ವಿಷಯಕ್ಕೆ ಹೋಗಿ

ಅಬಕಾರಿ ಡಿ.ಸಿ ಗೈರು : ಉಪ ಅಧೀಕ್ಷಕರಿಗೆ ಘೇರಾವ್

         ಹುಳಿಯಾರು  ಪಟ್ಟಣದ ಟೌನ್ ಕೋ ಅಪರೇಟೀವ್ ಕಟ್ಟಡದಲ್ಲಿರುವ ಶ್ರೀರಂಗನಾಥ ವೈನ್ಸ್ ನ ವಿವಾದ ತಾರಕಕ್ಕೇರಿದ್ದು ಅದರ ಸ್ಥಳ ಪರೀಕ್ಷೆ ಹಾಗೂ ಆಳತೆ ಮಾಡಲು ಮಂಗಳವಾರ ಆಗಮಿಸಬೇಕಿದ್ದ ಅಬಕಾರಿ ಉಪ ಆಯುಕ್ತರು ಗೈರು ಹಾಜರಾದ ಹಿನ್ನಲೆಯಲ್ಲಿ ದೇವಾಲಯ ಸಮಿತಿಯವರು ಸೇರಿದಂತೆ ಸಾರ್ವಜನಿಕರು ಆಕ್ರೋಶಭರಿತರಾಗಿ ಸ್ಥಳಕ್ಕೆ ಆಗಮಿಸಿದ್ದ ಅಬಕಾರಿ ಅಬಕಾರಿ ಉಪಅಧೀಕ್ಷಕರಿಗೆ ಘೇರಾವ್ ಹಾಕಿ ಪ್ರತಿಭಟಿಸಿದರು.
ಹುಳಿಯಾರಿನಲ್ಲಿರುವ ವಿವಾದಿತ ಶ್ರೀರಂಗನಾಥ ವೈನ್ಸ್ ಸ್ಥಳಾಂತರಿಸಲು ಕೋರಿ ಸಾರ್ವಜನಿಕರು ಅಬಕಾರಿ ಅಧಿಕಾರಿಯೊಂದಿಗೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು..
            ಮದ್ಯದಂಗಡಿ ಅಕ್ಷೇಪಣಾರ್ಹ ಸ್ಥಳದಲ್ಲಿದ್ದರೂ ಅದನ್ನು ಪರಿಗಣಿಸದೆ ಅವಧಿ ವಿಸ್ತರಿಸುತ್ತಿರುವ ಇಲಾಖೆಯ ಕ್ರಮದ ಬಗ್ಗೆ ಆಯುಕ್ತರು ಹಾಗೂ ಅಬಕಾರಿ ಸಚಿವರಿಗೆ ಸಾಕಷ್ಟು ದೂರುಗಳು ಸಲ್ಲಿಕೆಯಾದ ಪರಿಣಾಮ ಆಯುಕ್ತರ ಆದೇಶದ ಮೇರೆಗೆ ಎಲ್ಲಾ ದೂರುದಾರರಿಗೂ ಮಂಗಳವಾರ ಖುದ್ದು ಹಾಜರಿರಬೇಕೆಂದು ಲಿಖಿತ ಪತ್ರ ನೀಡಿದ್ದ ಜಿಲ್ಲಾ ಉಪಆಯುಕ್ತರು ತಾವೇ ಖುದ್ದು ಗೈರಾದ ಹಿನ್ನಲೆಯಲ್ಲಿ  ಇಲಾಖೆಯವರೆ ಅಂಗಡಿಯವರೊಂದಿಗೆ ಶಾಮೀಲಾಗಿದ್ದಾರೆಂದು ಮಾತಿನ ಚಕಮಕಿ ನಡೆಸಿದ ಸದಸ್ಯರುಗಳು ಖುದ್ದು ಅಬಕಾರಿ ಡಿ.ಸಿ ಯವರೆ ಸ್ಥಳಕ್ಕಾಗಮಿಸಿ ಸಮಸ್ಯೆ ಪರಿಹರಿಸಬೇಕೆಂದು ಪಟ್ಟುಹಿಡಿದರು. ಅಲ್ಲದೆ ಶಾಮೀಯಾನ ಹಾಕಿ ಧರಣಿಗೆ ಮುಂದಾದರು.

