ವಿಷಯಕ್ಕೆ ಹೋಗಿ

ಮದ್ಯದಂಗಡಿ ಸ್ಥಳಾಂತರಿಸಲು ಒತ್ತಾಯ

          ಅಬ್ಕಾರಿ ನಿಯಮದಲ್ಲಿನ ಒಂದೇ ಒಂದು ಅಂಶ ಹೇಗೆ ಸಾರ್ವವಜನಿಕರ ಬವಣೆಗೆ ಕಾರಣವಾಗಿದೆ ಎನ್ನುವುದಕ್ಕೆ ಉತ್ತಮ ಉದಾಹರಣೆ ಪಟ್ಟಣದ ಹುಳಿಯಾರಮ್ಮ ದೇವಸ್ಥಾನದ ಎದುರಿನ ಕೋ-ಅಪರೇಟೀವ್ ಸೊಸೈಟಿಯ ಮಳಿಗೆಯಲ್ಲಿರುವ ಮದ್ಯದಂಗಡಿಯ ವಿವಾದ.
ಹುಳಿಯಾರಿನ ಹುಳಿಯಾರಮ್ಮ ದೇವಸ್ಥಾನದ ಎದುರಿನ ಕೋ-ಅಪರೇಟೀವ್ ಸೊಸೈಟಿಯ ಮಳಿಗೆಯಲ್ಲಿನ ವಿವಾದಕ್ಕೀಡಾಗಿರುವ ಮದ್ಯದಂಗಡಿ.
           ಹೌದು,ದೇವಾಲಯಗಳ ಭಕ್ತರ ಹಾಗೂ ಸಾರ್ವಜನಿಕರ ನೆಮ್ಮದಿಗೆ ಭಂಗತಂದಿರುವ ಶ್ರೀನಿವಾಸ ವೈನ್ಸ್ ಆಕ್ಷೇಪಣಾರ್ಹ ಸ್ಥಳದಲ್ಲಿದ್ದರೂ ಕೂಡ ಸ್ಥಳಾಂತರಗೊಳಿಸದೆ ಕಾನೂನು ನಿಯಮಗಳಲ್ಲಿನ ಒಂದಂಶವನ್ನೆ ಎತ್ತಿಹಿಡಿದು ಸನ್ನದುದಾರರಿಗೆ ಅವಕಾಶ ಕಲ್ಪಿಸುತ್ತಾ ಬಂದಿರುವುದು ಸಮಸ್ಯೆಗೆ ಕಾರಣವಾಗಿದೆ
      ಶತಮಾನ ಪೂರೈಸಿರುವ ಕೋ-ಅಪರೇಟೀವ್ ಸೊಸೈಟಿಗೆ ಸೇರಿದ ಮಳಿಗೆಯಲ್ಲಿ ಎನ್.ಜಿ.ನಾಗರಾಜು ಅವರ ರಂಗನಾಥ ಲಿಕ್ಕರ್ ಶಾಪ್ ಯಿದ್ದು ಜನನಿಬಿಡ ಪ್ರದೇಶದಲ್ಲಿರುವ ಇದನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ಇದನ್ನು ಸ್ಥಳಾಂತರಿಸಬೇಕೆಂಬುದು ದೇವಾಲಗಳ ಸಮಿತಿಯವರು ಹಾಗೂ ವಿವಿಧ ಸಂಘಟನೆಗಳ ಒತ್ತಾಯವಾಗಿತ್ತು. ಈ ಮದ್ಯದಂಗಡಿಗೆ ಗ್ರಾಮದೇವತೆ ಹುಳಿಯಾರಮ್ಮ ದೇವಾಲಯ 45ಮೀ ಅಂತರದಲ್ಲಿದ್ದು , 159 ಮೀ ದೂರದಲ್ಲಿ ಕೆಂಚಮ್ಮದೇವಿ ದೇವಾಲಯ,101 ಮೀ ದೂರದಲ್ಲಿ ಬೀರಲಿಂಗೇಶ್ವರಸ್ವಾಮಿ ಸನ್ನಿಧಿ,98 ಮೀ ಅಂತರದಲ್ಲಿ ರಂಗನಾಥಸ್ವಾಮಿ ದೇವಾಲಯಗಳಿವೆ.ಮದ್ಯದ ಅಂಗಡಿಯ ಪಕ್ಕದ ಕಟ್ಟಡದಲ್ಲಿ ಕಂಪ್ಯೂಟರ್ ತರಬೇತಿ ಕೇಂದ್ರ ಹಾಗೂ ಆಸ್ಪತ್ರೆಯಿದ್ದು, ವಾಣಿಜ್ಯ ಸ್ಥಳವಾದ ಈ ಜಾಗದಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವುದರಿಂದ ಇದನ್ನು ಮುಂದಿನ ಅವಧಿಗೆ ನವೀಕರಿಸದೆ ಸ್ಥಳಾಂತರಿಸಬೇಕೆಂದು ಕಾನೂನು ಹೋರಾಟ ನಡೆದಿತ್ತು.
         ನಿಯಮ: ಅಬಕಾರಿ ಸನ್ನದುಗಳ ನಿಯಮದಂತೆ ಸದರಿ ವೈನ್ ಶಾಪ್ ದೇವಾಲಯದಿಂದ ನೂರು ಮೀಟರ್ ಅಂತರದಲ್ಲಿದ್ದರೆ ನಡೆಸಲು ಅನುಮತಿಯಿದ್ದು,ನೂರು ಮೀಟರ್ ಅಂತರಕ್ಕು ಕಡಿಮೆಯಿದ್ದರೆ ಬೇರೊಂದು ನೀರಾಕ್ಷೇಪಣ ಸ್ಥಳಕ್ಕೆ ಸ್ಥಳಾಂತರಿಸಬೇಕಾಗುತ್ತದೆ.
