ವಿಷಯಕ್ಕೆ ಹೋಗಿ

ನಂದಿನಿಹಾಲಿನ ಜಾಹಿರಾತಿಗೆ ಕನ್ನಡಪ್ರಭ ವರದಿ ಬಳಕೆ

          ಹುಳಿಯಾರು: ತಮ್ಮ ಉತ್ಪನ್ನದ ಪ್ರಚಾರಕ್ಕೆ ಲಕ್ಷಾಂತರ ರೂಪಾಯಿ ಹಣವನ್ನು ಪತ್ರಿಕಾ ಜಾಹಿರಾತಿಗೋಸ್ಕರವೇ ಖರ್ಚು ಮಾಡುವ ಕಂಪನಿಗಳ ಮಧ್ಯೆ ರಾಜ್ಯದ ಕೆ.ಎಂ.ಎಫ್ ಪತ್ರಿಕಾ ವರದಿಯನ್ನೇ ಜಾಹಿರಾತಾಗಿ ಬಳಸಿಕೊಳ್ಳುವ ಮೂಲಕ ಜಾಣ ನಡೆಯಿಟ್ಟಿದ್ದು, ಇದು ಕನ್ನಡಪ್ರಭ ಪತ್ರಿಕೆಯ ವಸ್ತುನಿಷ್ಠ ವರದಿಗೆ ಸಿಕ್ಕ ಗೌರವವೆನ್ನಬಹುದಾಗಿದೆ.
ಹುಳಿಯಾರಿನ ನಂದಿನಿಹಾಲಿನ ಬೂತ್ ಒಂದರಲ್ಲಿ ತುಮಕೂರು ಸಹಕಾರಿ ಹಾಲು ಒಕ್ಕೂಟದಿಂದ ಕಳುಹಿಸಿರುವ ಜಾಹಿರಾತು ಫಲಕ.
                 ರಾಸಾಯನಿಕ ಮಿಶ್ರಿತ ಖಾಸಗಿ ಬ್ರಾಂಡ್ ನ ಹಾಲಿನ ದಂಧೆಯ ಬಗ್ಗೆ ವಿಶೇಷ ಕಾಳಜಿಹೊಂದಿ ಕಳೆದ 10 ಡಿಸೆಂಬರ್ 2013 ರಿಂದ ಸತತ ನಾಲ್ಕು ದಿನಗಳ ಕಾಲ ವಿಶೇಷ ವರದಿಯನ್ನು ಕನ್ನಡಪ್ರಭ ಪ್ರಕಟಿಸಿತ್ತು.
         ವರದಿಯಲ್ಲಿ ಏನಿತ್ತು: ರಾಜ್ಯದಲ್ಲಿ ಮಾರುಕಟ್ಟೆಯಲ್ಲಿರುವ 50ಕ್ಕೂ ಹೆಚ್ಚು ಬ್ರ್ಯಾಂಡೆಡ್ ಹಾಗೂ ಕಲಬೆರಿಕೆ ಹಾಲಿನ ಗುಣಮಟ್ಟದ ಬಗ್ಗೆ ಸವಿವರ ವರದಿ ಮಾಡಿತ್ತು. ಕೆಲವೊಂದು ಕಂಪನಿಯ ಹಾಲಿನ ಮಾದರಿ ಗುಣಮಟ್ಟ ಪರೀಕ್ಷೆ ಮಾಡುವ ಮೂಲಕ ಕುಡಿಯುವ ಹಾಲಿನಲ್ಲಿ ಯೂರಿಯಾ, ಡಿಟರ್ಜಂಟ್, ಉಪ್ಪು, ಸಕ್ಕರೆ, ಹೈಡ್ರೋಜನ್ ಪೆರಾಕ್ಸೈಡ್, ವಾಶಿಂಗ್ ಸೋಡಾ ಅಸಿಡ್ ಹೈಪೋ ಕ್ಲೋರೈಡ್ ಹಾಗೂ ಕಾಸ್ಟಿಕ್ ಸೋಡಾ ಮಿಶ್ರಣ ಮಾಡುವುದನ್ನು ಪತ್ತೆಹಚ್ಚಿ ಬಯಲು ಮಾಡಿತ್ತು. ಅಲ್ಲದೆ ಕಲಬೆರಿಕೆ ಏಕಾಗಿ ಹಾಗೂ ಹೇಗೆ ಮಾಡಲಾಗುತ್ತದೆ ಎಂಬ ಬಗ್ಗೆಯಲ್ಲದೆ ಯಾವ ಯಾವ ಮಾದರಿಯ ಹಾಲು ಸರಬರಾಜು ಮಾಡುವ ಸಂಸ್ಥೆಗಳು ಕಳಪೆ ಹಾಲು ಪೂರೈಸುತ್ತಿದೆ ಎಂದು ಪಟ್ಟಿಮಾಡಿತ್ತು.
