ವಿಷಯಕ್ಕೆ ಹೋಗಿ

ಹುಳಿಯಾರು : ಕ್ವಿಂಟಾಲ್ ಕೊಬ್ಬರಿಗೆ ರೂ. 15,800

          ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಕೊಬ್ಬರಿ 15 ಸಾವಿರದ ಗಡಿ ದಾಟುವ ಮೂಲಕ ಸರ್ವಕಾಲಿಕ ದಾಖಲೆ ಬೆಲೆ ನಿರ್ಮಾಣವಾಗಿರುವುದಲ್ಲದೆ ಈ ಹಿಂದೆ ಯಾವತ್ತೂ ಇಂತಹ ಬೆಲೆ ಬಾರದೆಯಿದ್ದು, ಗುರುವಾರ ನಡೆದ ಹರಾಜಿನಲ್ಲಿ 15,800 ರೂ ಗೆ ಮಾರಾಟವಾಗುವ ಮೂಲಕ ರಾಜ್ಯದಲ್ಲೇ ಇತಿಹಾಸ ಸೃಷ್ಠಿಸಿದೆ.
ಹುಳಿಯಾರಿನ ಎಪಿಎಂಸಿಯಲ್ಲಿ ಗುರುವಾರ ಸಂಜೆ ಹರಾಜಿನಲ್ಲಿ ಬೆಲೆ ನಮೂದಾಗಿರುವುದು.
           ಕಳೆದ ಕೆಲ ವರ್ಷಗಳಿಂದ ನೆಲಕಚ್ಚಿದ್ದ ಕೊಬ್ಬರಿಗೆ ಇದೀಗ ಶುಕ್ರದೆಸೆ ಪ್ರಾರಂಭವಾಗಿ ಹದಿನೈದು ಸಾವಿರದ ಗಡಿ ದಾಟಿದೆ . ದಿನನಿತ್ಯ ಬಳಕೆಯ ವಸ್ತುಗಳು ಸೇರಿದಂತೆ ಇನ್ನಿತರ ಕೃಷಿ ಉತ್ಪನ್ನಗಳ ಬೆಲೆ ಹೆಚ್ಚುತ್ತಿದ್ದರೂ ಸಹ ಕೊಬ್ಬರಿ ಬೆಲೆ ಮಾತ್ರ ಕೆಳಮಟ್ಟದಲ್ಲಿದ್ದದ್ದು ತೆಂಗು ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿತ್ತು. ಆದರೆ ಕಳೆದ ಕೆಲ ತಿಂಗಳಿಂದ ಕೊಬ್ಬರಿಗೆ ಉತ್ತಮ ಬೆಲೆಗೆ ಮಾರಾಟವಾಗುತ್ತಿದ್ದು ತೆಂಗು ಬೆಳೆಗಾರರಿಗೆ ಜೀವಬಂದಂತಾಗಿದೆ.
        ಕೊಬ್ಬರಿ ಬೆಲೆ ಏರಿಕೆಗೆ ಕಾರಣ : ಉತ್ತಮ ಮಳೆಯಿಲ್ಲದೆ ಬರಗಾಲದ ಛಾಯೆಯಿಂದ ತೆಂಗಿಗೆ ನುಸಿರೋಗ, ಕಾಂಡದಲ್ಲಿ ರಸಸೋರುವಿಕೆ ಸೇರಿದಂತೆ ಇನ್ನಿತರ ಅನೇಕ ರೋಗಗಳು ಬಂದಿರುವುದಲ್ಲದೆ ಭೂಮಿಯಲ್ಲಿ ತೇವಾಂಶವಿಲ್ಲದೆ ತೆಂಗಿನ ಗರಿಗಳೆಲ್ಲ ಧರೆಗೆ ಮುಖಮಾಡಿದ್ದು, ಮರದ ಸುಳಿಯೆಲ್ಲಾ ಒಣಗಿ ಹೋಗಿದೆ. ಅಂತರ್ಜಲ ಕುಸಿತದಿಂದಾಗಿ ಬೋರ್ ವೆಲ್ ಗಳು ಸಹ ಬತ್ತಿ ಹೋಗಿದ್ದು, ಬೆಳೆ ಇಲ್ಲದಂತಾಗಿದೆ.. ತೆಂಗಿನ ಕಾಯಿಯ ಇಳುವರಿ ಕುಸಿದಿರುವ ಪರಿಣಾಮ ಕೊಬ್ಬರಿಯೂ ಸಹ ಕಡಿಮೆಯಾಗಿದೆ. ಈಗ ಕೊಬ್ಬರಿಗೆ ಉತ್ತಮ ಬೆಲೆಯಿದ್ದರೂ ಸಹ ಮಾರಲು ತೆಂಗು ಬೆಳೆಗಾರರಲ್ಲಿ ಕೊಬ್ಬರಿ ದಾಸ್ತಾನಿಲ್ಲದಂತಾಗಿದೆ. ಹೊರ ರಾಜ್ಯಗಳಲ್ಲಿ ಉಂಡೆ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆಗೆ ಹೆಚ್ಚಿನ ಬೇಡಿಕೆಯಿರುವುದರಿಂದ ಇದೀಗ ಕೊಬ್ಬರಿ ಬೆಲೆ ಏರಿಕೆಯಾಗುತ್ತಿದೆ.
       ಕೊಬ್ಬರಿ ಅವಕ ಕಡಿಮೆ : ಬೆಲೆ ಏರಿದ್ದರೂ ಸಹ ತೆಂಗು ಬೆಳೆಗಾರರಲ್ಲಿ ಕೊಬ್ಬರಿಯ ದಾಸ್ತಾನಿಲ್ಲದಾಗಿದ್ದು ಮಾರುಕಟ್ಟೆಗೆ ಬರುತ್ತಿರುವ ಕೊಬ್ಬರಿ ಪ್ರಮಾಣವು ಕ್ಷೀಣಿಸಿದೆ. ಪ್ರತಿ ಪಂಚಮಿ ಹಬ್ಬದಲ್ಲು ಕೊಬ್ಬರಿಗೆ ಬಹು ಬೇಡಿಕೆಯಿದ್ದು ಈಗಿನ ದರ ಏರಿಕೆ ಈ ಕಾರಣದಿಂದಾಗಿರಬಹುದು ಎನ್ನಲಾಗಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಆವಕವಾಗಿದ್ದ ಪ್ರಮಾಣಕ್ಕಿಂತ ಅರ್ಧದಷ್ಟು ಇಳಿಕೆ ಕಂಡಿದ್ದು, ರೈತರು ಬೆಂಬಲ ಬೆಲೆಯಲ್ಲಿ ಕೊಬ್ಬರಿ ಮಾರಾಟ ಮಾಡಲು ನಫೆಡ್ ಆಶ್ರಯ ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿತ್ತು.

         ಒಟ್ಟಾರೆ ಬೆಲೆ ಏರಿಕೆಯಾಗಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದರೂ ಸಹ ಅಟ್ಟದಲ್ಲಿ ಕೊಬ್ಬರಿಯಿಲ್ಲದಿರುವುದು ರೈತರನ್ನು ಆತಂಕಕ್ಕೀಡು ಮಾಡಿದೆ.
ನಮ್ಮ ಹತ್ರ ಮಾಲು ಇದ್ದಾಗ ಬೆಲೆಯಿರ್ಲಿಲ್ಲ , ಬೆಲೆ ಬಂದಾಗ ನಮ್ಮತ್ರ ಮಾಲೇ ಇಲ್ಲ. ಒಟ್ಟಾರೆ ರೈತರ ಸಂಕಷ್ಟ ಯಾವತ್ತೂ ಬಗೆಹರಿಯಲ್ಲ ----- ದೊಡ್ಡಬಿದರೆ ರಮೇಶ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...