ವಿಷಯಕ್ಕೆ ಹೋಗಿ

ತಾಲ್ಲೂಕಿಗೆ ರೈಲು ದೂರವೇ ಉಳಿಯಿತು

   
     ಈ ಬಾರಿಯ ರೈಲ್ವೆ ಬಜೆಟ್ ತಾಲ್ಲೂಕಿನ ಜನತೆಗೆ ನಿರಾಸೆ ಮೂಡಿಸಿದೆ. ಚಳ್ಳಕೆರೆಯಿಂದ ಹಿರಿಯೂರು-ಹುಳಿಯಾರು-ಚಿಕ್ಕನಾಯಕನಹಳ್ಳಿ-ಕೆ.ಬಿ.ಕ್ರಾಸ್-ತುರುವೇಕೆರೆ ಮಾರ್ಗವಾಗಿ ಚನ್ನರಾಯಪಟ್ಟಣ ರೈಲ್ವೆ ಯೋಜನೆ ಮಾರ್ಗ ಸಮೀಕ್ಷೆ ಬಗ್ಗೆ ಈ ಬಾರಿಯ ಬಜೆಟ್ ನಲ್ಲಿ ಪ್ರಸ್ತಾಪವಾಗದಿರುವುದು ತಾಲ್ಲೂಕಿನ ಜನರ ನಿರೀಕ್ಷೆ ಹುಸಿಯಾಗುವಂತೆ ಮಾಡಿದೆ.

 ಹಿಂದಿನ ಯುಪಿಎ ಸರ್ಕಾರದಲ್ಲಿ ಕೇಂದ್ರ ರೈಲ್ವೆ ಸಚಿವರಾಗಿದ್ದ ಕರ್ನಾಟಕದವರೆ ಆಗಿದ್ದ ಮಲ್ಲಿಕಾರ್ಜುನ್ ಖರ್ಗೆ ಇದೇ ವರ್ಷದ ಫೆಬ್ರವರಿಯಲ್ಲಿ ಮಂಡಿಸಿದ್ದ ರೈಲ್ವೆ ಬಜೆಟ್ ನಲ್ಲಿ ಚಳ್ಳಕೆರೆ -ಚನ್ನರಾಯಪಟ್ಟಣ ಮಾರ್ಗ ಸಮೀಕ್ಷೆ ನಡೆಸುವುದಾಗಿ ಘೋಷಣೆ ಮಾಡಿದ್ದರು. ಈ ಮೂಲಕ ಬಹುದಿನದ ನಿರೀಕ್ಷೆಗೆ ಬೆಳಕು ಬಂದಂತಾಗಿತ್ತು. ಅದಕ್ಕೂ ಹಿಂದೆ ಕೇಂದ್ರದಲ್ಲಿ ರೈಲ್ವೆ ಸಚಿವರಾಗಿದ್ದ ಜಾಫರ್ ಷರೀಪ್ ಅವರು ಕೂಡ ಆಗಾಗ್ಗೆ ಭೇಟಿ ನೀಡುತ್ತಿದ್ದ ಸಮಯದಲ್ಲಿ ಈ ಭಾಗಕ್ಕೆ ರೈಲು ಬಿಡುವುದಾಗಿ ಹೇಳುವ ಮೂಲಕ ಈ ಭಾಗದ ಜನರಲ್ಲಿ ಕನಸು ಬಿತ್ತಿದ್ದರು.  

   
ಈ ಭಾಗದ ಆರ್ಥಿಕ ಚಟುವಟಿಕೆಗೆ ಹಾಗೂ ಇಲ್ಲಿನ ಅಭಿವೃದ್ದಿಗೆ ಪೂರಕವಾಗಿ ಇಂತಹದೊಂದು ಯೋಜನೆ ಬೇಕಾಗಿತ್ತು ಕೂಡ. ಈ ಮಾರ್ಗವಾಗಿ ಸಾಂಸ್ಕೃತಿಕ ನಗರಿ ಮೈಸೂರು ಸುತ್ತಮುತ್ತ ಸುಲಭವಾಗಿ ತಲುಪಲು ಸಹಕಾರಿಯಾಗುತ್ತಿತ್ತು ಎಂಬುದು ಈ ಭಾಗದ ಜನರ ಅಂಬೋಣ.