      ಆಗಿರುವುದೇನು: ಪಕ್ಕದಲ್ಲೇ ಇರುವ ಹುಳಿಯಾರಮ್ಮ ದೇವಾಲಯ ಮದ್ಯದಂಗಡಿಯಿಂದ 45ಮೀಟರ್ ಅಂತರದಲ್ಲಿದ್ದು ಹಾಗೂ ನಿಯಮಾನುಸಾರ ಸನ್ನದ್ದನ್ನು ರದ್ದು ಪಡಿಸಬೇಕಾಗುತ್ತದೆ. ಆದರೆ ತಕರಾರು ತೆಗೆದಿರುವ ದೇವಾಲಯ ಸಮಿತಿಯು ನಿಯಮಾನುಸಾರ ನೋಂದಣಿಯಾಗಿಲ್ಲ,ಆದ್ದರಿಂದ ಇದಕ್ಕೆ ಮಾನ್ಯತೆಯಿಲ್ಲ ಎಂದಿರುವ ಇಲಾಖೆಯು ಮುಜುರಾಯಿ ಇಲಾಖೆಗೆ ಒಳಪಡುವ ರಂಗನಾಥಸ್ವಾಮಿ ದೇವಾಲಯದ ಅರ್ಜಿಯನ್ನು ಮಾತ್ರ ಪರಿಗಣಿಸಿದೆ. ರಂಗನಾಥಸ್ವಾಮಿ ದೇವಾಲಯಕ್ಕು ಅಂಗಡಿಗೂ 100 ಮೀಟರ್ ಗೂ ಹೆಚ್ಚಿದ್ದು ಮದ್ಯದ ಅಂಗಡಿಗೆ ಅವಕಾಶಕೊಡಿ ಎಂಬುದು ಸನ್ನದುದಾರರ ಅಹವಾಲಾಗಿದೆ.
ಹುಳಿಯಾರಮ್ಮ ಹಾಗೂ ಬೀರಲಿಂಗೇಶ್ವರ ದೇವಾಲಯ ಕಡೆಗಣಿಸಿರುವ ಇಲಾಖೆಯ ಕ್ರಮ ಸನ್ನದುದಾರರ ಹಿತಕಾಯುವ ಅಡ್ಡದಾರಿಯಾಗಿದೆ ಎಂದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.
      ಇದರ ಮುಂದುವರಿದ ಭಾಗವಾಗಿ ಸಮಿತಿಯ ಸದಸ್ಯರುಗಳು ಅಬ್ಕಾರಿ ಸಚಿವರನ್ನು ಹಾಗೂ ಆಯುಕ್ತರನ್ನು ಭೇಟಿ ಮಾಡಿ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದರ ಹಿನ್ನಲೆಯಲ್ಲಿ ಅರ್ಜಿದಾರರ ಸಮ್ಮುಖದಲ್ಲಿ ಮತ್ತೊಮ್ಮೆ ಸ್ಥಳ ಪರೀಕ್ಷೆ ನಡಿಸಿ ಮರುಆಳತೆ ಮಾಡುವಂತೆ ಅಬಕಾರಿ ಉಪಆಯುಕ್ತರಿಗೆ ಸೂಚಿಸಲಾಗಿದ್ದು ಈ ಪ್ರಕಾರ ಮಂಗಳವಾರದಂದು ಎಲ್ಲಾ ಅರ್ಜಿದಾರರು ಹಾಗೂ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿರುವಂತೆ ಸೂಚಿಸಲಾಗಿದೆ.
ಹುಳಿಯಾರಿನ ಕೋ-ಅಪರೇಟೀವ್ ಸೊಸೈಟಿಯ ಮಳಿಗೆಯಲ್ಲಿನ ಮದ್ಯದಂಗಡಿಯನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಸಂಘಸಂಸ್ಥೆಯವರು ಅಬಕಾರಿ ಸಚಿವರಿಗೆ ಮನವಿ ಸಲ್ಲಿಸಿರುವುದು.

          ಮದ್ಯದಂಗಡಿ ಪರವಾನಿಗೆಗೆ ಕೇವಲ ಎರಡು ಮೀಟರ್ ಆಳತೆ ವ್ಯತ್ಯಾಸವಿದ್ದು , ಆಳತೆಯನ್ನು ಯಾವ ಭಾಗದಿಂದ ಮತ್ತು ಹೇಗೆ ಮಾಡುತ್ತಾರೆಂಬುದರ ಮೇಲೆ ಮದ್ಯದಂಗಡಿ ನಡೆಯುತ್ತದೊ , ಇಲ್ಲವೊ ಎಂಬುದು ತಿರ್ಮಾನವಾಗಲಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.