ವಿಷಯಕ್ಕೆ ಹೋಗಿ

ನಂದಿನಿಹಾಲಿನ ಜಾಹಿರಾತಿಗೆ ಕನ್ನಡಪ್ರಭ ವರದಿ ಬಳಕೆ

          ಹುಳಿಯಾರು: ತಮ್ಮ ಉತ್ಪನ್ನದ ಪ್ರಚಾರಕ್ಕೆ ಲಕ್ಷಾಂತರ ರೂಪಾಯಿ ಹಣವನ್ನು ಪತ್ರಿಕಾ ಜಾಹಿರಾತಿಗೋಸ್ಕರವೇ ಖರ್ಚು ಮಾಡುವ ಕಂಪನಿಗಳ ಮಧ್ಯೆ ರಾಜ್ಯದ ಕೆ.ಎಂ.ಎಫ್ ಪತ್ರಿಕಾ ವರದಿಯನ್ನೇ ಜಾಹಿರಾತಾಗಿ ಬಳಸಿಕೊಳ್ಳುವ ಮೂಲಕ ಜಾಣ ನಡೆಯಿಟ್ಟಿದ್ದು, ಇದು ಕನ್ನಡಪ್ರಭ ಪತ್ರಿಕೆಯ ವಸ್ತುನಿಷ್ಠ ವರದಿಗೆ ಸಿಕ್ಕ ಗೌರವವೆನ್ನಬಹುದಾಗಿದೆ.
ಹುಳಿಯಾರಿನ ನಂದಿನಿಹಾಲಿನ ಬೂತ್ ಒಂದರಲ್ಲಿ ತುಮಕೂರು ಸಹಕಾರಿ ಹಾಲು ಒಕ್ಕೂಟದಿಂದ ಕಳುಹಿಸಿರುವ ಜಾಹಿರಾತು ಫಲಕ.
                 ರಾಸಾಯನಿಕ ಮಿಶ್ರಿತ ಖಾಸಗಿ ಬ್ರಾಂಡ್ ನ ಹಾಲಿನ ದಂಧೆಯ ಬಗ್ಗೆ ವಿಶೇಷ ಕಾಳಜಿಹೊಂದಿ ಕಳೆದ 10 ಡಿಸೆಂಬರ್ 2013 ರಿಂದ ಸತತ ನಾಲ್ಕು ದಿನಗಳ ಕಾಲ ವಿಶೇಷ ವರದಿಯನ್ನು ಕನ್ನಡಪ್ರಭ ಪ್ರಕಟಿಸಿತ್ತು.
         ವರದಿಯಲ್ಲಿ ಏನಿತ್ತು: ರಾಜ್ಯದಲ್ಲಿ ಮಾರುಕಟ್ಟೆಯಲ್ಲಿರುವ 50ಕ್ಕೂ ಹೆಚ್ಚು ಬ್ರ್ಯಾಂಡೆಡ್ ಹಾಗೂ ಕಲಬೆರಿಕೆ ಹಾಲಿನ ಗುಣಮಟ್ಟದ ಬಗ್ಗೆ ಸವಿವರ ವರದಿ ಮಾಡಿತ್ತು. ಕೆಲವೊಂದು ಕಂಪನಿಯ ಹಾಲಿನ ಮಾದರಿ ಗುಣಮಟ್ಟ ಪರೀಕ್ಷೆ ಮಾಡುವ ಮೂಲಕ ಕುಡಿಯುವ ಹಾಲಿನಲ್ಲಿ ಯೂರಿಯಾ, ಡಿಟರ್ಜಂಟ್, ಉಪ್ಪು, ಸಕ್ಕರೆ, ಹೈಡ್ರೋಜನ್ ಪೆರಾಕ್ಸೈಡ್, ವಾಶಿಂಗ್ ಸೋಡಾ ಅಸಿಡ್ ಹೈಪೋ ಕ್ಲೋರೈಡ್ ಹಾಗೂ ಕಾಸ್ಟಿಕ್ ಸೋಡಾ ಮಿಶ್ರಣ ಮಾಡುವುದನ್ನು ಪತ್ತೆಹಚ್ಚಿ ಬಯಲು ಮಾಡಿತ್ತು. ಅಲ್ಲದೆ ಕಲಬೆರಿಕೆ ಏಕಾಗಿ ಹಾಗೂ ಹೇಗೆ ಮಾಡಲಾಗುತ್ತದೆ ಎಂಬ ಬಗ್ಗೆಯಲ್ಲದೆ ಯಾವ ಯಾವ ಮಾದರಿಯ ಹಾಲು ಸರಬರಾಜು ಮಾಡುವ ಸಂಸ್ಥೆಗಳು ಕಳಪೆ ಹಾಲು ಪೂರೈಸುತ್ತಿದೆ ಎಂದು ಪಟ್ಟಿಮಾಡಿತ್ತು.