              ರಾಜ್ಯದ ಸಹಕಾರ ಸಂಘದ ಕೆಎಂಎಫ್ ನ ನಂದಿನಿ ಹಾಲಿಗೂ ಇನ್ನಿತರ ಕಂಪನಿಗಳ ಹಾಲಿಗೂ ಗುಣಮಟ್ಟದ ವ್ಯತ್ಯಾಸ ಹೇಗಿದೆ ಎಂಬ ಚಿತ್ರಣ ನೀಡಿದಲ್ಲದೆ , ನಂದಿನಿ ಹಾಲಿಗೆ ಕಲಬೆರಕೆಯಾಗದಂತೆ ಹಾಲು ಉತ್ಪಾದಕರ ಸಹಕಾರ ಸಂಘ ತೆಗೆದುಕೊಂಡಿರುವ ಕ್ರಮದ ಬಗ್ಗೆ ವಿವರಿಸಿತ್ತು. ಈ ಮೂಲಕ ರಾಸಾಯನಿಕ ಮಿಶ್ರಿತ ಹಾಲಿನ ಬಗ್ಗೆ ಜನ ಜಾಗೃತಿ ಉಂಟುಮಾಡಿ ತೀವ್ರ ಸಂಚಲ ಉಂಟುಮಾಡಿತ್ತು.
ಜಾಹಿರಾತಾಗಿ ಬಳಕೆ: ನಿಸರ್ಗದತ್ತವಾದ ಹಾಲಿಗೆ ಹಲವು ಖಾಸಗಿ ಸಂಸ್ಥೆಯವರು ಮಾರಕ ರಾಸಾಯನಿಕ ವಸ್ತುಗಳಿಂದ ಕಲಬೆರಕೆ ಮಾಡಿ ರಾಜ್ಯಾದ್ಯಂತ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಪ್ರತಿಷ್ಠಿತ ದಿನಪತ್ರಿಕೆಯಾಗಿರುವ ಕನ್ನಡಪ್ರಭ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ವರದಿಯ ಮುಖಪುಟಗಳನ್ನೇ ಎಥಾವತ್ತಾಗಿ ಜಾಹಿರಾತಾಗಿ ತುಮಕೂರು ಸಹಕಾರಿ ಹಾಲು ಒಕ್ಕೂಟ(ತುಮುಲ್) ಬಳಸಿಕೊಂಡಿದೆ.
               ಈ ಜಾಹಿರಾತನ್ನು ಸಿದ್ದ ಮಾಡಿರುವ ತುಮಕೂರು ಸಹಕಾರಿ ಹಾಲು ಒಕ್ಕೂಟ ರಾಜ್ಯದ ಎಲ್ಲಾ ನಂದಿನಿ ಹಾಲಿನ ಬೂತ್ ಗಳಿಗೆ ಅವುಗಳನ್ನು ರವಾನಿಸಿದ್ದು ಎಲ್ಲಾ ಬೂತ್ ಗಳಲ್ಲೂ ಗೋಡೆಗಳಲ್ಲಿ ನೇತುಹಾಕಿರುವ ಈ ಜಾಹಿರಾತು ಗ್ರಾಹಕರನ್ನು ತಮ್ಮತ್ತ ಸೆಳೆಯುವಂತೆ ಮಾಡಿಕೊಂಡಿವೆ.

ಒಟ್ಟಾರೆ ನಿಸ್ಪಕ್ಷಪಾತವಾದ ವರದಿಯೊಂದು ಓದುಗರಲ್ಲಿ ಕಲಬೆರಕೆ ಬಗ್ಗೆ ಎಚ್ಚರ ಮೂಡುವಂತೆ ಮಾಡಿದ್ದಲ್ಲದೆ,ಅದೇ ವರದಿ ನಂದಿನಿ ಹಾಲಿನ ಉತ್ಪನ್ನದಲ್ಲಿ ಜಾಹಿರಾತಾಗಿ ಕಂಗೊಳಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...