ವಿಷಯಕ್ಕೆ ಹೋಗಿ

ನಂದಿನಿಹಾಲಿನ ಜಾಹಿರಾತಿಗೆ ಕನ್ನಡಪ್ರಭ ವರದಿ ಬಳಕೆ

          ಹುಳಿಯಾರು: ತಮ್ಮ ಉತ್ಪನ್ನದ ಪ್ರಚಾರಕ್ಕೆ ಲಕ್ಷಾಂತರ ರೂಪಾಯಿ ಹಣವನ್ನು ಪತ್ರಿಕಾ ಜಾಹಿರಾತಿಗೋಸ್ಕರವೇ ಖರ್ಚು ಮಾಡುವ ಕಂಪನಿಗಳ ಮಧ್ಯೆ ರಾಜ್ಯದ ಕೆ.ಎಂ.ಎಫ್ ಪತ್ರಿಕಾ ವರದಿಯನ್ನೇ ಜಾಹಿರಾತಾಗಿ ಬಳಸಿಕೊಳ್ಳುವ ಮೂಲಕ ಜಾಣ ನಡೆಯಿಟ್ಟಿದ್ದು, ಇದು ಕನ್ನಡಪ್ರಭ ಪತ್ರಿಕೆಯ ವಸ್ತುನಿಷ್ಠ ವರದಿಗೆ ಸಿಕ್ಕ ಗೌರವವೆನ್ನಬಹುದಾಗಿದೆ.
ಹುಳಿಯಾರಿನ ನಂದಿನಿಹಾಲಿನ ಬೂತ್ ಒಂದರಲ್ಲಿ ತುಮಕೂರು ಸಹಕಾರಿ ಹಾಲು ಒಕ್ಕೂಟದಿಂದ ಕಳುಹಿಸಿರುವ ಜಾಹಿರಾತು ಫಲಕ.
                 ರಾಸಾಯನಿಕ ಮಿಶ್ರಿತ ಖಾಸಗಿ ಬ್ರಾಂಡ್ ನ ಹಾಲಿನ ದಂಧೆಯ ಬಗ್ಗೆ ವಿಶೇಷ ಕಾಳಜಿಹೊಂದಿ ಕಳೆದ 10 ಡಿಸೆಂಬರ್ 2013 ರಿಂದ ಸತತ ನಾಲ್ಕು ದಿನಗಳ ಕಾಲ ವಿಶೇಷ ವರದಿಯನ್ನು ಕನ್ನಡಪ್ರಭ ಪ್ರಕಟಿಸಿತ್ತು.
         ವರದಿಯಲ್ಲಿ ಏನಿತ್ತು: ರಾಜ್ಯದಲ್ಲಿ ಮಾರುಕಟ್ಟೆಯಲ್ಲಿರುವ 50ಕ್ಕೂ ಹೆಚ್ಚು ಬ್ರ್ಯಾಂಡೆಡ್ ಹಾಗೂ ಕಲಬೆರಿಕೆ ಹಾಲಿನ ಗುಣಮಟ್ಟದ ಬಗ್ಗೆ ಸವಿವರ ವರದಿ ಮಾಡಿತ್ತು. ಕೆಲವೊಂದು ಕಂಪನಿಯ ಹಾಲಿನ ಮಾದರಿ ಗುಣಮಟ್ಟ ಪರೀಕ್ಷೆ ಮಾಡುವ ಮೂಲಕ ಕುಡಿಯುವ ಹಾಲಿನಲ್ಲಿ ಯೂರಿಯಾ, ಡಿಟರ್ಜಂಟ್, ಉಪ್ಪು, ಸಕ್ಕರೆ, ಹೈಡ್ರೋಜನ್ ಪೆರಾಕ್ಸೈಡ್, ವಾಶಿಂಗ್ ಸೋಡಾ ಅಸಿಡ್ ಹೈಪೋ ಕ್ಲೋರೈಡ್ ಹಾಗೂ ಕಾಸ್ಟಿಕ್ ಸೋಡಾ ಮಿಶ್ರಣ ಮಾಡುವುದನ್ನು ಪತ್ತೆಹಚ್ಚಿ ಬಯಲು ಮಾಡಿತ್ತು. ಅಲ್ಲದೆ ಕಲಬೆರಿಕೆ ಏಕಾಗಿ ಹಾಗೂ ಹೇಗೆ ಮಾಡಲಾಗುತ್ತದೆ ಎಂಬ ಬಗ್ಗೆಯಲ್ಲದೆ ಯಾವ ಯಾವ ಮಾದರಿಯ ಹಾಲು ಸರಬರಾಜು ಮಾಡುವ ಸಂಸ್ಥೆಗಳು ಕಳಪೆ ಹಾಲು ಪೂರೈಸುತ್ತಿದೆ ಎಂದು ಪಟ್ಟಿಮಾಡಿತ್ತು.
