ವಿಷಯಕ್ಕೆ ಹೋಗಿ

ಅಬಕಾರಿ ಡಿ.ಸಿ ಗೈರು : ಉಪ ಅಧೀಕ್ಷಕರಿಗೆ ಘೇರಾವ್

         ಹುಳಿಯಾರು  ಪಟ್ಟಣದ ಟೌನ್ ಕೋ ಅಪರೇಟೀವ್ ಕಟ್ಟಡದಲ್ಲಿರುವ ಶ್ರೀರಂಗನಾಥ ವೈನ್ಸ್ ನ ವಿವಾದ ತಾರಕಕ್ಕೇರಿದ್ದು ಅದರ ಸ್ಥಳ ಪರೀಕ್ಷೆ ಹಾಗೂ ಆಳತೆ ಮಾಡಲು ಮಂಗಳವಾರ ಆಗಮಿಸಬೇಕಿದ್ದ ಅಬಕಾರಿ ಉಪ ಆಯುಕ್ತರು ಗೈರು ಹಾಜರಾದ ಹಿನ್ನಲೆಯಲ್ಲಿ ದೇವಾಲಯ ಸಮಿತಿಯವರು ಸೇರಿದಂತೆ ಸಾರ್ವಜನಿಕರು ಆಕ್ರೋಶಭರಿತರಾಗಿ ಸ್ಥಳಕ್ಕೆ ಆಗಮಿಸಿದ್ದ ಅಬಕಾರಿ ಅಬಕಾರಿ ಉಪಅಧೀಕ್ಷಕರಿಗೆ ಘೇರಾವ್ ಹಾಕಿ ಪ್ರತಿಭಟಿಸಿದರು.
ಹುಳಿಯಾರಿನಲ್ಲಿರುವ ವಿವಾದಿತ ಶ್ರೀರಂಗನಾಥ ವೈನ್ಸ್ ಸ್ಥಳಾಂತರಿಸಲು ಕೋರಿ ಸಾರ್ವಜನಿಕರು ಅಬಕಾರಿ ಅಧಿಕಾರಿಯೊಂದಿಗೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು..
            ಮದ್ಯದಂಗಡಿ ಅಕ್ಷೇಪಣಾರ್ಹ ಸ್ಥಳದಲ್ಲಿದ್ದರೂ ಅದನ್ನು ಪರಿಗಣಿಸದೆ ಅವಧಿ ವಿಸ್ತರಿಸುತ್ತಿರುವ ಇಲಾಖೆಯ ಕ್ರಮದ ಬಗ್ಗೆ ಆಯುಕ್ತರು ಹಾಗೂ ಅಬಕಾರಿ ಸಚಿವರಿಗೆ ಸಾಕಷ್ಟು ದೂರುಗಳು ಸಲ್ಲಿಕೆಯಾದ ಪರಿಣಾಮ ಆಯುಕ್ತರ ಆದೇಶದ ಮೇರೆಗೆ ಎಲ್ಲಾ ದೂರುದಾರರಿಗೂ ಮಂಗಳವಾರ ಖುದ್ದು ಹಾಜರಿರಬೇಕೆಂದು ಲಿಖಿತ ಪತ್ರ ನೀಡಿದ್ದ ಜಿಲ್ಲಾ ಉಪಆಯುಕ್ತರು ತಾವೇ ಖುದ್ದು ಗೈರಾದ ಹಿನ್ನಲೆಯಲ್ಲಿ  ಇಲಾಖೆಯವರೆ ಅಂಗಡಿಯವರೊಂದಿಗೆ ಶಾಮೀಲಾಗಿದ್ದಾರೆಂದು ಮಾತಿನ ಚಕಮಕಿ ನಡೆಸಿದ ಸದಸ್ಯರುಗಳು ಖುದ್ದು ಅಬಕಾರಿ ಡಿ.ಸಿ ಯವರೆ ಸ್ಥಳಕ್ಕಾಗಮಿಸಿ ಸಮಸ್ಯೆ ಪರಿಹರಿಸಬೇಕೆಂದು ಪಟ್ಟುಹಿಡಿದರು. ಅಲ್ಲದೆ ಶಾಮೀಯಾನ ಹಾಕಿ ಧರಣಿಗೆ ಮುಂದಾದರು.

