ವಿಷಯಕ್ಕೆ ಹೋಗಿ

ತಾಲ್ಲೂಕಿಗೆ ರೈಲು ದೂರವೇ ಉಳಿಯಿತು

   
     ಈ ಬಾರಿಯ ರೈಲ್ವೆ ಬಜೆಟ್ ತಾಲ್ಲೂಕಿನ ಜನತೆಗೆ ನಿರಾಸೆ ಮೂಡಿಸಿದೆ. ಚಳ್ಳಕೆರೆಯಿಂದ ಹಿರಿಯೂರು-ಹುಳಿಯಾರು-ಚಿಕ್ಕನಾಯಕನಹಳ್ಳಿ-ಕೆ.ಬಿ.ಕ್ರಾಸ್-ತುರುವೇಕೆರೆ ಮಾರ್ಗವಾಗಿ ಚನ್ನರಾಯಪಟ್ಟಣ ರೈಲ್ವೆ ಯೋಜನೆ ಮಾರ್ಗ ಸಮೀಕ್ಷೆ ಬಗ್ಗೆ ಈ ಬಾರಿಯ ಬಜೆಟ್ ನಲ್ಲಿ ಪ್ರಸ್ತಾಪವಾಗದಿರುವುದು ತಾಲ್ಲೂಕಿನ ಜನರ ನಿರೀಕ್ಷೆ ಹುಸಿಯಾಗುವಂತೆ ಮಾಡಿದೆ.

 ಹಿಂದಿನ ಯುಪಿಎ ಸರ್ಕಾರದಲ್ಲಿ ಕೇಂದ್ರ ರೈಲ್ವೆ ಸಚಿವರಾಗಿದ್ದ ಕರ್ನಾಟಕದವರೆ ಆಗಿದ್ದ ಮಲ್ಲಿಕಾರ್ಜುನ್ ಖರ್ಗೆ ಇದೇ ವರ್ಷದ ಫೆಬ್ರವರಿಯಲ್ಲಿ ಮಂಡಿಸಿದ್ದ ರೈಲ್ವೆ ಬಜೆಟ್ ನಲ್ಲಿ ಚಳ್ಳಕೆರೆ -ಚನ್ನರಾಯಪಟ್ಟಣ ಮಾರ್ಗ ಸಮೀಕ್ಷೆ ನಡೆಸುವುದಾಗಿ ಘೋಷಣೆ ಮಾಡಿದ್ದರು. ಈ ಮೂಲಕ ಬಹುದಿನದ ನಿರೀಕ್ಷೆಗೆ ಬೆಳಕು ಬಂದಂತಾಗಿತ್ತು. ಅದಕ್ಕೂ ಹಿಂದೆ ಕೇಂದ್ರದಲ್ಲಿ ರೈಲ್ವೆ ಸಚಿವರಾಗಿದ್ದ ಜಾಫರ್ ಷರೀಪ್ ಅವರು ಕೂಡ ಆಗಾಗ್ಗೆ ಭೇಟಿ ನೀಡುತ್ತಿದ್ದ ಸಮಯದಲ್ಲಿ ಈ ಭಾಗಕ್ಕೆ ರೈಲು ಬಿಡುವುದಾಗಿ ಹೇಳುವ ಮೂಲಕ ಈ ಭಾಗದ ಜನರಲ್ಲಿ ಕನಸು ಬಿತ್ತಿದ್ದರು.  

   
ಈ ಭಾಗದ ಆರ್ಥಿಕ ಚಟುವಟಿಕೆಗೆ ಹಾಗೂ ಇಲ್ಲಿನ ಅಭಿವೃದ್ದಿಗೆ ಪೂರಕವಾಗಿ ಇಂತಹದೊಂದು ಯೋಜನೆ ಬೇಕಾಗಿತ್ತು ಕೂಡ. ಈ ಮಾರ್ಗವಾಗಿ ಸಾಂಸ್ಕೃತಿಕ ನಗರಿ ಮೈಸೂರು ಸುತ್ತಮುತ್ತ ಸುಲಭವಾಗಿ ತಲುಪಲು ಸಹಕಾರಿಯಾಗುತ್ತಿತ್ತು ಎಂಬುದು ಈ ಭಾಗದ ಜನರ ಅಂಬೋಣ.