ಅದಕ್ಕೆ ತಕ್ಕಂತೆ ಈ ಬಾರಿ ಲೋಕಸಭಾ ಚುನಾವಣಾ ಸಮಯದಲ್ಲಿ ಈ ವಿಚಾರಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು.ಬಿಜೆಪಿಯ ಮಾಜಿ ಸಂಸದ ಜಿ.ಎಸ್.ಬಸವರಾಜು ರೈಲ್ವೆ ಯೋಜನೆ ಸಾಕಾರಗೊಳ್ಳಲು ತಾವು ಬಹುವಾಗಿ ಶ್ರಮಿಸಿದ್ದು, ಅಧಿಕಾರಿಗಳು ಮಾರ್ಗ ಸಮೀಕ್ಷೆಗೆ ಹಸಿರು ನಿಶಾನೆ ತೋರಿಸಿದ್ದಾರೆ ಎಂದಿದ್ದರು. ಹಾಲಿ ಸಂಸದರಾಗಿರುವ ಮುದ್ದಹನುಮೇಗೌಡರೂ ಸಹ ಬಸವರಾಜು ಅವರ ಯೋಜನೆಯನ್ನು ತಾವು ಮುಂದುವರಿಸುವುದಾಗಿ ಹಾಗೂ ಈ ಕುರಿತು ಶೀಘ್ರವೇ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾರ್ಗ ಸಮೀಕ್ಷೆ ಅನುಮೋದನೆಗೆ  ಒಪ್ಪಿಸುವುದಾಗಿ ತಿಳಿಸಿದ್ದರು.

ಯೋಜನೆ ಕುರಿತು ಹೀಗೊಂದು ಮಾತು ಹೊರಬಿದ್ದದ್ದೇ ತಡ ಈ ಭಾಗದ ರೈತರಿಗೆ ಆತಂಕದೂಂದಿಗೆ, ಸ್ವಲ್ಪಮಟ್ಟಿನ ನೆಮ್ಮದಿಕೂಡ ಮನೆ ಮಾಡಿತ್ತು. ರೈಲು ಹೋಗುವ ಮಾರ್ಗ ಯಾವುದಿರಬಹುದು ಹಾಗೂ ಭೂಸ್ವಾಧೀನ ಮಾಡಿಕೊಂಡಲ್ಲಿ ದೊರಕುವ ಪರಿಹಾರ ಎಷ್ಟಿರಬಹುದೆಂಬ ಚರ್ಚೆಗೆ ಕೂಡ ಆಸ್ಪದವಾಗಿತ್ತು. ಯೋಜನೆ ಬಗ್ಗೆ ಎಲ್ಲರಿಗೂ ಬೆಟ್ಟದಷ್ಟು ನಿರೀಕ್ಷೆಯಿದ್ದು ಇದರಿಂದ ಭೂಮಿಯ ಬೆಲೆ ಹೆಚ್ಚಳವಾಗುವ ನಿರೀಕ್ಷೆಯಿತ್ತು.


ಒಟ್ಟಾರೆ ಈ ಬಾರಿಯ ಬಜೆಟ್ ನಲ್ಲಿ ಈ ಮಾರ್ಗದ ರೈಲು ಸಮೀಕ್ಷೆ ಬಗ್ಗೆ ಪ್ರಸ್ತಾಪವಾಗದಿರುವುದು ಎಲ್ಲರ ನಿರೀಕ್ಷೆ ಹುಸಿಯಾದಂತಾಗಿದೆ.


