ವಿಷಯಕ್ಕೆ ಹೋಗಿ

ಸಹಕಾರ, ಸಹಬಾಳ್ವೆಯಿಂದ ಜೀವನದಲ್ಲಿ ಶಾಂತಿ ನೆಮ್ಮದಿ ಸಾಧ್ಯ: ರವಿಪ್ರಕಾಶ್

            ಹುಳಿಯಾರು: ಜೀವನವೆಂಬುದು ಮಾನವರಿಗೆ ಸಿಕ್ಕಿರುವ ಒಂದು ವರವಾಗಿದ್ದು, ನಾವುಗಳು ಸರಿಯಾಗಿ ನಡೆಯದೇ ನಮ್ಮ ಶಾಂತಿ,ನೆಮ್ಮದಿಯನ್ನು ಕಳೆದುಕೊಳ್ಳುತ್ತಿದ್ದೇವೆ. ನಾವೆಲ್ಲಾ ಪರಸ್ಪರ ಸಹಕಾರ,ಸಹಬಾಳ್ವೆಯಿಂದ ಬದುಕಿದಾಗ ಮಾತ್ರ ಜೀವನ ಶಾಂತಿ,ನೆಮ್ಮದಿ, ಸಂತಸದಿಂದ ಕೂಡಿರುತ್ತದೆಂದು ಬೆಂಗಳೂರಿನ ವಿಕಾಸ್ ಸೆಂಟರ್ ಫಾರ್ ಲರ್ನಿಂಗ್ ನ ಮುಖ್ಯಸ್ಥ ಬಿ.ಎಸ್.ರವಿಪ್ರಕಾಶ್ ತಿಳಿಸಿದರು.
             ಹುಳಿಯಾರಿನ ಸನ್ಮಾರ್ಗ ಥಿಯಸಾಫಿಕಲ್ ಸೊಸೈಟಿಯವತಿಯಿಂದ ಅಯೋಜಿಸಿದ್ದ "ನೆಮ್ಮದಿಯ ಬದುಕಿಗೆ ಕರ್ಮಸಿದ್ದಾಂತದ ಅನ್ವಯ" ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹುಳಿಯಾರಿನ ಸನ್ಮಾರ್ಗ ಥಿಯಸಾಫಿಕಲ್ ಸೊಸೈಟಿಯಲ್ಲಿ "ನೆಮ್ಮದಿಯ ಬದುಕಿಗೆ ಕರ್ಮಸಿದ್ದಾಂತದ ಅನ್ವಯ" ಕುರಿತ ಉಪನ್ಯಾಸವನ್ನು ಬಿ.ಎಸ್.ರವಿಪ್ರಕಾಶ್ ನೀಡಿದರು.
              ಭೂಮಿಯ ಮೇಲಿನ ಜೀವರಾಶಿಗಳಲ್ಲಿ ಮಾನವ ಮಾತ್ರ ವಿಶಿಷ್ಟವಾಗಿದ್ದು , ತನ್ನದೇ ಆದ ಆಲೋಚನೆಗಳಲ್ಲಿ ತೊಡಗಿಕೊಂಡಿರುವುಲ್ಲದೆ ತನ್ನಿಷ್ಟದಂತೆ ಬದುಕನ್ನು ರೂಪಿಸಿಕೊಳ್ಳುವಲ್ಲಿ ಸಾಗುತ್ತಾ ಅನೇಕ ಕರ್ಮಕಾರ್ಯಗಳನ್ನು ಮಾಡುತ್ತಾನೆ ಎಂದರು. ಬದುಕಿನಲ್ಲಿ ಪ್ರತಿಯೊಬ್ಬರು ಒಂದಲ್ಲ ಒಂದು ಕರ್ಮವನ್ನು ಮಾಡಿರುತ್ತಾದರೂ ಅದರ ಬಗ್ಗೆ ಅರಿವಿದ್ದೂ ಸಹ ಪರಿಜ್ಞಾನವಿಲ್ಲದವರಂತೆ ನಡೆಯುವುದರಿಂದ ನಮ್ಮ ಜೀವನದಲ್ಲಿನ ಕರ್ಮಫಲಗಳು ಹೆಚ್ಚುತ್ತವೆ. ಆದ್ದರಿಂದ ನಾವು ಮಾಡುವ ಕರ್ಮಕಾರ್ಯಗಳನ್ನು ಸಕಾರಾತ್ಮಕವಾಗಿ ಇರುವಂತೆ ಅರಿತು ನಡೆಯಬೇಕು ಎಂದರು.
           ಜೀವನದಲ್ಲಿ ನೆಮ್ಮದಿ ಲಭಿಸಬೇಕಾದರೆ ಕರ್ಮಸಿದ್ದಾಂತವನ್ನು ಅನ್ವಯಿಸಿಕೊಂಡು ನಡೆಯಬಹುದಾಗಿದ್ದು, ಯಾರೊಬ್ಬರನ್ನು ನೇರವಾಗಿ ಟೀಕಿಸುವುದಾಗಲಿ, ಅವರು ಮಾಡಿದ ಕಾರ್ಯಗಳಲ್ಲಿ ಸದಾಕಾಲ ತಪ್ಪನ್ನು ಹುಡುಕುವುದಾಗಲಿ ಮಾಡುವುದರಿಂದ ದ್ವೇಷ,ಅಸೂಯೆ,ಆಶಾಂತಿಯ ವಾತಾವರಣ ನಿರ್ಮಾಣವಾಗಿ ಜೀವನ ಬೇಸರ ಎಂಬಂತಾಗುತ್ತದೆ. ಎಲ್ಲರೂ ಒಬ್ಬರಿಗೊಬ್ಬರು ಪ್ರೀತಿ,ವಿಶ್ವಾಸವನ್ನು ನೀಡುತ್ತಾ ಅವರವರು ಮಾಡುವ ತಪ್ಪುಗಳನ್ನು ಅವರೇ ಅರಿತಾಗ ಜೀವನದಲ್ಲಿ ಸಾರ್ಥಕತೆ ಲಭಿಸುತ್ತದೆ ಎಂದರು.

       ಸನ್ಮಾರ್ಗ ಥಿಯಸಾಫಿಕಲ್ ಸೊಸೈಟಿಯ ಅಧ್ಯಕ್ಷ ಹೆಚ್.ಬಿ.ಗೋಪಾಲಕೃಷ್ಣ ಅಧ್ಯಕ್ಷತೆವಹಿಸಲಿದ್ದು,ಹೆಚ್.ಸಿ.ಜಗದೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸೊಸೈಟಿಯ ಎಂ.ಆರ್.ಗೋಪಾಲ್,ವಕೀಲ ಸತೀಶ್, ಸುದರ್ಶನ್ ಸೇರಿದಂತೆ ಇತರ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...