       ಆರೋಪ : ಸುಮಾರು ಐದುನೂರು ವರ್ಷಗಳು ಹಳೆಯದಾದ ಹುಳಿಯಾರಿನ ಗ್ರಾಮದೇವತೆ ಹುಳಿಯಾರಮ್ಮ ಹಾಗೂ ಬೀರಲಿಂಗೇಶ್ವರ ದೇವಾಲಯಗಳು ಈ ಮದ್ಯದಂಗಡಿಗೆ ಸಮೀಪವಿದ್ದು ಹಲವಾರು ವರ್ಷದಿಂದ ಅಕ್ಷೇಪಣೆ ವ್ಯಕ್ತವಾಗುತ್ತಿದ್ದರೂ ಸಹ ಅವಧಿ ವಿಸ್ತರಿಸುತ್ತಿದ್ದಾರೆ. ಮುಜುರಾಯಿ ಇಲಾಖೆಗೆ ಸೇರಿರುವ ರಂಗನಾಥಸ್ವಾಮಿ ದೇವಾಲಯಕ್ಕೂ ಮದ್ಯದಂಗಡಿಗೂ ಇರುವ ಅಂತರ ನಿಗದಿತ ಅಳತೆಗಿಂತಲೂ ಹೆಚ್ಚಿರುವುದಾಗಿ ತಪ್ಪು ಮಾಹಿತಿ ನೀಡಿ ಪರವಾನಿಗೆ ನವೀಕರಿಸುತ್ತಿದ್ದಾರೆ. ಅಬಕಾರಿ ಸನ್ನದು 1967 ರ ನಿಯಮ ಉಲ್ಲಂಘನೆಯಾಗಿದ್ದರೂ ಬೇರೆಡೆಗೆ ಸ್ಥಳಾಂತರಿಸದೆ ಅಧಿಕಾರಿಗಳೇ ಅಂಗಡಿ ಮಾಲೀಕರೊಂದಿಗೆ ಶಾಮೀಲಾಗಿ ಇರುವ ಜಾಗದಲ್ಲೇ ಮುಂದುವರಿಕೊಂಡು ಹೋಗಲು ಬಿಟ್ಟಿದ್ದಾರೆ ಎಂದು ಸಂಘಸಂಸ್ಥೆಯವರು ಆರೋಪಿಸಿದರು.

          ಅಬಕಾರಿ ಉಪಆಯುಕ್ತರ ಬದಲಿಗೆ ಸ್ಥಳಕ್ಕೆ ಆಗಮಿಸಿದ್ದ ತಿಪಟೂರು ವಿಭಾಗದ ಅಬ್ಕಾರಿ ಉಪಅಧೀಕ್ಷಕ ರವಿಶಂಕರ್ ಸಾರ್ವಜನಿಕರ ಸಮಸ್ಯೆ ಆಲಿಸಿ ಡಿ.ಸಿ ಅವರು ಅಧಿವೇಶನಕ್ಕೆ ತುರ್ತಾಗಿ ಹೋದ ಪರಿಣಾಮ ತಾವು ಆಗಮಿಸಿದ್ದು ಇನ್ನೆರಡೇ ದಿನದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ಹಾಗೂ ಸಮಸ್ಯೆ ಬಗ್ಗೆ ಮಹಜರ್ ಮಾಡಿ ಲಿಖಿತ ಉತ್ತರ ನೀಡಿದ್ದರ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

        
    ಪ್ರತಿಭಟನೆಯಲ್ಲಿ ಹುಳಿಯಾರಮ್ಮ, ಬೀರಲಿಂಗೇಶ್ವರಸ್ವಾಮಿ,ದುರ್ಗಾಪರಮೇಶ್ವರಿ,ರಂಗನಾಥಸ್ವಾಮಿ ದೇವಾಲಯಗಳ ಸಮಿತಿಯ ನರೇಂದ್ರಬಾಬು, ಶಿವಕುಮಾರ್, ವಿಶ್ವನಾಥ್, ಎಸ್. ರಾಮಯ್ಯ, ಸೊಸೈಟಿ ಅಧ್ಯಕ್ಷ ದೇವಾನಂದ್, ಗ್ರಾ.ಪಂ.ಸದಸ್ಯರುಗಳಾದ ಬಡ್ಡಿಪುಟ್ಟರಾಜು,ಹೇಮಂತ್,ರಾಘವೇಂದ್ರ, ಅಶೋಕ್ ಬಾಬು, ಅಹಮದ್ ಖಾನ್, ರೈತಸಂಘದ ಕೆಂಕೆರೆ ಸತೀಶ್,ಕೆ.ಪಿ.ಮಲ್ಲೇಶ್, ಲೋಕೇಶ್, ಪಾತ್ರೆಸತೀಶ್,ಹೂವಿನ ರಘು,ಕರವೇಯ ಕೋಳಿಶ್ರೀನಿವಾಸ್,ಜಯಕರ್ನಾಟಕದ ವೆಂಕಟೇಶ್, ವಿಪ್ರಸಂಘದ ರಘುಕುಮಾರ್, ಶ್ರೀಧರ್ ಅಂಬೇಕರ್ , ಹಿಂದೂ ಹಿತರಕ್ಷಣಾ ವೇದಿಕೆಯ ಬಡಗಿ ರಾಮಣ್ಣ, ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಸಂಘ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.







ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...