ವಿಷಯಕ್ಕೆ ಹೋಗಿ

ಹುಳಿಯಾರು : ಕ್ವಿಂಟಾಲ್ ಕೊಬ್ಬರಿಗೆ ರೂ. 15,800

          ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಕೊಬ್ಬರಿ 15 ಸಾವಿರದ ಗಡಿ ದಾಟುವ ಮೂಲಕ ಸರ್ವಕಾಲಿಕ ದಾಖಲೆ ಬೆಲೆ ನಿರ್ಮಾಣವಾಗಿರುವುದಲ್ಲದೆ ಈ ಹಿಂದೆ ಯಾವತ್ತೂ ಇಂತಹ ಬೆಲೆ ಬಾರದೆಯಿದ್ದು, ಗುರುವಾರ ನಡೆದ ಹರಾಜಿನಲ್ಲಿ 15,800 ರೂ ಗೆ ಮಾರಾಟವಾಗುವ ಮೂಲಕ ರಾಜ್ಯದಲ್ಲೇ ಇತಿಹಾಸ ಸೃಷ್ಠಿಸಿದೆ.
ಹುಳಿಯಾರಿನ ಎಪಿಎಂಸಿಯಲ್ಲಿ ಗುರುವಾರ ಸಂಜೆ ಹರಾಜಿನಲ್ಲಿ ಬೆಲೆ ನಮೂದಾಗಿರುವುದು.
           ಕಳೆದ ಕೆಲ ವರ್ಷಗಳಿಂದ ನೆಲಕಚ್ಚಿದ್ದ ಕೊಬ್ಬರಿಗೆ ಇದೀಗ ಶುಕ್ರದೆಸೆ ಪ್ರಾರಂಭವಾಗಿ ಹದಿನೈದು ಸಾವಿರದ ಗಡಿ ದಾಟಿದೆ . ದಿನನಿತ್ಯ ಬಳಕೆಯ ವಸ್ತುಗಳು ಸೇರಿದಂತೆ ಇನ್ನಿತರ ಕೃಷಿ ಉತ್ಪನ್ನಗಳ ಬೆಲೆ ಹೆಚ್ಚುತ್ತಿದ್ದರೂ ಸಹ ಕೊಬ್ಬರಿ ಬೆಲೆ ಮಾತ್ರ ಕೆಳಮಟ್ಟದಲ್ಲಿದ್ದದ್ದು ತೆಂಗು ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿತ್ತು. ಆದರೆ ಕಳೆದ ಕೆಲ ತಿಂಗಳಿಂದ ಕೊಬ್ಬರಿಗೆ ಉತ್ತಮ ಬೆಲೆಗೆ ಮಾರಾಟವಾಗುತ್ತಿದ್ದು ತೆಂಗು ಬೆಳೆಗಾರರಿಗೆ ಜೀವಬಂದಂತಾಗಿದೆ.
        ಕೊಬ್ಬರಿ ಬೆಲೆ ಏರಿಕೆಗೆ ಕಾರಣ : ಉತ್ತಮ ಮಳೆಯಿಲ್ಲದೆ ಬರಗಾಲದ ಛಾಯೆಯಿಂದ ತೆಂಗಿಗೆ ನುಸಿರೋಗ, ಕಾಂಡದಲ್ಲಿ ರಸಸೋರುವಿಕೆ ಸೇರಿದಂತೆ ಇನ್ನಿತರ ಅನೇಕ ರೋಗಗಳು ಬಂದಿರುವುದಲ್ಲದೆ ಭೂಮಿಯಲ್ಲಿ ತೇವಾಂಶವಿಲ್ಲದೆ ತೆಂಗಿನ ಗರಿಗಳೆಲ್ಲ ಧರೆಗೆ ಮುಖಮಾಡಿದ್ದು, ಮರದ ಸುಳಿಯೆಲ್ಲಾ ಒಣಗಿ ಹೋಗಿದೆ. ಅಂತರ್ಜಲ ಕುಸಿತದಿಂದಾಗಿ ಬೋರ್ ವೆಲ್ ಗಳು ಸಹ ಬತ್ತಿ ಹೋಗಿದ್ದು, ಬೆಳೆ ಇಲ್ಲದಂತಾಗಿದೆ.. ತೆಂಗಿನ ಕಾಯಿಯ ಇಳುವರಿ ಕುಸಿದಿರುವ ಪರಿಣಾಮ ಕೊಬ್ಬರಿಯೂ ಸಹ ಕಡಿಮೆಯಾಗಿದೆ. ಈಗ ಕೊಬ್ಬರಿಗೆ ಉತ್ತಮ ಬೆಲೆಯಿದ್ದರೂ ಸಹ ಮಾರಲು ತೆಂಗು ಬೆಳೆಗಾರರಲ್ಲಿ ಕೊಬ್ಬರಿ ದಾಸ್ತಾನಿಲ್ಲದಂತಾಗಿದೆ. ಹೊರ ರಾಜ್ಯಗಳಲ್ಲಿ ಉಂಡೆ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆಗೆ ಹೆಚ್ಚಿನ ಬೇಡಿಕೆಯಿರುವುದರಿಂದ ಇದೀಗ ಕೊಬ್ಬರಿ ಬೆಲೆ ಏರಿಕೆಯಾಗುತ್ತಿದೆ.
       ಕೊಬ್ಬರಿ ಅವಕ ಕಡಿಮೆ : ಬೆಲೆ ಏರಿದ್ದರೂ ಸಹ ತೆಂಗು ಬೆಳೆಗಾರರಲ್ಲಿ ಕೊಬ್ಬರಿಯ ದಾಸ್ತಾನಿಲ್ಲದಾಗಿದ್ದು ಮಾರುಕಟ್ಟೆಗೆ ಬರುತ್ತಿರುವ ಕೊಬ್ಬರಿ ಪ್ರಮಾಣವು ಕ್ಷೀಣಿಸಿದೆ. ಪ್ರತಿ ಪಂಚಮಿ ಹಬ್ಬದಲ್ಲು ಕೊಬ್ಬರಿಗೆ ಬಹು ಬೇಡಿಕೆಯಿದ್ದು ಈಗಿನ ದರ ಏರಿಕೆ ಈ ಕಾರಣದಿಂದಾಗಿರಬಹುದು ಎನ್ನಲಾಗಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಆವಕವಾಗಿದ್ದ ಪ್ರಮಾಣಕ್ಕಿಂತ ಅರ್ಧದಷ್ಟು ಇಳಿಕೆ ಕಂಡಿದ್ದು, ರೈತರು ಬೆಂಬಲ ಬೆಲೆಯಲ್ಲಿ ಕೊಬ್ಬರಿ ಮಾರಾಟ ಮಾಡಲು ನಫೆಡ್ ಆಶ್ರಯ ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿತ್ತು.

         ಒಟ್ಟಾರೆ ಬೆಲೆ ಏರಿಕೆಯಾಗಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದರೂ ಸಹ ಅಟ್ಟದಲ್ಲಿ ಕೊಬ್ಬರಿಯಿಲ್ಲದಿರುವುದು ರೈತರನ್ನು ಆತಂಕಕ್ಕೀಡು ಮಾಡಿದೆ.
ನಮ್ಮ ಹತ್ರ ಮಾಲು ಇದ್ದಾಗ ಬೆಲೆಯಿರ್ಲಿಲ್ಲ , ಬೆಲೆ ಬಂದಾಗ ನಮ್ಮತ್ರ ಮಾಲೇ ಇಲ್ಲ. ಒಟ್ಟಾರೆ ರೈತರ ಸಂಕಷ್ಟ ಯಾವತ್ತೂ ಬಗೆಹರಿಯಲ್ಲ ----- ದೊಡ್ಡಬಿದರೆ ರಮೇಶ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.