       ಆರೋಪ : ಸುಮಾರು ಐದುನೂರು ವರ್ಷಗಳು ಹಳೆಯದಾದ ಹುಳಿಯಾರಿನ ಗ್ರಾಮದೇವತೆ ಹುಳಿಯಾರಮ್ಮ ಹಾಗೂ ಬೀರಲಿಂಗೇಶ್ವರ ದೇವಾಲಯಗಳು ಈ ಮದ್ಯದಂಗಡಿಗೆ ಸಮೀಪವಿದ್ದು ಹಲವಾರು ವರ್ಷದಿಂದ ಅಕ್ಷೇಪಣೆ ವ್ಯಕ್ತವಾಗುತ್ತಿದ್ದರೂ ಸಹ ಅವಧಿ ವಿಸ್ತರಿಸುತ್ತಿದ್ದಾರೆ. ಮುಜುರಾಯಿ ಇಲಾಖೆಗೆ ಸೇರಿರುವ ರಂಗನಾಥಸ್ವಾಮಿ ದೇವಾಲಯಕ್ಕೂ ಮದ್ಯದಂಗಡಿಗೂ ಇರುವ ಅಂತರ ನಿಗದಿತ ಅಳತೆಗಿಂತಲೂ ಹೆಚ್ಚಿರುವುದಾಗಿ ತಪ್ಪು ಮಾಹಿತಿ ನೀಡಿ ಪರವಾನಿಗೆ ನವೀಕರಿಸುತ್ತಿದ್ದಾರೆ. ಅಬಕಾರಿ ಸನ್ನದು 1967 ರ ನಿಯಮ ಉಲ್ಲಂಘನೆಯಾಗಿದ್ದರೂ ಬೇರೆಡೆಗೆ ಸ್ಥಳಾಂತರಿಸದೆ ಅಧಿಕಾರಿಗಳೇ ಅಂಗಡಿ ಮಾಲೀಕರೊಂದಿಗೆ ಶಾಮೀಲಾಗಿ ಇರುವ ಜಾಗದಲ್ಲೇ ಮುಂದುವರಿಕೊಂಡು ಹೋಗಲು ಬಿಟ್ಟಿದ್ದಾರೆ ಎಂದು ಸಂಘಸಂಸ್ಥೆಯವರು ಆರೋಪಿಸಿದರು.

          ಅಬಕಾರಿ ಉಪಆಯುಕ್ತರ ಬದಲಿಗೆ ಸ್ಥಳಕ್ಕೆ ಆಗಮಿಸಿದ್ದ ತಿಪಟೂರು ವಿಭಾಗದ ಅಬ್ಕಾರಿ ಉಪಅಧೀಕ್ಷಕ ರವಿಶಂಕರ್ ಸಾರ್ವಜನಿಕರ ಸಮಸ್ಯೆ ಆಲಿಸಿ ಡಿ.ಸಿ ಅವರು ಅಧಿವೇಶನಕ್ಕೆ ತುರ್ತಾಗಿ ಹೋದ ಪರಿಣಾಮ ತಾವು ಆಗಮಿಸಿದ್ದು ಇನ್ನೆರಡೇ ದಿನದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ಹಾಗೂ ಸಮಸ್ಯೆ ಬಗ್ಗೆ ಮಹಜರ್ ಮಾಡಿ ಲಿಖಿತ ಉತ್ತರ ನೀಡಿದ್ದರ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

        
    ಪ್ರತಿಭಟನೆಯಲ್ಲಿ ಹುಳಿಯಾರಮ್ಮ, ಬೀರಲಿಂಗೇಶ್ವರಸ್ವಾಮಿ,ದುರ್ಗಾಪರಮೇಶ್ವರಿ,ರಂಗನಾಥಸ್ವಾಮಿ ದೇವಾಲಯಗಳ ಸಮಿತಿಯ ನರೇಂದ್ರಬಾಬು, ಶಿವಕುಮಾರ್, ವಿಶ್ವನಾಥ್, ಎಸ್. ರಾಮಯ್ಯ, ಸೊಸೈಟಿ ಅಧ್ಯಕ್ಷ ದೇವಾನಂದ್, ಗ್ರಾ.ಪಂ.ಸದಸ್ಯರುಗಳಾದ ಬಡ್ಡಿಪುಟ್ಟರಾಜು,ಹೇಮಂತ್,ರಾಘವೇಂದ್ರ, ಅಶೋಕ್ ಬಾಬು, ಅಹಮದ್ ಖಾನ್, ರೈತಸಂಘದ ಕೆಂಕೆರೆ ಸತೀಶ್,ಕೆ.ಪಿ.ಮಲ್ಲೇಶ್, ಲೋಕೇಶ್, ಪಾತ್ರೆಸತೀಶ್,ಹೂವಿನ ರಘು,ಕರವೇಯ ಕೋಳಿಶ್ರೀನಿವಾಸ್,ಜಯಕರ್ನಾಟಕದ ವೆಂಕಟೇಶ್, ವಿಪ್ರಸಂಘದ ರಘುಕುಮಾರ್, ಶ್ರೀಧರ್ ಅಂಬೇಕರ್ , ಹಿಂದೂ ಹಿತರಕ್ಷಣಾ ವೇದಿಕೆಯ ಬಡಗಿ ರಾಮಣ್ಣ, ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಸಂಘ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.







ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.