ಅದಕ್ಕೆ ತಕ್ಕಂತೆ ಈ ಬಾರಿ ಲೋಕಸಭಾ ಚುನಾವಣಾ ಸಮಯದಲ್ಲಿ ಈ ವಿಚಾರಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು.ಬಿಜೆಪಿಯ ಮಾಜಿ ಸಂಸದ ಜಿ.ಎಸ್.ಬಸವರಾಜು ರೈಲ್ವೆ ಯೋಜನೆ ಸಾಕಾರಗೊಳ್ಳಲು ತಾವು ಬಹುವಾಗಿ ಶ್ರಮಿಸಿದ್ದು, ಅಧಿಕಾರಿಗಳು ಮಾರ್ಗ ಸಮೀಕ್ಷೆಗೆ ಹಸಿರು ನಿಶಾನೆ ತೋರಿಸಿದ್ದಾರೆ ಎಂದಿದ್ದರು. ಹಾಲಿ ಸಂಸದರಾಗಿರುವ ಮುದ್ದಹನುಮೇಗೌಡರೂ ಸಹ ಬಸವರಾಜು ಅವರ ಯೋಜನೆಯನ್ನು ತಾವು ಮುಂದುವರಿಸುವುದಾಗಿ ಹಾಗೂ ಈ ಕುರಿತು ಶೀಘ್ರವೇ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾರ್ಗ ಸಮೀಕ್ಷೆ ಅನುಮೋದನೆಗೆ  ಒಪ್ಪಿಸುವುದಾಗಿ ತಿಳಿಸಿದ್ದರು.

ಯೋಜನೆ ಕುರಿತು ಹೀಗೊಂದು ಮಾತು ಹೊರಬಿದ್ದದ್ದೇ ತಡ ಈ ಭಾಗದ ರೈತರಿಗೆ ಆತಂಕದೂಂದಿಗೆ, ಸ್ವಲ್ಪಮಟ್ಟಿನ ನೆಮ್ಮದಿಕೂಡ ಮನೆ ಮಾಡಿತ್ತು. ರೈಲು ಹೋಗುವ ಮಾರ್ಗ ಯಾವುದಿರಬಹುದು ಹಾಗೂ ಭೂಸ್ವಾಧೀನ ಮಾಡಿಕೊಂಡಲ್ಲಿ ದೊರಕುವ ಪರಿಹಾರ ಎಷ್ಟಿರಬಹುದೆಂಬ ಚರ್ಚೆಗೆ ಕೂಡ ಆಸ್ಪದವಾಗಿತ್ತು. ಯೋಜನೆ ಬಗ್ಗೆ ಎಲ್ಲರಿಗೂ ಬೆಟ್ಟದಷ್ಟು ನಿರೀಕ್ಷೆಯಿದ್ದು ಇದರಿಂದ ಭೂಮಿಯ ಬೆಲೆ ಹೆಚ್ಚಳವಾಗುವ ನಿರೀಕ್ಷೆಯಿತ್ತು.


ಒಟ್ಟಾರೆ ಈ ಬಾರಿಯ ಬಜೆಟ್ ನಲ್ಲಿ ಈ ಮಾರ್ಗದ ರೈಲು ಸಮೀಕ್ಷೆ ಬಗ್ಗೆ ಪ್ರಸ್ತಾಪವಾಗದಿರುವುದು ಎಲ್ಲರ ನಿರೀಕ್ಷೆ ಹುಸಿಯಾದಂತಾಗಿದೆ.