              ರಾಜ್ಯದ ಸಹಕಾರ ಸಂಘದ ಕೆಎಂಎಫ್ ನ ನಂದಿನಿ ಹಾಲಿಗೂ ಇನ್ನಿತರ ಕಂಪನಿಗಳ ಹಾಲಿಗೂ ಗುಣಮಟ್ಟದ ವ್ಯತ್ಯಾಸ ಹೇಗಿದೆ ಎಂಬ ಚಿತ್ರಣ ನೀಡಿದಲ್ಲದೆ , ನಂದಿನಿ ಹಾಲಿಗೆ ಕಲಬೆರಕೆಯಾಗದಂತೆ ಹಾಲು ಉತ್ಪಾದಕರ ಸಹಕಾರ ಸಂಘ ತೆಗೆದುಕೊಂಡಿರುವ ಕ್ರಮದ ಬಗ್ಗೆ ವಿವರಿಸಿತ್ತು. ಈ ಮೂಲಕ ರಾಸಾಯನಿಕ ಮಿಶ್ರಿತ ಹಾಲಿನ ಬಗ್ಗೆ ಜನ ಜಾಗೃತಿ ಉಂಟುಮಾಡಿ ತೀವ್ರ ಸಂಚಲ ಉಂಟುಮಾಡಿತ್ತು.
ಜಾಹಿರಾತಾಗಿ ಬಳಕೆ: ನಿಸರ್ಗದತ್ತವಾದ ಹಾಲಿಗೆ ಹಲವು ಖಾಸಗಿ ಸಂಸ್ಥೆಯವರು ಮಾರಕ ರಾಸಾಯನಿಕ ವಸ್ತುಗಳಿಂದ ಕಲಬೆರಕೆ ಮಾಡಿ ರಾಜ್ಯಾದ್ಯಂತ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಪ್ರತಿಷ್ಠಿತ ದಿನಪತ್ರಿಕೆಯಾಗಿರುವ ಕನ್ನಡಪ್ರಭ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ವರದಿಯ ಮುಖಪುಟಗಳನ್ನೇ ಎಥಾವತ್ತಾಗಿ ಜಾಹಿರಾತಾಗಿ ತುಮಕೂರು ಸಹಕಾರಿ ಹಾಲು ಒಕ್ಕೂಟ(ತುಮುಲ್) ಬಳಸಿಕೊಂಡಿದೆ.
               ಈ ಜಾಹಿರಾತನ್ನು ಸಿದ್ದ ಮಾಡಿರುವ ತುಮಕೂರು ಸಹಕಾರಿ ಹಾಲು ಒಕ್ಕೂಟ ರಾಜ್ಯದ ಎಲ್ಲಾ ನಂದಿನಿ ಹಾಲಿನ ಬೂತ್ ಗಳಿಗೆ ಅವುಗಳನ್ನು ರವಾನಿಸಿದ್ದು ಎಲ್ಲಾ ಬೂತ್ ಗಳಲ್ಲೂ ಗೋಡೆಗಳಲ್ಲಿ ನೇತುಹಾಕಿರುವ ಈ ಜಾಹಿರಾತು ಗ್ರಾಹಕರನ್ನು ತಮ್ಮತ್ತ ಸೆಳೆಯುವಂತೆ ಮಾಡಿಕೊಂಡಿವೆ.

ಒಟ್ಟಾರೆ ನಿಸ್ಪಕ್ಷಪಾತವಾದ ವರದಿಯೊಂದು ಓದುಗರಲ್ಲಿ ಕಲಬೆರಕೆ ಬಗ್ಗೆ ಎಚ್ಚರ ಮೂಡುವಂತೆ ಮಾಡಿದ್ದಲ್ಲದೆ,ಅದೇ ವರದಿ ನಂದಿನಿ ಹಾಲಿನ ಉತ್ಪನ್ನದಲ್ಲಿ ಜಾಹಿರಾತಾಗಿ ಕಂಗೊಳಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...