ವಿಷಯಕ್ಕೆ ಹೋಗಿ

ಸೂಕ್ತ ಚಿಕಿತ್ಸೆಯಿಲ್ಲದೆ ಚಿಕುನ್ ಗುನ್ಯಾದಿಂದ ಜನ ತತ್ತರ

          ದಿನದಿಂದ ದಿನಕ್ಕೆ ಚಿಕುನ್ ಗುನ್ಯಾ ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಹೋಬಳಿಯ ರಂಗನಕೆರೆ ಗ್ರಾಮದಲ್ಲಿ ಸೂಕ್ತಚಿಕಿತ್ಸೆ ದೊರೆಯದೆ ಇಲ್ಲಿನ ಜನ ಪರಿತಪಿಸುವಂತ ಚಿಂತಾಜನಕ ಸ್ಥಿತಿ ನಿರ್ಮಾಣವಾಗಿದೆ.
          ಕಳೆದ 20 ದಿವಸಗಳಿಂದ ರೋಗ ಬಾಧಿಸುತ್ತಿದ್ದು ಮನೆಗಿಬ್ಬರು ರೋಗಿಗಳು ಖಾಯಿಲೆಗೆ ತುತ್ತಾಗಿ ನರಕಯಾತನೆ ಅನುಭವಿಸುತ್ತಿದ್ದಾರೆ. ಕಳೆದ ಎರಡು ದಿವಸಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ್ದ ತಾಲ್ಲೂಕು ವೈದ್ಯಾಧಿಕಾರಿಗಳು ಶೀಘ್ರದಲ್ಲೇ ವೈದ್ಯರನ್ನು ಗ್ರಾಮಕ್ಕೆ ಕಳುಹಿಸಿ ಚಿಕಿತ್ಸೆ ನೀಡುವುದಾಗಿ ಹಾಗೂ ಕುಗ್ರಾಮವಾಗಿರುವುದರಿಂದ ತಮ್ಮದೇ ವಾಹನದ ಮೂಲಕ ಹೊಯ್ಸಳಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಭರವಸೆಯಿತ್ತಿದ್ದರು.
ಹುಳಿಯಾರು ಹೋಬಳಿ ರಂಗನಕೆರೆ ಗ್ರಾಮದಲ್ಲಿ ಚಿಕುನ್ ಗುನ್ಯಾ ಪೀಡಿತರು ಚಿಕಿತ್ಸೆಗಾಗಿ ಕಾದು ಕುಳಿತಿರುವುದು.
            ಅದರಂತೆ ಜಿಲ್ಲಾ ಕೇಂದ್ರದಿಂದ ಸಂಚಾರಿ ಆರೋಗ್ಯ ಘಟಕದ ವಾಹನ ಗ್ರಾಮಕ್ಕೆ ಬಂದು ಪ್ರದಕ್ಷಿಣೆ ನಡೆಸಿ ಹೋಗಿದ್ದು ನಂತರ ಮಂಗಳವಾರ ಮಧ್ಯಾಹ್ನದ ವೇಳೆಗೆ ಗ್ರಾಮಕ್ಕೆ ನುರಿತ ವೈದ್ಯರಿಲ್ಲದ ಕೇವಲ ಶುಶ್ರುಕಿಯರನ್ನೊಳಗೊಂಡ ತಂಡ ಬೇಕಾದ ಚಿಕಿತ್ಸಾ ಸಾಮಗ್ರಿಗಳನ್ನ,ಔಷಧಿಗಳನ್ನು ತರದೆ ಬರೀ ಒಆರ್ಎಸ್ ಪುಡಿ ಮಾತ್ರ ತಂದು ಚಿಕಿತ್ಸೆ ಕೊಡಲು ಆರಂಭಿಸಿದರು. ಗ್ರಾಮದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ನಿತ್ರಾಣರಾಗಿ ನಡೆಯಲಾಗದೆ ತತ್ತರಿಸಿ ಹೋಗಿದ್ದರು ಸಹ ಏನೂ ತಾರದೇ ಬರಿಗೈಲಿ ಬಂದು ಹೇಗೆ ಚಿಕಿತ್ಸೆ ನೀಡುತ್ತಿರಿ ಎಂದು ಗ್ರಾಮಸ್ಥರು ಅವರು ನೀಡುವ ಚಿಕಿತ್ಸೆ ಬಹಿಷ್ಕರಿಸಿ ಆಕ್ರೋಶ ವ್ಯಕ್ತಪಡಿಸಿದರು.

            ಗ್ರಾಮಸ್ಥರ ಆಕ್ರೋಶಕ್ಕೆ ಮಣಿದ ತಾಲ್ಲೂಕು ವೈದ್ಯಾಧಿಕಾರಿ ಶಿವಕುಮಾರ್ ಸಂಜೆ 5.30ರ ವೇಳೆಗೆ ಒಬ್ಬ ವೈದ್ಯರನ್ನು ಕಳುಹಿಸಿ ಚಿಕಿತ್ಸೆ ಕೊಡಿಸುವುದರ ಜತೆಗೆ ತುರ್ತು ಚಿಕಿತ್ಸೆ ನೀಡಲು 108 ವಾಹನದ ವ್ಯವಸ್ಥೆ ಮಾಡಿದರು. ನಂತರ ಕೆಲ ಮಂದಿಯನ್ನು ಹುಳಿಯಾರು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತು.

          ಸ್ವಚ್ಛತೆಗೆ ಮುಂದಾದ ಗ್ರಾ.ಪಂ : ಚಿಕನ್ ಗುನ್ಯಾ ಉಲ್ಬಣವಾಗುತ್ತಿರುವ ಹಿನ್ನಲೆಯಲ್ಲಿ ಗಾಣಧಾಳು ಗ್ರಾ.ಪಂ ಕಾರ್ಯದರ್ಶಿ ಜ್ಞಾನಮೂರ್ತಿ ಹಾಗೂ ಸಿಬ್ಬಂದಿಯವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದು, ಪ್ರತಿ ಮನೆಗಳಿಗೆ ತೆರಳಿ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುತ್ತಿರುವುದಲ್ಲದೆ, ಬೀದಿಗಳಲ್ಲಿ ಫಾಗಿನ್ ಸಹ ಮಾಡಿದ್ದಾರೆ. ರೋಗ ಉಲ್ಬಣವಾಗುವ ಮುಂಚೆಯೇ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...