈಗೆ ಬರುವಂತ ಸಮಯದಲ್ಲಿ ಮಳೆ ಕೈಕೊಟ್ಟಿದಲ್ಲದೆ ಹೆಸರುಗಿಡಕ್ಕೆ ಕೊಂಬಿನಹುಳುಗಳು(ಸ್ಟಿಂಡಿಜ್ ಮಾಥ್) ಕಾಟ ತಗುಲಿದ್ದು ಹೊಲದಲ್ಲಿ ಅಚ್ಚಹಸಿರಾಗಿ ನಳನಳಿಸುತ್ತಿದ್ದ ಗಿಡಗಳು ಕೀಟದ ಬಾಯಿಗೆ ತುತ್ತಾಗಿ ರೈತರನ್ನು ಸಂಕಷ್ಟಕೀಡಾಗುವಂತೆ ಮಾಡಿವೆ.
ಈಗಾಗಲೇ ಹೋಬಳಿಯ ದಸೂಡಿ,ದಬ್ಬಗುಂಟೆ,ಸೋಮನಹಳ್ಳಿ ಭಾಗಗಳಲ್ಲಿ ಪೂರ್ವಮುಂಗಾರು ಹಾಗೂ ಅಶ್ವಿನಿ ಮಳೆಗೆ ಹೆಸರು ಬಿತ್ತನೆ ಮಾಡಿದ್ದರಿಂದ ಹೆಸರಿಗೆ ಯಾವುದೇ ಕೀಟಬಾದೆಯಿಲ್ಲದೆ ಹುಲುಸಾಗಿ ಬೆಳೆದು ಇಲ್ಲಿನ ರೈತರಿಗೆ ಫಸಲು ಸಿಕ್ಕಿದ್ದು , ಕಳೆದ ಎರಡು ಮುರುದಿನಗಳಿಂದ ಹೆಸರುಗಿಡಗಳನ್ನು ಕಿತ್ತು ಕಾಳನ್ನು ಬೇರ್ಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಹುಳಿಯಾರು ಹೋಬಳಿ ದೊಡ್ಡಬಿದರೆ ಗ್ರಾಮದ ಹೊಲವೊಂದರಲ್ಲಿ ಕೊಂಬಿನಹುಳು ಬಾದೆಯಿಂದ ನಲುಗಿರುವ ಹೆಸರು.  ಒಳಚಿತ್ರದಲ್ಲಿ ಹೆಸರು ಗಿಡದಲ್ಲಿ ಕಂಡುಬಂದಿರುವ ಕೊಂಬಿನಹುಳು.

ಹೋಬಳಿಯ ದೊಡ್ಡಬಿದರೆ ,ಚಿಕ್ಕಬಿದರೆ,ನಂದಿಹಳ್ಳಿ,ಗೂಬೆಹಳ್ಳಿ ಮತ್ತು ಕಂದಿಕೆರೆ ಹೋಬಳಿಯ ಕೆಲವು ಗ್ರಾಮಗಗಳಲ್ಲಿ ಮಳೆಯ ಕೊರತೆಯಿಂದಾಗಿ ಫಸಲಿನ ಇಳುವರಿ ಕಡಿಮೆಯಾಗಿ ಹೆಸರುಗಿಡಗಳೆಲ್ಲಾ ಒಣಗಿದ್ದು ಒಂದೆಡೆಯಾದರೆ, ಕೊಂಬಿನ ಹುಳುಗಳ ಕಾಟ ಕೂಡ ಹೆಚ್ಚಾಗಿ ಗಿಡದ ಎಲೆ,ಚಿಗುರನ್ನು ಭಕ್ಷಿಸುವ ಮೂಲಕ ಉಳಿದ ಗಿಡಗಳು ನಾಶವಾಗುತ್ತಿವೆ.
