ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾ.ಪಂ. : ಪ.ಪಂ. ಆಗಿ ಮೇಲ್ದರ್ಜೆಗೇರಲಿದೆಯೇ?

ವರದಿ : ಡಿ.ಆರ್.ನರೇಂದ್ರಬಾಬು
ಹುಳಿಯಾರು: ಬರೋಬರಿ 33 ಸದಸ್ಯರನ್ನೊಳಗೊಂಡು ಜಿಲ್ಲೆಯಲ್ಲಿಯಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಅತಿ ದೊಡ್ಡ ಪಂಚಾಯ್ತಿ ಎಂದೇ ಖ್ಯಾತಿ ಹೊಂದಿರುವ ಹುಳಿಯಾರಿನ ಗ್ರಾ.ಪಂ. , ಶೀಘ್ರ ಪಟ್ಟಣಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತ ಪ್ರಸ್ತಾಪನೆ ಸರ್ಕಾರದ ಮುಂದೆ ಮತ್ತೆ ಬಂದಿದೆ.

ಹುಳಿಯಾರು ಗ್ರಾ.ಪಂ. ಕಾರ್ಯಾಲಯ.

ಹುಳಿಯಾರು ಗ್ರಾ.ಪಂ.ಯನ್ನು ಪಟ್ಟಣಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಬಂದಿರುವ ಸುತ್ತೋಲೆ.

ಅರ್ಹತೆ: ಪುರಸಭೆಯ ಅಧಿನಿಯಮದ ಪ್ರಕಾರ ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಸಲು ಗ್ರಾ.ಪಂ. ಜನಸಂಖ್ಯೆ 10,000ಕ್ಕೆ ಕಡಿಮೆಯಿಲ್ಲದಂತೆ ಹಾಗೂ 20,000ಕ್ಕೆ ಹೆಚ್ಚಿಲ್ಲದಂತೆ ಇರಬೇಕು. ಜನಸಾಂದ್ರತೆಯು ಆ ಪ್ರದೇಶದ ಒಂದು ಚ.ಕಿ.ಮೀ ವೀಸ್ತೀರ್ಣಕ್ಕೆ 400ಕ್ಕಿಂತ ಕಡಿಮೆ ಇಲ್ಲದಿರುವುದು ಹಾಗೂ ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗಾವಕಾಶಗಳ ಶೇಕಡವಾರು ಪ್ರಮಾಣ ಒಟ್ಟು ಉದ್ಯೋಗದ ಪ್ರಮಾಣದ ಶೇ.50ಕ್ಕಿಂತ ಕಡಿಮೆ ಇಲ್ಲದಂತೆ ಇರಬೇಕು. ಈ ಹಿನ್ನೆಲೆಯಲ್ಲಿ ಹುಳಿಯಾರು ಗ್ರಾ.ಪಂ.ವ್ಯಾಪ್ತಿಯಲ್ಲಿ 2011ರ ಜನಗಣತಿ ಅನ್ವಯ 14,304 ಜನಸಂಖ್ಯೆ ಹೊಂದಿ ಈ ಸಾಲಿನಲ್ಲಿ ಅಂದಾಜು ಹದಿನೆಂಟು ಸಾವಿರ ಜನ ಸಂಖ್ಯೆ ಹೊಂದಿರುವ ಹುಳಿಯಾರು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ.
ಪ್ರಸ್ತಾವನೆ : ಜಿಲ್ಲೆಯ ಹುಳಿಯಾರು ಹಾಗೂ ವೈ.ಎನ್.ಹೊಸಕೋಟೆ ಗ್ರಾಮಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಗೇರಿಸುವ ಕುರಿತಂತೆ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಈ ನಿಟ್ಟಿನಲ್ಲಿ ಕೆಲವು ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಪೌರಾಡಳಿತ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮೂಲಕ ಇಲ್ಲಿನ ಪಂಚಾಯ್ತಿಗೆ ಹತ್ತು ದಿನಗಳ ಹಿಂದಷ್ಟೆ ಮತ್ತೊಂದು ಸುತ್ತೋಲೆ ಬಂದಿರುರುವುದು ಇನ್ನಷ್ಟು ಪುಷ್ಠಿಕರಿಸಿದಂತಾಗಿದೆ.
ದಾಖಲೆಗಳು: 2011ರ ಜನಸಂಖ್ಯೆ ವಿವರದ ದೃಢೀಕರಣ ಪತ್ರ, ಪಂಚಾಯ್ತಿ ಠರಾವು,2014 ಕ್ಕೆ ಅನುಗುಣವಾಗಿ ತಯಾರಿಸಿದ ನಕ್ಷೆ, ಅನುಬಂಧ "ಎ" ಮತ್ತು ಅನುಬಂಧ "ಬಿ" ಯ ಮಾಹಿತಿ, ಗ್ರಾಮಗಳ ಗಡಿಯ ವಿವರಗಳು, 2012-13 ಹಾಗೂ 2013-14 ರ ಅಯ-ವ್ಯಯ ಪ್ರತಿ, ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯವರ ಪ್ರಸ್ಥಾನವನೆ ಒಳಗೊಂಡ ದಾಖಲೆಗಳನ್ನು ಐದು ಪ್ರತಿಗಳಲ್ಲಿ ಸಿದ್ದಪಡಿಸಿ ಒದಗಿಸಬೇಕಾಗಿ ಕೋರಿದ್ದು ಅವುಗಳ ಜೊತೆಗೆ ಹುಳಿಯಾರು ಅಮಾನಿಕೆರೆ, ಕೇಶವಾಪುರ,ವಳಗೆರೆಹಳ್ಳಿ ಗ್ರಾಮಗಳ ನಕ್ಷೆಯನ್ನು ಒಗ್ಗೂಡಿಸಿ ಒಂದೇ ನಕ್ಷೆಯನ್ನಾಗಿ ಮಾಡಿ ಕಳುಹಿಸಲಾಗಿದ್ದು ,ಮುಂದಿನ ಬೆಳವಣಿಗೆಗೆ ಕಾದುನೋಡಬೇಕಾಗಿದೆ ಎನ್ನುತಾರೆ ಪ್ರಭಾರ ಪಿಡಿಓ ಅಡವೀಶ್ ಕುಮಾರ್.
ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 3, 9ಮತ್ತು 349ರ ಪ್ರಕಾರ ಅನುಸರಿಸಬೇಕಾದ ಮಾನದಂಡಗಳ ಪ್ರಕಾರ ಎಲ್ಲಾ ಲಕ್ಷಣಗಳನ್ನು ಹೊಂದಿರುವ

ಹುಳಿಯಾರು ಗ್ರಾ.ಪಂ. ಪಟ್ಟಣ ಪಂಚಾಯ್ತಿಯಾಗ ಬೇಕಾಗಿರುವುದಷ್ಟೆ ಬಾಕಿ ಉಳಿದಿದೆ.ಇಲ್ಲಿನ ಸಾರ್ವಜನಿಕರ ಆಶಯವು ಇದೇ ಆಗಿದ್ದು ಜನಪ್ರತಿನಿಧಿಗಳು ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ತಂದು ಶೀಘ್ರ ಅನುಮೊದನೆ ದೊರೆತಲ್ಲಿ ಹುಳಿಯಾರು ಪಟ್ಟಣ ಮತ್ತಷ್ಟು ಅಭಿವೃದ್ದಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.