ಪ್ರಸ್ತುತ ಸದಾನಂದಗೌಡರು ಮಂಡಿಸಿರುವ ಬಜೆಟ್ ಇದೇ ಅಂತಿಮವಲ್ಲ ಇನ್ನು ಯೋಜನೆಗಳಿವೆ ಎಂದಿರುವ ಸಚಿವರು ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರು ಪೂರ್ವಕ ಬಜೆಟ್ ನಲ್ಲಿ ಹೇಳಿದ್ದ ಯೋಜನೆಗಳನ್ನು ಮುಂದುವರೆಸುವುದಾಗಿ ಹೇಳಿರುವುದು ಇನ್ನು ಈ ಭಾಗದ ಜನರ ಆಶಾಭಾವನೆ ಜೀವಂತವಾಗಿ ಉಳಿಯುವಂತೆ ಮಾಡಿದೆ.

ಬಜೆಟ್ ಬಗ್ಗೆ ಪ್ರತಿಕ್ರಿಯೆ

ಹೊಸ ಮಾರ್ಗದ ಸಮೀಕ್ಷೆಯಲ್ಲಿ ಕೇವಲ ಐದು ಮಾರ್ಗಗಳನ್ನು ಮಾತ್ರ ಹೇಳಿದ್ದು ಅದರಲ್ಲಿ ಈ ಭಾಗದ ರೈತರ ಬಹುನಿರೀಕ್ಷಿತ ಚಳ್ಳಕೆರೆ-ಚನ್ನರಾಯಪಟ್ಟಣ ಮಾರ್ಗವನ್ನು ಪ್ರಸ್ತಾವಿಸದಿರುವುದು ನಿರಾಸೆ ಮೂಡಿಸಿದೆ---- ಕೆಂಕೆರೆಸತೀಶ್ , ಹಸಿರುಸೇನೆ ರಾಜ್ಯ ಸಂಚಾಲಕ.

 ಈ ಬಾರಿಯ ಬಜೆಟ್ ಮಂಡನೆಯಲ್ಲಿ ಬಹು ನಿರೀಕ್ಷಿತ ಹುಳಿಯಾರು ಮಾರ್ಗವಾಗಿ ಚಳ್ಳಕೆರೆ-ಚನ್ನರಾಯಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರೈಲು ಸಂಚಾರದ ಬಗ್ಗೆ ಪ್ರಸ್ತಾಪಿಸದಿರುವುದು ಗೊಂದಲವುಂಟುಮಾಡಿದೆ. ಇಂದಿನ ಯೋಜನೆಗಳನ್ನು ಮುಂದುವರಿಸಿದಲ್ಲಿ ಸಮೀಕ್ಷಾ ಕಾರ್ಯ ಕೈಗೊಳ್ಳುವ ನಿರೀಕ್ಷೆಯಿದೆ.-- ರಂಗನಕೆರೆ ಮಹೇಶ್ , ಕೃಷಿಕರು.
ಚಳ್ಳಕೆರೆ-ಚನ್ನರಾಯಪಟ್ಟಣ ರೈಲು ಮಾರ್ಗದ ಸಮೀಕ್ಷೆ ನಡೆದು ರೈಲು ಸಂಚರಿಸಿದರೆ ನಮ್ಮ ಭಾಗಕ್ಕು ಹೆಚ್ಚು ಅನುಕೂಲವಾಗುತ್ತದೆ. ಹಿಂದಿನ ಬಜೆಟ್ ನ ಪ್ರಸ್ತಾವನೆಯನ್ನು ಮುಂದುವರಿಸಿದಲ್ಲಿ ಈ ಭಾಗದ ಆರ್ಥಿಕ ಅಭಿವೃದ್ದಿಗೆ ಪೂರಕವಾಗಲಿದೆ.......ಕೆಂಕೆರೆ ನವೀನ್,ತಾ.ಪಂ.ಮಾಜಿ ಅಧ್ಯಕ್ಷ.








ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...