              ರಾಜ್ಯದ ಸಹಕಾರ ಸಂಘದ ಕೆಎಂಎಫ್ ನ ನಂದಿನಿ ಹಾಲಿಗೂ ಇನ್ನಿತರ ಕಂಪನಿಗಳ ಹಾಲಿಗೂ ಗುಣಮಟ್ಟದ ವ್ಯತ್ಯಾಸ ಹೇಗಿದೆ ಎಂಬ ಚಿತ್ರಣ ನೀಡಿದಲ್ಲದೆ , ನಂದಿನಿ ಹಾಲಿಗೆ ಕಲಬೆರಕೆಯಾಗದಂತೆ ಹಾಲು ಉತ್ಪಾದಕರ ಸಹಕಾರ ಸಂಘ ತೆಗೆದುಕೊಂಡಿರುವ ಕ್ರಮದ ಬಗ್ಗೆ ವಿವರಿಸಿತ್ತು. ಈ ಮೂಲಕ ರಾಸಾಯನಿಕ ಮಿಶ್ರಿತ ಹಾಲಿನ ಬಗ್ಗೆ ಜನ ಜಾಗೃತಿ ಉಂಟುಮಾಡಿ ತೀವ್ರ ಸಂಚಲ ಉಂಟುಮಾಡಿತ್ತು.
ಜಾಹಿರಾತಾಗಿ ಬಳಕೆ: ನಿಸರ್ಗದತ್ತವಾದ ಹಾಲಿಗೆ ಹಲವು ಖಾಸಗಿ ಸಂಸ್ಥೆಯವರು ಮಾರಕ ರಾಸಾಯನಿಕ ವಸ್ತುಗಳಿಂದ ಕಲಬೆರಕೆ ಮಾಡಿ ರಾಜ್ಯಾದ್ಯಂತ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಪ್ರತಿಷ್ಠಿತ ದಿನಪತ್ರಿಕೆಯಾಗಿರುವ ಕನ್ನಡಪ್ರಭ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ವರದಿಯ ಮುಖಪುಟಗಳನ್ನೇ ಎಥಾವತ್ತಾಗಿ ಜಾಹಿರಾತಾಗಿ ತುಮಕೂರು ಸಹಕಾರಿ ಹಾಲು ಒಕ್ಕೂಟ(ತುಮುಲ್) ಬಳಸಿಕೊಂಡಿದೆ.
               ಈ ಜಾಹಿರಾತನ್ನು ಸಿದ್ದ ಮಾಡಿರುವ ತುಮಕೂರು ಸಹಕಾರಿ ಹಾಲು ಒಕ್ಕೂಟ ರಾಜ್ಯದ ಎಲ್ಲಾ ನಂದಿನಿ ಹಾಲಿನ ಬೂತ್ ಗಳಿಗೆ ಅವುಗಳನ್ನು ರವಾನಿಸಿದ್ದು ಎಲ್ಲಾ ಬೂತ್ ಗಳಲ್ಲೂ ಗೋಡೆಗಳಲ್ಲಿ ನೇತುಹಾಕಿರುವ ಈ ಜಾಹಿರಾತು ಗ್ರಾಹಕರನ್ನು ತಮ್ಮತ್ತ ಸೆಳೆಯುವಂತೆ ಮಾಡಿಕೊಂಡಿವೆ.

ಒಟ್ಟಾರೆ ನಿಸ್ಪಕ್ಷಪಾತವಾದ ವರದಿಯೊಂದು ಓದುಗರಲ್ಲಿ ಕಲಬೆರಕೆ ಬಗ್ಗೆ ಎಚ್ಚರ ಮೂಡುವಂತೆ ಮಾಡಿದ್ದಲ್ಲದೆ,ಅದೇ ವರದಿ ನಂದಿನಿ ಹಾಲಿನ ಉತ್ಪನ್ನದಲ್ಲಿ ಜಾಹಿರಾತಾಗಿ ಕಂಗೊಳಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.