ಹುಳುಗಳು ಹೀಗಿವೆ : ಈ ಹುಳುಗಳು ಹಸಿರು ಬಣ್ಣದಿಂದ ಕೂಡಿದ್ದು ತಲೆಯ ಮೇಲೆ ಚಿಕ್ಕದಾದ ಕೊಂಬುನ್ನು ಹೊಂದಿದ್ದು,ಲಾರ್ವಾವಸ್ಥೆಯಿಂದ ಹೆಸರು ಗಿಡದ ಎಲೆಯನ್ನು ತಿನ್ನುತ್ತಾ ಬೆಳವಣಿಗೆಯಾಗುತ್ತವೆ. ಇವು ಹಸಿರು ಬಣ್ಣದಿಂದ ಕೂಡಿದ್ದು ಎಲೆಗಳ ಮಧ್ಯೆಯಿದ್ದರೂ ಸಹ ಅವುಗಳ ಇರುವಿಕೆಯನ್ನು ತಿಳಿಯುವುದಿಲ್ಲ, ಎಲೆಗಳ ಕೆಳಭಾಗದಲ್ಲಿ ಇರುವ ಈ ಕೀಟ ಎಲೆಯನ್ನು ಒಂದುಕಡೆಯಿಂದ ತಿನ್ನುತ್ತಾ ಸಾಗಿ ನಂತರ ಚಿಗುರು, ಹೂ, ಕಾಯಿಯನ್ನು ತಿಂದು ಗಿಡವನ್ನು ಸಂಪೂರ್ಣ ನಾಶಮಾಡುತ್ತದೆ.
ಈ ಹುಳುಗಳು ಸಾಮಾನ್ಯವಾಗಿ ಹೆಸರು, ಎಳ್ಳು, ಉದ್ದು ಬೆಳೆಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿದ್ದು ಕಾಂಡ ಸಮೇತ ಗಿಡಗಳನ್ನು ಭಕ್ಷಿಸುತ್ತಾ ಸಂಪೂರ್ಣ ಬೆಳೆಯನ್ನು ನಾಶಪಡಿಸುತ್ತವೆ. ಹುಳುಗಳನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಲ್ಯಾನೆಟ್ , ಕ್ಲೋರೋ ಪೈರಿ ಫಾಸ್ ಅಥವಾ ಕ್ವಿನಾಲ್ ಫಾಸ್ 20 ಎಂ,ಎಲ್ ಔಷಧಿಯನ್ನು 10 ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡುವುದರಿಂದ ಈ ಕೀಟಬಾಧೆಯನ್ನು ಹತೋಟಿಗೆ ತರಬಹುದಾಗಿದೆ. ಮುಂಚಿತವಾಗಿ ಔಷಧಿ ಸಿಂಪರಣೆ ಮಾಡಿದ್ದ ಪಕ್ಷದಲ್ಲಿ ಈ ಹುಳುಗಳನ್ನು ನಾಶಪಡಿಸಬಹುದಾಗಿತ್ತು. ಹುಳುಗಳು ಪ್ರೌಢಾವಸ್ಥೆ ತಲುಪಿರುವುದರಿಂದ ಸ್ಪಲ್ಪ ಮಟ್ಟಿಗೆ ಹತೋಟಿಗೆ ತರಬಹುದಷ್ಟೆ ಎನ್ನುತ್ತಾರೆ ಇಲ್ಲಿನ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು.

ಒಟ್ಟಾರೆ ಹೋಬಳಿಯಲ್ಲಿನ ಹೆಸರು ಗಿಡಕ್ಕೆ ಕೆಂಪುತೆಲೆ ಕಂಬಳಿ ಹುಳ, ಕೊಂಬಿನಹುಳ, ಕಳದಿ ರೋಗ ಸೇರಿದಂತೆ ಒಂದಲ್ಲ ಒಂದು ರೀತಿಯ ಕೀಟ ಬಾಧೆಗಳು ತಗುಲುವ ಮೂಲಕ ಇಲ್ಲಿನ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಪರಿಸ್ಥಿತಿ ಎದುರಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...