ಪ್ರಸ್ತುತ ಸದಾನಂದಗೌಡರು ಮಂಡಿಸಿರುವ ಬಜೆಟ್ ಇದೇ ಅಂತಿಮವಲ್ಲ ಇನ್ನು ಯೋಜನೆಗಳಿವೆ ಎಂದಿರುವ ಸಚಿವರು ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರು ಪೂರ್ವಕ ಬಜೆಟ್ ನಲ್ಲಿ ಹೇಳಿದ್ದ ಯೋಜನೆಗಳನ್ನು ಮುಂದುವರೆಸುವುದಾಗಿ ಹೇಳಿರುವುದು ಇನ್ನು ಈ ಭಾಗದ ಜನರ ಆಶಾಭಾವನೆ ಜೀವಂತವಾಗಿ ಉಳಿಯುವಂತೆ ಮಾಡಿದೆ.

ಬಜೆಟ್ ಬಗ್ಗೆ ಪ್ರತಿಕ್ರಿಯೆ

ಹೊಸ ಮಾರ್ಗದ ಸಮೀಕ್ಷೆಯಲ್ಲಿ ಕೇವಲ ಐದು ಮಾರ್ಗಗಳನ್ನು ಮಾತ್ರ ಹೇಳಿದ್ದು ಅದರಲ್ಲಿ ಈ ಭಾಗದ ರೈತರ ಬಹುನಿರೀಕ್ಷಿತ ಚಳ್ಳಕೆರೆ-ಚನ್ನರಾಯಪಟ್ಟಣ ಮಾರ್ಗವನ್ನು ಪ್ರಸ್ತಾವಿಸದಿರುವುದು ನಿರಾಸೆ ಮೂಡಿಸಿದೆ---- ಕೆಂಕೆರೆಸತೀಶ್ , ಹಸಿರುಸೇನೆ ರಾಜ್ಯ ಸಂಚಾಲಕ.

 ಈ ಬಾರಿಯ ಬಜೆಟ್ ಮಂಡನೆಯಲ್ಲಿ ಬಹು ನಿರೀಕ್ಷಿತ ಹುಳಿಯಾರು ಮಾರ್ಗವಾಗಿ ಚಳ್ಳಕೆರೆ-ಚನ್ನರಾಯಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರೈಲು ಸಂಚಾರದ ಬಗ್ಗೆ ಪ್ರಸ್ತಾಪಿಸದಿರುವುದು ಗೊಂದಲವುಂಟುಮಾಡಿದೆ. ಇಂದಿನ ಯೋಜನೆಗಳನ್ನು ಮುಂದುವರಿಸಿದಲ್ಲಿ ಸಮೀಕ್ಷಾ ಕಾರ್ಯ ಕೈಗೊಳ್ಳುವ ನಿರೀಕ್ಷೆಯಿದೆ.-- ರಂಗನಕೆರೆ ಮಹೇಶ್ , ಕೃಷಿಕರು.
ಚಳ್ಳಕೆರೆ-ಚನ್ನರಾಯಪಟ್ಟಣ ರೈಲು ಮಾರ್ಗದ ಸಮೀಕ್ಷೆ ನಡೆದು ರೈಲು ಸಂಚರಿಸಿದರೆ ನಮ್ಮ ಭಾಗಕ್ಕು ಹೆಚ್ಚು ಅನುಕೂಲವಾಗುತ್ತದೆ. ಹಿಂದಿನ ಬಜೆಟ್ ನ ಪ್ರಸ್ತಾವನೆಯನ್ನು ಮುಂದುವರಿಸಿದಲ್ಲಿ ಈ ಭಾಗದ ಆರ್ಥಿಕ ಅಭಿವೃದ್ದಿಗೆ ಪೂರಕವಾಗಲಿದೆ.......ಕೆಂಕೆರೆ ನವೀನ್,ತಾ.ಪಂ.ಮಾಜಿ ಅಧ್ಯಕ್ಷ.








ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.